ಜೀವನದ ಅನುಭವ ಸಾರವೇ ಜಾನಪದ

ಬದುಕಿನ ನಿಜ ಮೌಲ್ಯ ಬುಡಕಟ್ಟು ಸಂಸ್ಕೃತಿಯಲ್ಲಿದೆ ಎಂಬುದರ ತಿಳಿವಳಿಕೆ ಅಗತ್ಯ: ನ್ಯಾ| ಬಿಲ್ಲಪ್ಪ

Team Udayavani, Dec 29, 2019, 4:45 PM IST

29-December-29

ಚಿತ್ರದುರ್ಗ: ಕಷ್ಟದ ಸಂದರ್ಭಗಳನ್ನು ಸುಖಮಯವಾಗಿಸುವ ಶಕ್ತಿ ಜಾನಪದಕ್ಕಿದೆ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌. ಬಿಲ್ಲಪ್ಪ ಹೇಳಿದರು.

ನಗರದ ಶ್ರೀ ಕಬೀರಾನಂದಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಜಾನಪದ ಜ್ಞಾನ ಸಂಪದ ಕಾರ್ಯಕ್ರಮದಲ್ಲಿ ಡಾ| ಎಸ್‌.ಎಂ. ಮುತ್ತಯ್ಯ ಬರೆದ “ಬುಡಕಟ್ಟು ಜ್ಞಾನ ಪರಂಪರೆ’ ಕೃತಿ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ಜಾನಪದ ಜೀವನದ ಅನುಭವವೇ ಆಗಿದೆ. ನೈಜ ಮತ್ತು ಸಹಜ ಬದುಕಿಗೆ ಅರ್ಥ ಅಲ್ಲಿ ಸಿಗುತ್ತದೆ. ನಮ್ಮ ದೇಶದ ವೈವಿಧ್ಯತೆ ಅರಿಯಲು ಇಲ್ಲಿನ ಬುಡಕಟ್ಟು ಜೀವನವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ವೇದಕ್ಕೆ ಸರಿ ಸಮಾನವಾದುದು ಗಾದೆ. ಜಾನಪದರಲ್ಲಿ ಗಾದೆಗೆ ಕೊರತೆಯಿಲ್ಲ. ಬುಡಕಟ್ಟು ಜನತೆ ಅಪಾರ ಕಲೆ, ಸಾಹಿತ್ಯ ಹೊಂದಿದ್ದಾರೆ. ಇವರು ನಿಜವಾದ ಪ್ರಕೃತಿಯ ಆರಾಧಕರು. ನಿಸರ್ಗದ ಜೊತೆಗೆ ಜೀವಾನುನುಭವ ಹಾಗೂ ಸಾಮಾಜಿಕ ಪ್ರಜ್ಞೆ ಹೊಂದಿದವರಾಗಿದ್ದಾರೆ ಎಂದು ಶ್ಲಾಘಿಸಿದರು.

ನಿಜವಾದ ಬದುಕಿನ ಮೌಲ್ಯ ಬುಡಕಟ್ಟಿನಲ್ಲಿದೆ. ಬೆಳೆ ಬೆಳೆಯುವುದು, ಬೆಳೆದ ಬೆಳೆಗಳನ್ನು ಸುಸಜ್ಜಿತವಾಗಿ ಸಂಗ್ರಹಿಸಿಸುವುದು, ಪ್ರಾಣಿಗಳ ಸಾಕಾಣೆ, ಮನೆ ಮದ್ದು ಸಂಸ್ಕೃತಿ, ಗಿಡಮೂಲಿಕೆಗಳ ಸಂರಕ್ಷಣೆ ಯಾವ ಶೈಕ್ಷಣಿಕ ಜ್ಞಾನಕ್ಕೂ ಕಡಿಮೆ ಇಲ್ಲ. ಅಕ್ಷರದ ಅರಿವಿಲ್ಲದ ನಮ್ಮ ಸಿರಿಯಜ್ಜಿ ಸಾವಿರಾರು ಜಾನಪದ ಹಾಡುಗಳನ್ನು ಹಾಡಿದ್ದಾರೆ. ಈ ಹಾಡುಗಳನ್ನಿಟ್ಟುಕೊಂಡು ಅನೇಕರು ಸಂಶೋಧನೆ ಮಾಡಿ ಪಿಎಚ್‌ಡಿ ಪಡೆದುಕೊಂಡಿದ್ದಾರೆ. ಅದೇ ರೀತಿ ಸಾಲುಮರದ ತಿಮ್ಮಕ್ಕ ಅವರ ಯಶಸ್ಸು ಓದಿನಿಂದ ಬಂದಿದ್ದಲ್ಲ.ಜಾನಪದದ ಮೂಲಕ ಅವರ ಸ್ಥಾನ ಔನ್ನತ್ಯಕ್ಕೇರಿದೆ ಎಂದು ತಿಳಿಸಿದರು.

ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ| ಜೆ. ಕರಿಯಪ್ಪ ಮಾಳಿಗೆ ಮಾತನಾಡಿ, ಇಂದಿನ ಯುವ ಪೀಳಿಗೆ ಆಧುನಿಕತೆಯ ಆಕರ್ಷಣೆಗೆ ಒಳಗಾಗಬಾರದು. ಪಾರಂಪರಿಕ ಜ್ಞಾನವನ್ನು ಅರಿತರೆ ಬದುಕಿನ ಸವಾಲುಗಳಿಗೆ ಉತ್ತರ ಸಿಗುತ್ತದೆ. ಜಾನಪದ ಕೇವಲ ಮನೋರಂಜನೆಯಲ್ಲ. ಅದರಲ್ಲಿ ಬದುಕಿನ ಮೌಲ್ಯಗಳಿವೆ. ನೀತಿ, ಧರ್ಮ, ಸಾಮರಸ್ಯ, ಸೌಹಾರ್ದತೆಯ ಗುಣಗಳಿಂದ ಆದಿಯಿಂದ ಇಂದಿನವರೆಗೆ ಉಳಿದಿವೆ. ಅದನ್ನು ಬೆಳೆಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

ಜಾನಪದ ಚಿಂತಕ ಡಾ| ಅರುಣ್‌ ಜೋಳದಕೂಡ್ಲಗಿ ಮಾತನಾಡಿ, ಜಾನಪದ ಕಲಿತವರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ವ್ಯವಸ್ಥೆ ಜಾರಿಯಾಗಬೇಕು. ಜಾನಪದ ವೈದ್ಯಕೀಯವನ್ನು ಇಂದಿನ ಮೆಡಿಕಲ್‌ ವಿದ್ಯಾರ್ಥಿಗಳು ಅಭ್ಯಾಸ ಮಾಡಬೇಕು. ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಜಾನಪದರ ವಾಸ್ತುಶಾಸ್ತ್ರವನ್ನು ತಿಳಿದುಕೊಳ್ಳಬೇಕು. ನಮ್ಮ ಶಿಕ್ಷಣದ ವ್ಯವಸ್ಥೆಯಲ್ಲಿ ದೇಶಿ ಜ್ಞಾನವನ್ನು ಪರ್ಯಾಯವಾಗಿ ಕಲಿಸಲು, ಪಠ್ಯ ಹಾಗೂ ಐಚ್ಛಿಕ ವಿಷಯವನ್ನಾಗಿ ಇಡಬೇಕು ಎಂದು ಅಭಿಪ್ರಾಯಪಟ್ಟರು.

ತತ್ವಪದಗಾರ ಯುಗಧರ್ಮ ರಾಮಣ್ಣ, ವೀರಗಾಸೆ ಕಲಾವಿದ ಬೊಮ್ಮಲಿಂಗಪ್ಪ, ಲಾವಣಿ ತತ್ವ ಪದಗಾರ ಗುರುಸಿದ್ಧನಾಯಕ, ಜಾನಪದ ಗಾಯಕ ಆಯತೋಳ್‌ ವಿರೂಪಾಕ್ಷಪ್ಪ, ರಂಗಭೂಮಿ ಸಂಗೀತಗಾರ ವಿದ್ವಾನ್‌ ತಿಪ್ಪೇಸ್ವಾಮಿ, ನೃತ್ಯ ತರಬೇತುಗಾರ್ತಿ ಶ್ವೇತ ಭಟ್‌ ಅವರಿಗೆ “ಲೋಕೋತ್ಸವ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಕೆ. ಶಿವಮೂರ್ತಿ, ಪ್ರಾಧ್ಯಾಪಕ ಡಾ| ಎಸ್‌.ಎಂ. ಮುತ್ತಯ್ಯ, ವಕೀಲ ವೈ.ತಿಪ್ಪೇಸ್ವಾಮಿ,
ವಾಸವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ರಾಮಲಿಂಗ ಶೆಟ್ಟಿ, ವಿದ್ಯಾವಿಕಾಸ ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ. ವಿಜಯಕುಮಾರ್‌, ಮಾತೃಶ್ರೀ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಎಲ್‌. ಪ್ರಶಾಂತ್‌, ಗಾಯಕ ಡಿ.ಒ. ಇತರರು ಇದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.