ಮಕ್ಕಳ ಮೇಲೆ ಪೋಷಕರು ಒತ್ತಡ ಹೇರದಿರಿ: ನಂದಗಾವಿ

ಯುವ ಸಮೂಹ ದೇಶದ ಪ್ರಗತಿಗೆ ಶ್ರಮಿಸಿದರೆ ಮಾನವ ಸಂಪನ್ಮೂಲ ಸದ್ಬಳಕೆಯಾಗಲು ಸಾಧ್ಯ: ಅರುಣಾ ನ್ಯೂಟನ್‌

Team Udayavani, Jul 14, 2019, 3:13 PM IST

14-JULY-38

ಚಿತ್ರದುರ್ಗ: ನಗರದ ಎಸ್‌ಆರ್‌ಎಸ್‌ ಪಿಯು ಕಾಲೇಜಿನಲ್ಲಿ 'ಸಾಧಕರೊಂದಿಗೆ ಸಂವಾದ' ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ: ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸುವುದು ಅಪರೂಪ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಲಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಬಿ. ನಂದಗಾವಿ ಹೇಳಿದರು.

ನಗರದ ಎಸ್‌ಆರ್‌ಎಸ್‌ ಪಿಯು ಕಾಲೇಜು ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪೋಷಕರು ಮಕ್ಕಳಿಗೆ ಬರೀ ಇಂಜಿನಿಯರ್‌, ಮೆಡಿಕಲ್ ಆಯ್ಕೆಗಳನ್ನು ಮಾತ್ರ ನೀಡದೆ, ಮಕ್ಕಳು ಇಷ್ಟ ಪಡುವೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಬೇಕು ಎಂದರು.

ಬೆಂಗಳೂರಿನ ಇನ್ಫೊಧೀಸಿಸ್‌ ಸಂಸ್ಥೆಯ ಉಪಾಧ್ಯಕ್ಷೆ ಅರುಣಾ ಸಿ. ನ್ಯೂಟನ್‌ ಮಾತನಾಡಿ, ಭಾರತದಲ್ಲಿ ಜನಸಂಖ್ಯೆ ಹೆಚ್ಚಿರುವುದರಿಂದ ತೀವ್ರ ಸ್ಪರ್ಧೆ ಉಂಟಾಗಿದೆ. ಮಕ್ಕಳು ಸ್ಪರ್ಧೆ ಎದುರಿಸಿ ಸಾಧನೆ ಮಾಡಬೇಕು. ಅದಕ್ಕಾಗಿ ವಿದ್ಯಾರ್ಥಿಗಳು ಅಧ್ಯಯನದಲ್ಲಿ ತೊಡಗಬೇಕು. ವಿಶ್ವದಲ್ಲಿ ಬೇರೆ ದೇಶಗಳಿಂತಲೂ ಹೆಚ್ಚು ಯುವ ಜನತೆಯನ್ನು ಭಾರತ ಹೊಂದಿದೆ. ಅವರಿಂದ ದೇಶದ ಪ್ರಗತಿ ಹೆಚ್ಚಾಗಬೇಕಿದೆ. ಆಗ ಮಾತ್ರ ಹೆಚ್ಚಾದ ಜನಸಂಖ್ಯೆ ದೇಶಕ್ಕೆ ಮಾರಕವಾಗದೆ ಪೂರಕವಾಗಬಲ್ಲದು ಎಂದು ಅಭಿಪ್ರಾಯಪಟ್ಟರು.

ಇನ್ಫೋಸಿಸ್‌ ಇಂಜಿನಿಯರ್‌ ಬಿ. ಮಹೇಶ್‌ಕುಮಾರ್‌ ಮಾತನಾಡಿ, ಹಣಕ್ಕಿಂತ ಗೌರವಕ್ಕೆ ಹೆಚ್ಚು ಮಹತ್ವ ನೀಡಿದ್ದರಿಂದ ನಾರಾಯಣಮೂರ್ತಿ ಅವರಿಗೆ ಇಷ್ಟು ಸಾಧನೆ ಮಾಡಲು ಸಾಧ್ಯವಾಯಿತು. ಎಸ್‌ಆರ್‌ ಎಸ್‌ ಕಾಲೇಜು ನೈತಿಕ ಮೌಲ್ಯ ಪಾಲಿಸುತ್ತಿದ್ದು, ಇಂತಹ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿರುವ ಮಕ್ಕಳ ಸಾಧನೆಯಿಂದ ಪೋಷಕರು ಖುಷಿ ಪಡಬೇಕು ಎಂದರು.

