ಹಳೆ ಪ್ರಕರಣ ಇತ್ಯರ್ಥಕ್ಕೆ ಕ್ರಮ: ನ್ಯಾ| ಓಕಾ

ಹತ್ತು ವರ್ಷಗಳ ಹಿಂದಿನ ಪ್ರಕರಣ ಡಿಸೆಂಬರ್‌ ಅಂತ್ಯಕ್ಕೆ ವಿಲೇವಾರಿ ಮಾಡಲು ಸೂಚನೆ

Team Udayavani, Nov 17, 2019, 1:04 PM IST

17-November-10

ಚಿತ್ರದುರ್ಗ: ಕಾಲಮಿತಿಯಲ್ಲಿ ಹಳೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಆದ್ಯತೆ ನೀಡುತ್ತಿದ್ದು, ಇಡೀ ನ್ಯಾಯಾಂಗ ವ್ಯವಸ್ಥೆ ಇದಕ್ಕೆ ಸಹಕಾರ ನೀಡಬೇಕು ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯಕ್ಕೆ ಶನಿವಾರ ಆಗಮಿಸಿದ್ದ ವೇಳೆ ವಕೀಲರ ಭವನದಲ್ಲಿ ಚಿತ್ರದುರ್ಗ ಬಾರ್‌ ಅಸೋಸಿಯೇಷನ್‌ನಿಂದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಹತ್ತು ವರ್ಷಗಳ ಹಿಂದಿನ ಪ್ರಕರಣಗಳನ್ನು ಡಿಸೆಂಬರ್‌ ಅಂತ್ಯಕ್ಕೆ ವಿಲೇವಾರಿ ಮಾಡಬೇಕು.

ಐದು ವರ್ಷಗಳ ಹಿಂದಿನ ಪ್ರಕರಣಗಳನ್ನು 2020ರ ವರ್ಷಾಂತ್ಯದ ಒಳಗೆ ಇತ್ಯರ್ಥಪಡಿಸಬೇಕು. ಇದಕ್ಕೆ ವಕೀಲರು ಕೂಡ ಸಹಕಾರ ನೀಡಬೇಕು ಎಂದರು. ನ್ಯಾಯಾಂಗ ವ್ಯವಸ್ಥೆಯ ಮೇಲೆ ಜನಸಾಮಾನ್ಯರು ಸಾಕಷ್ಟು ನಂಬಿಕೆ ಇಟ್ಟುಕೊಂಡಿದ್ದಾರೆ. ನ್ಯಾಯಾಂಗ ಇಲಾಖೆಯನ್ನು ಸಬಲಗೊಳಿಸಲು ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ನಾವು ಸಾಮಾನ್ಯ ಜನರಿಗೆ ಉತ್ತರದಾಯಿಗಳಾಗಿರಬೇಕು. ಅವರ ವಿಶ್ವಾಸವನ್ನು ಉಳಿಸಿಕೊಳ್ಳಲು ಶ್ರಮಿಸಬೇಕು ಎಂದು ಕರೆ ನೀಡಿದರು.

ನ. 26 ಸಂವಿಧಾನ ದಿನಾಚರಣೆ. ಈ ಮೂಲಕ ನಾವೆಲ್ಲಾ ಸಂವಿಧಾನದ ಮರು ಪ್ರವೇಶ ಮಾಡಬೇಕಿದೆ. ಸಮಾಜದ ಇತರೆ ವರ್ಗಗಳನ್ನು ಬದಿಗಿಟ್ಟು ನ್ಯಾಯಾಂಗ ವ್ಯವಸ್ಥೆಯಲ್ಲಿರುವ ನಾವುಗಳು ಸಂವಿಧಾನದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ನ್ಯಾಯಾಂಗ ವಿಭಾಗಕ್ಕೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದೆ. ಮೂಲ ಸೌಲಭ್ಯಕ್ಕೆ ಒತ್ತು ನೀಡಲಾಗುತ್ತಿದ್ದು, ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ನ್ಯಾಯಾಂಗದ ಸೌಲಭ್ಯಗಳು ಚೆನ್ನಾಗಿವೆ ಎಂದು ಶ್ಲಾಘಿಸಿದರು. ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಬಹಳ ಸಣ್ಣದು. ಆದ್ದರಿಂದ ಹೊಸ ಕೋರ್ಟ್‌ ಕಾಂಪ್ಲೆಕ್ಸ್‌ ನಿರ್ಮಾಣವಾಗಬೇಕು. ಈಗಾಗಲೇ ಕೌಟುಂಬಿಕ ನ್ಯಾಯಾಲಯ ಮಂಜೂರಾಗಿದ್ದು, ಅದು ಕಾರ್ಯ ನಿರ್ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ವ್ಯಾವಹಾರಿಕ ನ್ಯಾಯಾಲಯವೂ ಬೇಕು ಎಂದು ಚಿತ್ರದುರ್ಗ ಜಿಲ್ಲಾ ವಕೀಲರ ಸಂಘದ ಪರವಾಗಿ ಪಿ.ಎಚ್‌.ಹನುಮಂತರಾಯ ಅವರು ಮನವಿ ಸಲ್ಲಿಸಿದರು.

ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳು ಜಿಲ್ಲಾ ಕೇಂದ್ರದಿಂದ ಸಾಕಷ್ಟು ದೂರದಲ್ಲಿವೆ. ಆದ್ದರಿಂದ ಹೊಳಲ್ಕೆರೆಯಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಹೊಳಲ್ಕೆರೆ ವಕೀಲರ ಸಂಘದ ಪದಾಧಿಕಾರಿಗಳು ಎಂದು ಮನವಿ ಮಾಡಿದರು. ಈ ಮನವಿಗೆ ಪ್ರತಿಕ್ರಿಯಿಸಿದ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರು, ಹೊಸ ಕೋರ್ಟ್‌ ಕಾಂಪ್ಲೆಕ್ಸ್‌ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಜತೆ ಮಾತಕತೆ ನಡೆಸುತ್ತೇವೆ.

ಹೊಳಲ್ಕೆರೆಯಲ್ಲಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ನಿರ್ಮಾಣ ಕುರಿತು ಕೋರ್ಟ್‌ ಕಮಿಟಿ ಪರಿಶೀಲಿಸಿ ವರದಿ ನೀಡಲಿದೆ ಎಂದರು. ಕಾರ್ಯಕ್ರಮದಲ್ಲಿ ಹೈಕೋರ್ಟ್‌ ರಿಜಿಸ್ಟ್ರಾರ್‌ಗಳಾದ ರಾಜೇಂದ್ರ ಎಂ. ಬಾದಾಮಿಕರ್‌, ವೆಂಕಟೇಶ್‌ ನಾಯ್ಕ, ಚಂದ್ರಶೇಖರ ರೆಡ್ಡಿ, ಜಿಲ್ಲಾ ನ್ಯಾಯಾ ಧೀಶ ಎಸ್‌.ವೈ. ವಟವಟಿ, ವಕೀಲರ ಸಂಘದ ಜಿಲ್ಲಾಧ್ಯಕ್ಷ ವಿಜಯಕುಮಾರ್‌, ನ್ಯಾಯಾಧೀಶರಾದ ಹನುಮಂತಪ್ಪ ಆರ್‌ ಬನ್ನಿಕಟ್ಟೆ, ಶಂಕ್ರಪ್ಪ ಬಿ. ಮಾಲಾಶೆಟ್ಟಿ ಸೇರಿದಂತೆ ವಿವಿಧ ನ್ಯಾಯಾಧೀಶರು ನಭಾಗವಹಿಸಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.