ಸರ್ಕಾರಿ ಶಾಲೇಲಿ ಇಂಗ್ಲಿಷ್‌ ಮೀಡಿಯಂ ಸ್ಟಾರ್ಟ್‌

ಬನ್ನಿ ಮಕ್ಕಳೇ, ಶಾಲೆಗೆ ದಾಖಲಾಗಿ | ಎಲ್ಕೆಜಿಯಿಂದಲೇ ಸಿಗಲಿದೆ ಆಂಗ್ಲ ಭಾಷಾ ಶಿಕ್ಷಣ

Team Udayavani, May 29, 2019, 12:53 PM IST

29-May-16

ಚಿತ್ರದುರ್ಗ: ಹೊಸಯಳನಾಡು ಗ್ರಾಮದ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಆಟೋಟ ಸಾಮಗ್ರಿಗಳು

ಚಿತ್ರದುರ್ಗ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯಲು ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಆರಂಭಿಸಿದೆ. ಇದಕ್ಕೆ ಪೋಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗಳಿಗೆ ದಾಖಲು ಮಾಡಲು ಆಸಕ್ತಿ ತೋರಿಸುತ್ತಿದ್ದಾರೆ.

ಕರ್ನಾಟಕ ಪಬ್ಲಿಕ್‌ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡುವುದರ ಜೊತೆಗೆ ಹತ್ತುಹಲವು ಆಟೋಟ, ನಾನಾ ರೀತಿಯ ಕ್ರೀಡೋಪಕರಣಗಳು ಹಾಗೂ ಬಸ್‌ ಸೌಲಭ್ಯವನ್ನೂ ಒದಗಿಸಲಾಗಿದೆ.

ಜಿಲ್ಲೆಯ ಕೆಲವು ಸರ್ಕಾರಿ ಶಾಲೆಗಳಿಗೆ ಸಮುದಾಯದ ಸಹಭಾಗಿತ್ವದಲ್ಲಿ ಹೈಟೆಕ್‌ ಬಸ್‌ ಸೌಲಭ್ಯವನ್ನೂ ನೀಡಲಾಗಿದೆ. ಅಲ್ಲದೆ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಐದಾರು ಎಕರೆಯಷ್ಟು ಕ್ರೀಡಾಂಗಣ ಇದ್ದು ಈ ಜಾಗದಲ್ಲಿ ಎಲ್ಲ ರೀತಿಯ ಆಟೋಟಗಳನ್ನು ಆಡಲು ಅನುಕೂಲ ಕಲ್ಪಿಸಲಾಗಿದೆ.

ಶಿಕ್ಷಕರಿಗೆ ಡಯಟ್ನಿಂದ ತರಬೇತಿ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಜಿಲ್ಲೆಯ 24 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮವನ್ನು ಒಂದನೇ ತರಗತಿಯಿಂದ ಪ್ರಾರಂಭಿಸಲಾಗುತ್ತಿದೆ. ಇದಕ್ಕೆ ಅಗತ್ಯವಾಗಿರುವ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಇದರ ಜೊತೆಯಲ್ಲಿ ಜಿಲ್ಲೆಯ 7 ಕೆಪಿಎಸ್‌ ಶಾಲೆಗಳಲ್ಲಿ ಎಲ್ಕೆಜಿ ಪ್ರಾರಂಭಿಸಲಾಗುತ್ತಿದೆ. ಬಹುತೇಕ ಶಾಲೆಗಳಿಗೆ ಮಕ್ಕಳು ಉತ್ಸಾಹದಿಂದಲೇ ಪ್ರವೇಶ ಪಡೆಯುತ್ತಿದ್ದಾರೆ.

