ಮಕ್ಕಳ ಹಕ್ಕು ಗೌರವಿಸುವ ಮನೋಭಾವ ಬೆಳೆಯಲಿ
Team Udayavani, Dec 25, 2019, 5:13 PM IST
ಚಿತ್ರದುರ್ಗ: ಸಾರ್ವಜನಿಕರು ಮಕ್ಕಳ ಹಕ್ಕುಗಳನ್ನು ಗೌರವಿಸುವ ಜತೆಗೆ ಉಲ್ಲಂಘನೆಯಾಗದಂತೆ ರಕ್ಷಣೆ ನೀಡಬೇಕು ಎಂದು ಜಿಲ್ಲಾ ಧಿಕಾರಿ ಆರ್. ವಿನೋತ್ ಪ್ರಿಯಾ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಭೋವಿ ಕಾಲೋನಿ ಪಾರ್ಕ್ನಲ್ಲಿ ಮಂಗಳವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಯಾಗಬೇಕು. ಯಾವುದೇ ಉದ್ದಿಮೆಗಳಲ್ಲಿ ಮಕ್ಕಳನ್ನು ದುಡಿಸಬಾರದು. ಇದು ಕಾನೂನು ಬಾಹಿರ. ಕೇವಲ ದಂಡ ಅಥವಾ ಶಿಕ್ಷೆಯಿಂದ ಸಮಾಜವನ್ನು ತಿದ್ದಲು ಸಾಧ್ಯವಿಲ್ಲ. ಮಕ್ಕಳ ಹಕ್ಕು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.
5 ಅಥವಾ 6 ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿಸಿ ಮಗುವನ್ನು ದುಡಿಮೆಗೆ ತಳ್ಳಬಾರದು. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಬೇಕು. ಸರ್ಕಾರದ ಯೋಜನೆಗಳು ಫಲಕಾರಿಯಾಗುವಲ್ಲಿ ಸಾರ್ವಜನಿಕರ ಪಾತ್ರ ಬಹು ಮುಖ್ಯ ಎಂದು ಅಭಿಪ್ರಾಯಪಟ್ಟರು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸಿ.ಜೆ.ಎಂ ಟಿ. ಶಿವಣ್ಣ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಬೇಕು. ಸರ್ಕಾರದಲ್ಲಿರುವ ಎಲ್ಲಾ ಸೌಲಭ್ಯಗಳ ಬಗ್ಗೆ ಮಾಹಿತಿ ತಿಳಿಯಲು ಕುತೂಹಲ ಇರಬೇಕು. ಸರ್ಕಾರದ ಸೌಲಭ್ಯ ಪಡೆಯುವುದು ಎಲ್ಲರ ಹಕ್ಕು. ಸಾರ್ವಜನಿಕರು ಮುಖ್ಯವಾಹಿನಿಗೆ ಬಂದು ಸರ್ಕಾರದ ಸೌಲಭ್ಯಗಳ ಮಾಹಿತಿ ಪಡೆಯಬೇಕು ಎಂದರು.
ಕಾರ್ಮಿಕ ಅಧಿಕಾರಿ ಡಿ.ಎಂ. ವಿನುತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್. ವಿಜಯಕುಮಾರ್, ಉಪಾಧ್ಯಕ್ಷ ಟಿ. ನಾಗೇಂದ್ರಪ್ಪ, ಕಾರ್ಯದರ್ಶಿ ಬಿ.ಎಂ. ಅನಿಲ್ಕುಮಾರ್, ಕಾರ್ಮಿಕ ನಿರೀಕ್ಷಕ ಡಿ. ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ವಸಹಾಯ ಸಂಘಗಳು ಹಾಗೂ ಸ್ತ್ರೀಶಕ್ತಿ ಸಂಘಗಳ ಸದಸ್ಯೆಯರು ಹಾಗೂ ಕಟ್ಟಡ ಕಾರ್ಮಿಕರಿಗೆ, ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ, ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಅಸಂಘಟಿತ ವಲಯದ ಕೆಲಸಗಾರರಿಗೆ ಕಾನೂನು ಸೇವೆಗಳ ಯೋಜನೆ- 2015 ಹಾಗೂ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆ ಕುರಿತು ಅರಿವು ಮೂಡಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