ಬದುಕು-ಸಂಸ್ಕೃತಿಯ ಅನುಸಂಧಾನ ನಡೆಯಲಿ: ಪೂರ್ಣಪ್ರಜ್ಞ

ಕಾಲಮಾನ ಬದಲಾದಂತೆ ಸಂಸ್ಕೃತಿ ಬದಲಾವಣೆಯಾಗುವುದು ಸಹಜ ಪ್ರಕ್ರಿಯೆ

Team Udayavani, Sep 8, 2019, 6:08 PM IST

8-Sepctember-26

ಚಿತ್ರದುರ್ಗ: ಸರ್ಕಾರಿ ವಿಜ್ಞಾನ ಕಾಲೇಜಿನ ಸಾಂಸ್ಕೃತಿಕ-ಕ್ರೀಡಾ ಚಟುವಟಿಕೆಗಳಿಗೆ ಚಿಂತಕ ಪೂರ್ಣಪ್ರಜ್ಞ ಬೇಳೂರು ಚಾಲನೆ ನೀಡಿದರು.

ಚಿತ್ರದುರ್ಗ: ಬದುಕು ಮತ್ತು ಸಂಸ್ಕೃತಿ ಬೇರೆ ಬೇರೆ ಅಲ್ಲ. ಇವೆರಡರ ಅನುಸಂಧಾನ ನಮ್ಮ ಕೈಯಲ್ಲೇ ಇದೆ ಎಂದು ಚಿಂತಕ ಪೂರ್ಣಪ್ರಜ್ಞ ಬೇಳೂರು ಹೇಳಿದರು.

ನಗರದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿಕ, ಕ್ರೀಡೆ, ಎನ್ನೆಸ್ಸೆಸ್‌, ಎನ್‌ಸಿಸಿ, ಯುವ ರೆಡ್‌ಕ್ರಾಸ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನಮ್ಮ ಬದುಕನ್ನು ಪಂಚಭೂತಗಳು ರೂಸುತ್ತವೆ. ಬದುಕು ಬದಲಾದಂತೆ ಸಂಸ್ಕೃತಿಯೂ ಬದಲಾಗುತ್ತದೆ. ಹಿಂದೆ ಬೀಸುವ ಕಲ್ಲು, ಮಣ್ಣಿನ ಮನೆ, ಒನಕೆಯ ಬಳಕೆಯ ಸಂಸ್ಕೃತಿ ಇತ್ತು. ಆದರೆ ಈಗ ಯಂತ್ರ ಸಂಸ್ಕೃತಿಗೆ ಒಗ್ಗಿಕೊಂಡಿದ್ದೇವೆ ಎಂದರು.

4 ರಿಂದ 12ನೇ ಶತಮಾನದಲ್ಲಿ ಸಾಕಷ್ಟು ಬದಲಾವಣೆ ನಡೆದವು. ಈ ಅವಧಿಯ ಬದಲಾವಣೆಗೆ ಕ್ರಾಂತಿ ಎನ್ನುತ್ತಾರೆ. ಸುನಾಮಿ ಎಂದರೂ ತಪ್ಪಾಗಲಾರದು. ಎಲ್ಲವೂ ಧ್ವಂಸವಾದವು. ಒಂದು ಸುನಾಮಿಗೆ ಮಣ್ಣಿನ ಮನೆ ಬಿದ್ದು ಹೋದರೆ ಮತ್ತೆ ಅಂತಹ ಮನೆಯನ್ನು ಕಟ್ಟುವುದಿಲ್ಲ. ಬದಲಾಗಿ ಕಟ್ಟಡ ಸಂಸ್ಕೃತಿಗೆ ಮಾರು ಹೋಗಿ ಸಿಮೆಂಟ್, ಮರಳು ಬಳಸಿ ಗಟ್ಟಿಯಾದ ಮನೆ ಕಟ್ಟುತ್ತೇವೆ. ಆದರೆ, ಮತ್ತೆ ಬರುವ ಸುನಾಮಿ ಈ ಮನೆಯನ್ನೂ ಬೀಳಿಸುವ ಶಕ್ತಿ ಹೊಂದಿರುತ್ತದೆ ಎನ್ನುವುದು ನಮ್ಮ ಅರಿವಿಗೆ ಬರುವುದೇ ಇಲ್ಲ ಎಂದು ವಿಷಾದಿಸಿದರು.