ಎಲ್ಕೆಜಿ ಆರಂಭವಾಗಲಿರುವ ಶಾಲೆಗಳಲ್ಲಿ ಒಬ್ಬ ಶಿಕ್ಷಕ ಮತ್ತು ಶಾಲೆಗೆ ಒಬ್ಬರಂತೆ ಆಯಾ ನೇಮಕ ಮಾಡಿಕೊಳ್ಳಲು ಎಸ್‌ಡಿಎಂಸಿಗೆ ಅವಕಾಶ ನೀಡಲಾಗಿದೆ. ಶಿಕ್ಷಕರು ಮತ್ತು ಆಯಾಗಳ ವೇತನವನ್ನು ಸರ್ಕಾರ ಎಸ್‌ಡಿಎಂಸಿಗೆ ನೀಡಲಿದೆ.

ಆಂಗ್ಲ ಮಾಧ್ಯಮ ಆರಂಭವಾಗುತ್ತಿರುವ ಶಾಲೆಗಳ ತಲಾ ಮೂವರು ಶಿಕ್ಷಕರಿಗೆ ಜಿಲ್ಲಾ ಡಯಟ್ ಸಂಸ್ಥೆ ಈಗಾಗಲೇ ಆಂಗ್ಲ ಮಾಧ್ಯಮದಲ್ಲಿ ಹೇಗೆ ಪಾಠ ಮಾಡಬೇಕು, ಮಕ್ಕಳು ಆಂಗ್ಲ ಮಾಧ್ಯಮದಲ್ಲಿ ಹೇಗೆ ಸಂವಹನ ನಡೆಸಬೇಕು, ಬೋಧನೆ, ಕಲಿಕೆ ಮತ್ತಿತರ ವಿಷಯಗಳ ಕುರಿತು ಸೂಕ್ತ ತರಬೇತಿ ನೀಡಿದೆ. ಇಂಗ್ಲಿಷ್‌ ಮಾಧ್ಯಮದಲ್ಲಿ ಬೋಧಿಸಲು ತರಬೇತಿ ಹೊಂದಿದ ಶಿಕ್ಷಕರನ್ನು ನಿಯೋಜಿಸಲಾಗಿದೆ. ಆಂಗ್ಲ ಮಾಧ್ಯಮದ ಹೊಸ ಪಠ್ಯಪುಸ್ತಕಗಳು ಶೀಘ್ರದಲ್ಲೇ ಸರಬರಾಜಾಗಲಿವೆ. ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಕೊಠಡಿಗಳ ಕೊರತೆ ಇದ್ದರೆ ಹೊಸ ಕೊಠಡಿ ನಿರ್ಮಾಣಕ್ಕೆ ಸರ್ಕಾರ ಅನುದಾನ ನೀಡಲಿದ್ದು, ಇದಕ್ಕಾಗಿ ಪ್ರಸ್ತಾವನೆ ಸಲ್ಲಿಸಲು ಶಿಕ್ಷಣ ಇಲಾಖೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ.

ಎಲ್ಲೆಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ?: ಜಿಲ್ಲೆಯಲ್ಲಿ ಏಳು ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲಾಗುವುದು. ಚಳ್ಳಕೆರೆ ತಾಲೂಕಿನ ಪರಶುರಾಂಪುರ, ಚಿತ್ರದುರ್ಗ ತಾಲೂಕಿನ ಜಂಪಯ್ಯನಹಟ್ಟಿ, ಹಿರಿಯೂರು ತಾಲೂಕಿನ ಮರಡಿಹಳ್ಳಿ ಮತ್ತು ಹೊಸಯಳನಾಡು, ಹೊಸದುರ್ಗ ತಾಲೂಕಿನ ಶ್ರೀರಾಂಪುರ, ಮೊಳಕಾಲ್ಮೂರು ತಾಲೂಕಿನ ಬಿ.ಜಿ. ಕೆರೆ ಹಾಗೂ ಹೊಳಲ್ಕೆರೆ ತಾಲೂಕಿನ ಕಾಶಿಪುರ ಗ್ರಾಮಗಳ ಕೆಪಿಎಸ್‌ ಶಾಲೆಗಳಲ್ಲಿ ಪ್ರಸಕ್ತ ವರ್ಷದಿಂದ ಪೂರ್ವ ಪ್ರಾಥಮಿಕ ಶಾಲೆ (ಎಲ್ಕೆಜಿ) ಆರಂಭಗೊಳ್ಳಲಿದೆ.

