ಪರಿಸರ ಸಂರಕ್ಷಣೆಗೆ ಆಂದೋಲನ ನಡೆಯಲಿ

ಉದ್ಯಾನವನ ಅಭಿವೃದ್ಧಿ ಸರ್ಕಾರದ ಜವಾಬ್ದಾರಿ ಎಂಬ ಮನೋಭಾವ ಸರಿಯಲ್ಲ: ತಿಪ್ಪಾರೆಡ್ಡಿ

Team Udayavani, Jun 17, 2019, 4:24 PM IST

17-June-36

ಚಿತ್ರದುರ್ಗ: ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ಪಾರ್ಕ್‌ ಅನ್ನು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಉದ್ಘಾಟಿಸಿದರು.

ಚಿತ್ರದುರ್ಗ: ಪರಿಸರ ವಿನಾಶದತ್ತ ಸಾಗಿದ್ದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಗಿಡ ನೆಡುವ ಆಂದೋಲನ ನಡೆಯಬೇಕಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.

ನಗರದ ಮರುಳಪ್ಪ ಬಡಾವಣೆಯಲ್ಲಿ ಚೈತನ್ಯ ಕ್ಷೇಮಾಭಿವೃದ್ಧಿ ಸಂಘ, ಭಾರತೀಯ ಮಾನವ ಹಕ್ಕುಗಳ ಸಮಿತಿ ನವದೆಹಲಿಯ ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮ ಹಾಗೂ ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ ಪಾರ್ಕ್‌ ಉದ್ಘಾಟಿಸಿ ಅವರು ಮಾತನಾಡಿದರು.

ಪಾರ್ಕ್‌ಗಳನ್ನು ನಗರಸಭೆ ಅಭಿವೃದ್ಧಿ ಪಡಿಸಲಿ, ಗಿಡಗಳನ್ನು ಸರ್ಕಾರ ನೆಡಲಿ ಎನ್ನುವ ಉದಾಸೀನ ಮನೋಭಾವ ಬೇಡ. ಎಲ್ಲದಕ್ಕೂ ಸರ್ಕಾರ, ನಗರಸಭೆ, ಪಂಚಾಯತ್‌ಗಳ ಮೇಲೆ ಅವಲಂಬಿಸುವುದು ಸರಿಯಲ್ಲ. ಉದ್ಯಾನವನಗಳಲ್ಲಿ ಗಿಡ ನೆಟ್ಟು ಸಂರಕ್ಷಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದರು.

ವಾತಾವರಣದಲ್ಲಿ ಉಷ್ಣಾಂಶ ಏರಿಕೆಯಾಗಿರುವುದರಿಂದ ಪ್ರಕೃತಿಯಲ್ಲಿ ಸಾಕಷ್ಟು ಏರಿಳಿತಗಳಾಗುತ್ತಿವೆ. ಈ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ದೇಶಗಳು ಚರ್ಚಿಸುತ್ತಿವೆ. ದೆಹಲಿಯಲ್ಲಿ 46 ಡಿಗ್ರಿ ತಾಪಮಾನ ಇರುವುದರಿಂದ ಪ್ರತಿ ವರ್ಷ ಸಾವಿರಾರು ಜನ ಮರಣ ಹೊಂದುತ್ತಿದ್ದಾರೆ. ಹಾಗಾಗಿ ಹೆಚ್ಚು ಗಿಡ-ಮರಗಳನ್ನು ಬೆಳೆಸುವ ಜವಾಬ್ದಾರಿ ಸಾರ್ವಜನಿಕರ ಮೇಲಿದೆ. ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ವಾಯುವಿಹಾರ ಮಾಡಿ. ವಿಶ್ರಾಂತಿ ಪಡೆಯಲು ಉದ್ಯಾನವನಗಳಿರಬೇಕು. ಅದಕ್ಕಾಗಿ ಮರುಳಪ್ಪ ಬಡಾವಣೆಯ ಈ ಉದ್ಯಾನವವನ್ನು ಹಸಿರುಮಯವನ್ನಾಗಿ ಮಾಡಿ ಎಂದು ಕರೆ ನೀಡಿದರು.

ಮೆದೇಹಳ್ಳಿ, ಮರುಳಪ್ಪ ಬಡಾವಣೆ, ವಿದ್ಯಾನಗರದಲ್ಲಿ ನೀರಿನ ತೊಂದರೆ ಇರುವುದು ನನ್ನ ಗಮನದಲ್ಲಿದೆ. ಅಮೃತಸಿಟಿ ಯೋಜನೆಯಡಿ ಕೇಂದ್ರದಿಂದ ಚಿತ್ರದುರ್ಗ ನಗರಕ್ಕೆ 140 ಕೋಟಿ ರೂ.ಗಳ ಅನುದಾನ ಬಂದಿದೆ. ಅದರಲ್ಲಿ 112 ಕೋಟಿ ರೂ. ವೆಚ್ಚ ಮಾಡಿ 24*7 ನೀರು ಪೂರೈಕೆ ಮಾಡಲಾಗುವುದು ಎಂದರು.

ಜಿಲ್ಲೆಯಲ್ಲಿ ತೀವ್ರ ಬರ ಕಾಡುತ್ತಿದ್ದು ಕಳೆದ ವರ್ಷ ಟ್ಯಾಂಕರ್‌ ನೀರು ಪೂರೈಕೆ ಮಾಡಿದವರಿಗೆ ಸರ್ಕಾರ ಇನ್ನೂ ಹಣ ನೀಡಿಲ್ಲ. ಬುಧವಾರ ಕೆ.ಯು.ಡಬ್ಲೂ.ಎಸ್‌ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಲ್ಲಿಗೆ ನೀವು ಕೂಡ ಬನ್ನಿ, ಸಮಸ್ಯೆಗಳ ಕುರಿತು ಚರ್ಚಿಸೋಣ ಎಂದ ಶಾಸಕರು, ಈ ಭಾಗದಲ್ಲಿ ನೀರಿನ ಸಮಸ್ಯೆ ಇದ್ದರೆ ಕೊಳವೆಬಾವಿ ಕೊರೆಸಿಕೊಡುವುದಾಗಿ ಭರವಸೆ ನೀಡಿದರು.

ಚೈತನ್ಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜ್‌ಕುಮಾರ್‌, ಕಾರ್ಯದರ್ಶಿ ರವೀಶ್ವರ್‌ ಶಿವಪುರ, ಪದಾಧಿಕಾರಿಗಳಾದ ವೆಂಕಟೇಶ್‌, ಚಂದ್ರಣ್ಣ, ಮಂಜುನಾಥ್‌, ರಾಜೇಶ್‌, ವಿರೂಪಾಕ್ಷಪ್ಪ, ಹೇಮಕ್ಕ, ಪದ್ಮಜಾ, ರಮ್ಯ, ಪುಷ್ಪ, ಭಾರತೀಯ ಮಾನವ ಹಕ್ಕುಗಳ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶಮೂರ್ತಿ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.