ಕಾಲೇಜು ಪ್ರಾಂಶುಪಾಲ ಈ. ಗಂಗಾಧರ ಮಾತನಾಡಿ, ಪದವಿಪೂರ್ವ ಶಿಕ್ಷಣ ಎನ್ನುವುದು ಎರಡು ವರ್ಷಗಳ ಅಧ್ಯಯನ ಎನ್ನುವುದಕ್ಕಿಂತ ಹದಿನೇಳು ತಿಂಗಳ ಅವಯ ಅಭ್ಯಾಸ. ಕಡಿಮೆ ಸಮಯದಲ್ಲಿ ನಿಮ್ಮ ಸ್ಪರ್ಧಾತ್ಮಕ ಜೀವನವನ್ನ ಹೇಗೆ ನೆಲೆಗೊಳಿಸಿಕೊಳ್ಳುವಿರಿ ಎಂಬ ಪ್ರಶ್ನೆ ನಿಮ್ಮ ಮುಂದಿದೆ. ಹಾಗಾಗಿ ಈ ಪ್ರಶ್ನೆಗೆ ನೀವೇ ಉತ್ತರ ಕಂಡುಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಸಂಸ್ಥೆಯ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಾಧಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಪ್ರತಿ ವರ್ಷ ಆಯೋಜಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಇದರಿಂದ ಸ್ಫೂರ್ತಿ ದೊರೆಯಲೆಂಬ ಮಹದಾಸೆ. ಇನ್ಫೊಧೀಸಿಸ್‌ನಂತಹ ದೊಡ್ಡ ಸಂಸ್ಥೆಗಳಿಂದ ಅತಿಥಿಗಳನ್ನು ಆಹ್ವಾನಿಸಿ ಅವರಿಂದ ಸ್ಫೂರ್ತಿದಾಯಕ ಮಾತುಗಳನ್ನಾಡಿಸಿದಾಗ ನಮ್ಮ ವಿದ್ಯಾರ್ಥಿಗಳು ಸಹ ಅವರ ಮಟ್ಟಕ್ಕೆ ಬೆಳೆಯಬಹುದು ಎಂಬುದು ನನ್ನ ಆಸೆ ಎಂದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್‌ ಪಿಯು ಕಾಲೇಜಿನ ವಿದ್ಯಾರ್ಥಿನಿ ಓಲ್ವಿಟಾ ಡಿಸೋಜಾ, ರಾಜ್ಯಕ್ಕೆ ಆರು ಮತ್ತು ಹತ್ತನೇ ರ್‍ಯಾಂಕ್‌ ಪಡೆದ ಕಾಲೇಜಿನ ವಿದ್ಯಾರ್ಥಿಗಳಾದ ತುಳಸಿ ಟಿ., ನೀತಾಪ್ರಸಾದ್‌, ನೀಟ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ತೃತೀಯ ರ್‍ಯಾಂಕ್‌ ಪಡೆದ ಪ್ರಗ್ಯಾ ಮಿತ್ರ, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ರಮ್ಯಾ ಎಚ್.ಎನ್‌., ಅವಿನಾಶ್‌ಕುಮಾರ್‌ ವಿ.,

ಸಿದ್ಧಾರ್ಥ ನಾಯಕ್‌, ಜೆಇಇ ನಾಟಾ ಪರೀಕ್ಷೆಯಲ್ಲಿ ಆಲ್ ಇಂಡಿಯಾ 18ನೇ ರ್‍ಯಾಂಕ್‌ ಗಳಿಸಿದ ಗಗನ್‌ದೀಪ್‌ ಎನ್‌.ಈ. ಹಾಗೂ ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಗಳಿಸಿದ ಒಟ್ಟು 25 ಸಾಧಕರನ್ನು ಸನ್ಮಾನಿಸಲಾಯಿತು.

ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್. ಅಮೋಘ್, ಆಡಳಿತಾಧಿಕಾರಿ ಡಾ| ಟಿ.ಎಸ್‌. ರವಿ, ಸಂಚಾಲಕ ಎಂ.ವಿ. ನಟರಾಜ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.