ಸಮಾನತೆಯೇ ಬಸವ ಧರ್ಮದ ಧ್ಯೇಯ

ಅಸಮಾನತೆ ಕಂದಕ ಮುಚ್ಚಲು ದಾರ್ಶನಿಕರಿಂದ ಯತ್ನ: ಡಾ| ಶಿವಮೂರ್ತಿ ಮುರುಘಾ ಶರಣರು

Team Udayavani, Aug 5, 2019, 12:05 PM IST

5-AGUST-15

ಚಿತ್ರದುರ್ಗ: ಹೊಳಲ್ಕೆರೆ ತಾಲೂಕು ಲೋಕದೊಳಲು ಗ್ರಾಮಕ್ಕೆ ಆಗಮಿಸಿದ ಡಾ| ಶಿವಮೂರ್ತಿ ಮುರುಘಾ ಶರಣರನ್ನು ಗ್ರಾಮಸ್ಥರು ಶ್ರದ್ಧಾ ಭಕ್ತಿಯಿಂದ ಸ್ವಾಗತಿಸಿದರು.

ಚಿತ್ರದುರ್ಗ: ಜಗತ್ತಿನ ಎಲ್ಲರನ್ನೂ ಒಂದೇ ಎಂದು ನೋಡಿದ ಧರ್ಮ ಬಸವ ಧರ್ಮ ಹಾಗೂ ಲಿಂಗಾಯತ ಧರ್ಮ ಎಂದು ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ಮುರುಘಾ ಮಠದ ಬಸವ ಕೇಂದ್ರದ ವತಿಯಿಂದ ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.

ಜಾತಿ-ಜಾತಿಗಳನ್ನು ಬೆಸೆದ ಕೀರ್ತಿ ಬಸವಾದಿ ಶರಣರಿಗೆ ಸಲ್ಲುತ್ತದೆ. ನಾವೆಲ್ಲಾ ಒಂದೇ ಜಾತಿಗೆ ಸೇರಿದವರು. ಸಮಾಜ ಎನ್ನುವ ಭೂಮಿಯಲ್ಲಿ ಆಗಾಗ ಕಂದಕಗಳು ಉಂಟಾಗುತ್ತಿರುತ್ತವೆ. ಮಾನವ ಸಮಾಜದಲ್ಲಿ ಬರುವ ಈ ಅಸಮಾನತೆ ಎನ್ನುವ ಕಂದಕವನ್ನು ಮುಚ್ಚಲು ಬುದ್ಧ, ಬಸವ, ಪೈಗಂಬರ್‌, ಏಸು ಮೊದಲಾದ ದಾರ್ಶನಿಕರು ಬಂದು ಹೋಗಿದ್ದಾರೆ ಎಂದರು.

ಸಮಾನತೆಗೆ ಸುದೀರ್ಘ‌ವಾದ ಇತಿಹಾಸವಿದೆ. ಬಸವಾದಿ ಶರಣರು ಸಮ ಸಮಾಜವನ್ನು ಕಟ್ಟಿ ಕೊಟ್ಟು ಹೋದರು. ಜಗತ್ತಿನ ಎಲ್ಲರನ್ನೂ ನಮ್ಮವರೇ ಎಂದು ಕರೆದರು. ಸತ್ಯದ ಹಾದಿಯಲ್ಲಿ ನಡೆದರು ಎಂದು ಸ್ಮರಿಸಿದರು.

ನೂರಾರು ವರ್ಷಗಳ ಹಿಂದೆ ಲೋಕದೊಳಲು ಗ್ರಾಮದಲ್ಲಿ ಚಾರ್ವಾಕರಿದ್ದರು. ಚಾರ್ವಾಕರು ಎಂದರೆ ನಾಸ್ತಿಕರು. ಇದೇ ಕಾರಣಕ್ಕೆ ಈ ಊರಿಗೆ ಲೋಕದೊಳಲು ಎಂಬ ಹೆಸರು ಬಂದಿದೆ. ಲೋಕದೊಳಲು ಎಂದರೆ ಲೋಕಾಯತ ಪೊಳಲು ಎಂದರ್ಥ ಎಂದರು.

‘ಸಮ ಸಮಾಜದ ಸ್ಥಾಪನೆ’ ಕುರಿತು ವಿಷಯಾವಲೋಕನ ಮಾಡಿದ ಹೊಳಲ್ಕೆರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಜಿ.ಎಸ್‌. ನಾಗರಾಜ ರಾವ್‌, ಸಮಾಜ ನಮ್ಮ ಸುತ್ತಲೂ ಇದೆ. ಈ ಹಿಂದೆ ವರ್ಣಾಶ್ರಮಗಳಿದ್ದವು. ಬಳಿಕ ಅದು ಬದಲಾವಣೆ ಪಡೆದುಕೊಂಡಿದೆ ಎಂದು ತಿಳಿಸಿದರು.

ಜಾತಿಗಳ ಸೃಷ್ಟಿ ಅವರವರು ನಿಭಾಯಿಸುವ ಕೆಲಸಗಳ ಮೇಲೆ ಆಗಿದೆ. ಆದರೆ ವ್ಯವಸ್ಥೆಯೊಳಗೆ ಪ್ರಬಲರು ಪ್ರಬಲರಾಗುತ್ತಲೇ ಹೋದರು. ಬಡವರು ಬಡವರಾಗುತ್ತಲೇ ಹೋಗುತ್ತಿದ್ದಾರೆ. ಬಸವಣ್ಣನವರು ಹನ್ನೆರಡನೇ ಶತಮಾನದಲ್ಲೇ ಸಮಾನತೆ ಸಾರಿದ್ದರು. ಆದರೆ ರಾಜಕಾರಣಿಗಳು ಓಟಿಗಾಗಿ ಜಾತಿ-ಜಾತಿಗಳನ್ನು ಎತ್ತಿ ಕಟ್ಟಿದರು ಎಂದು ವಿಷಾದಿಸಿದರು.

ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಎಲ್.ಬಿ. ರಾಜಶೇಖರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಲೋಕದೊಳಲು ಗ್ರಾಮಕ್ಕೂ ಮುರುಘಾ ಮಠಕ್ಕೂ ಅವಿನಾಭಾವ ಸಂಬಂಧ ಇದೆ ಎಂದರು.

ಮುಖಂಡರಾದ ಮುರುಗೇಶ್‌, ಕೆ.ಸಿ. ರಮೇಶ್‌, ರಾಮಣ್ಣ ಉಪಸ್ಥಿತರಿದ್ದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಎಲ್.ಕೆ. ಶಿವಕುಮಾರ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.