ಶೂನ್ಯ ಜಗತ್ತಿಗೆ ಭಾರತದ ಕೊಡುಗೆ. ಇದನ್ನು ಆವಿಷ್ಕಾರ ಮಾಡಿದ ಆರ್ಯಭಟ ಕನ್ನಡಿಗ. ಅವರ ಆರ್ಯಭಟೀಯ 121 ಕನ್ನಡ ಶ್ಲೋಕಗಳನ್ನು ಹೊಂದಿದೆ. ಈ ವಿಚಾರ ಅನೇಕರಿಗೆ ಗೊತ್ತಿಲ್ಲ. ಹಿರಿಯ ಕಾದಂಬರಿಕಾರ ತರಾಸು ಚಿತ್ರದುರ್ಗದವರೇ ಆಗಿದ್ದರೂ ಇಲ್ಲಿನ ವಿದ್ಯಾರ್ಥಿಗಳು ಅವರ ಕೃತಿಗಳನ್ನು ಓದಿಲ್ಲ. ಇದು ನಮ್ಮ ಸಮಾಜದಲ್ಲಿರುವ ವಿಸ್ಮೃತಿ. ಸಂಸ್ಕೃತಿಯ ಜತೆ ವಿಸ್ಮೃತಿಯೂ ಸೇರಿರುತ್ತದೆ. ಹಳೆಯದೆಲ್ಲವನ್ನೂ ಮರೆಯುವುದೇ ವಿಸ್ಮೃತಿ ಎಂದು ಹೇಳಿದರು.

ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ| ಎಂ.ವಿ. ನಾಗರಾಜ್‌ ಮಾತನಾಡಿ, ವಿದ್ಯಾರ್ಥಿಗಳು ಮುಜುಗರದಿಂದ ತಮ್ಮಲ್ಲಿರುವ ಪ್ರತಿಭೆಗಳನ್ನು ಮುಚ್ಚಿಡಬೇಡಿ. ಕಾಲೇಜಿನಿಂದ ಸಾಕಷ್ಟು ಅವಕಾಶ ಕಲ್ಪಿಸಿದ್ದು ಎಲ್ಲದರಲ್ಲೂ ಸಕ್ರಿಯವಾಗಿ ಭಾಗವಹಿಸಿ. ಈ ಮೂಲಕ ಪಠ್ಯಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಿದಾಗ ವಿದ್ಯಾರ್ಥಿ ಜೀವನ ಪರಿಪೂರ್ಣವಾಗುತ್ತದೆ ಎಂದರು.

ಪ್ರಾಚಾರ್ಯ ಪ್ರೊ| ಎಂ. ಬಸವರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕ ಪ್ರೊ| ಕೆ.ಕೆ. ಕಾಮಾನಿ, ಎನ್‌ಸಿಸಿ ಅಧಿಕಾರಿ ಪ್ರೊ| ದಿನೇಶ್‌ಕುಮಾರ್‌, ಕ್ರೀಡಾ ಸಮಿತಿಯ ಡಾ| ಡಿ. ನಾಗರಾಜ್‌, ಎನ್ನೆಸ್ಸೆಸ್‌ನ ಪ್ರೊ| ಎನ್‌. ಶಶಿಧರ್‌, ಪ್ರೊ| ನಟೇಶ್‌, ಪ್ರೊ| ಧನಂಜಯಕುಮಾರ್‌, ರೆಡ್‌ಕ್ರಾಸ್‌ನ ಪ್ರೊ| ರಮೇಶ್‌ ಅಯ್ಯನಹಳ್ಳಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಪ್ರೊ| ವಿ.ಜಿ. ನಾಗವೇಣಿ, ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ| ಎನ್‌.ಬಿ. ಗಟ್ಟಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.