ಒಂದನೇ ತರಗತಿಯಿಂದ ಇಂಗ್ಲಿಷ್‌ ಶಿಕ್ಷಣ ಆರಂಭವಾಗುವ ಶಾಲೆಗಳು ಇಂತಿವೆ. ಚಿತ್ರದುರ್ಗ ತಾಲೂಕಿನ ಜಂಪಯ್ಯನಹಟ್ಟಿಯ ಕೆಪಿಎಸ್‌ ಶಾಲೆ, ಕುರುಬರಹಳ್ಳಿ, ಚಿತ್ರದುರ್ಗ ನಗರದ ವಿ.ಪಿ. ಬಡಾವಣೆ ಶಾಲೆ. ಚಳ್ಳಕೆರೆ ತಾಲೂಕಿನ ಗೋಸಿಕೆರೆ, ಕಾಮಸಮುದ್ರ, ಚಳ್ಳಕೆರೆಯ ಬಾಲಕಿಯರ ಹಿ.ಪ್ರಾ ಶಾಲೆ, ಪರಶುರಾಮಪುರ ಕೆಪಿಎಸ್‌ ಶಾಲೆ. ಹೊಸದುರ್ಗ ತಾಲೂಕಿನ ದೇವಪುರ ಪಪೂ ಕಾಲೇಜು, ಶ್ರೀರಾಂಪುರ ಕೆಪಿಎಸ್‌ ಶಾಲೆ, ಹೊಸದುರ್ಗದ ಮಾದರಿ ಹಿ.ಪ್ರಾ ಶಾಲೆ. ಹಿರಿಯೂರು ತಾಲೂಕಿನ ಮರಡಿಹಳ್ಳಿ, ಹೊಸಯಳನಾಡು ಕೆಪಿಎಸ್‌ ಶಾಲೆ, ಯರಬಳ್ಳಿ ಸರ್ಕಾರಿ ಪಪೂ ಕಾಲೇಜು, ಹಿರಿಯೂರು ಕೆಎಸ್‌ಆರ್‌ಟಿ ಬಸ್‌ನಿಲ್ದಾಣ ಬಳಿಯ ಹಿ.ಪ್ರಾ ಶಾಲೆ. ಹೊಳಲ್ಕೆರೆ ತಾಲೂಕಿನ ತೆಲಕಲವಟ್ಟಿ, ರಾಮಗಿರಿ ಹಿ.ಪ್ರಾ ಶಾಲೆ, ಕಾಶಿಪುರದ ಕೆಪಿಎಸ್‌ ಶಾಲೆ, ಹೊಳಲ್ಕೆರೆಯ ಎನ್‌ಇಎಸ್‌ ಕಾಲೋನಿ ಹಿ.ಪ್ರಾ ಶಾಲೆ. ಮೊಳಕಾಲ್ಮೂರು ತಾಲೂಕಿನ ರಾಂಪುರ, ನಾಗಸಮುದ್ರ, ಮೊಳಕಾಲ್ಮೂರು ಸರ್ಕಾರ ಪಪೂ ಕಾಲೇಜು, ಬಿ.ಜಿ. ಕೆರೆಯ ಕೆಪಿಎಸ್‌ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ದೊರೆಯಲಿದೆ. ಆಂಗ್ಲ ಮಾಧ್ಯಮ ಇರುವ ಎಲ್ಲ ಶಾಲೆಗಳಲ್ಲೂ ಕನ್ನಡ ಮಾಧ್ಯಮದ ಪ್ರತ್ಯೇಕ ವಿಭಾಗ ಇರಲಿದೆ. ಮಕ್ಕಳು ತಮಗೆ ಇಷ್ಟ ಬಂದ ಮಾಧ್ಯಮದಲ್ಲಿ ಪ್ರವೇಶ ಪಡೆಯಬಹುದಾಗಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.