ಜಿಲ್ಲೆಯಾದ್ಯಂತ ತಂಪೆರೆದ ಉತ್ತರೆ
ಹಿರಿಯೂರು-ಚಳ್ಳಕೆರೆ ತಾಲೂಕುಗಳಲ್ಲಿ ಹೆಚ್ಚು-ಉಳಿದೆಡೆ ಸಾಧಾರಣ ಮಳೆ
Team Udayavani, Sep 25, 2019, 12:59 PM IST
ಚಿತ್ರದುರ್ಗ: “ರೈತರಿಗೆ ಭಾಷೆ ಕೊಟ್ಟ ಮಳೆ’ ಎಂದೇ ಕರೆಸಿಕೊಳ್ಳುವ ಉತ್ತರೆ ಮಳೆ ಜಿಲ್ಲೆಯಾದ್ಯಂತ ತಂಪೆರೆಯುತ್ತಿದೆ. ಉತ್ತರೆ ಮಳೆ ಬಂದರೆ ಕುಡಿಯಲು ನೀರಾದರೂ ಸಿಗುತ್ತದೆ, ಒಂದು ವೇಳೆ ಕೈಕೊಟ್ಟರೆ ಮುಂದೆ ನೀರಿಗೆ ಹಾಹಾಕಾರ ಉಂಟಾಗಲಿದ್ದು, ಗುಳೆ ಹೊರಡಲು ಅಣಿಯಾಗಬೇಕಾಗುತ್ತದೆ ಎನ್ನುತ್ತಾರೆ ಬಯಲುಸೀಮೆಯ ಜನ.
ಈ ಹಿನ್ನೆಲೆಯಲ್ಲಿ ಈಗ ಸುರಿಯುತ್ತಿರುವ ಉತ್ತರೆ ಮಳೆ ಜಿಲ್ಲೆಯ ಜನರಲ್ಲಿ ಹೊಸ ಭರವಸೆ ಮೂಡಿಸಿದೆ. ಸಕಾಲಕ್ಕೆ ಸರಿಯಾಗಿ ಮಳೆಯಾಗದೆ ಈಗಾಗಲೇ ಯಾವ ಬೆಳೆಯನ್ನೂ ಬೆಳೆಯಲು ಸಾಧ್ಯವಾಗದ ರೈತರು ಮುಂದೆ ದನ ಕರುಗಳಿಗೆ ಮೇವಾದರೂ ಸಿಗುತ್ತದೆ ಎನ್ನುವ ವಿಶ್ವಾಸದಲ್ಲಿದ್ದಾರೆ.
ತಡವಾಗಿ ಬಂದ ಮಳೆಗೆ ಮೆಕ್ಕೆಜೋಳ, ಹತ್ತಿ, ರಾಗಿ, ಈರುಳ್ಳಿ, ಸಿರಿಧಾನ್ಯಗಳನ್ನು ಬಿತ್ತನೆ ಮಾಡಿರುವ ರೈತರಿಗೆ ಈ ಮಳೆ ಸಂತಸ ತಂದಿದೆ. ಸೋಮವಾರ ರಾತ್ರಿಯಿಂದ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹಾಗೂ ಹಿರಿಯೂರು ತಾಲೂಕಿನ ಧರ್ಮಪುರ ಭಾಗದಲ್ಲಿ ಹೆಚ್ಚು ಮಳೆಯಾಗಿದೆ ಎನ್ನಲಾಗಿದ್ದು, ಈ ಭಾಗದ ಸಣ್ಣ ಪುಟ್ಟ ಕೆರೆ ಕಟ್ಟೆಗಳು ತುಂಬಿ ನೀರು ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