ಲೋಕಲ್ ದೊರೆಗಳ ಭವಿಷ್ಯಕ್ಕೆ ಮತ ಮುದ್ರೆ

ಹಿರಿಯೂರು ನಗರಸಭೆ, ಹೊಳಲ್ಕೆರೆ-ಮೊಳಕಾಲ್ಮೂರು ಪಪಂಗೆ ಚುನಾವಣೆ •ಖಾಲಿ ಇದ್ದ ಗ್ರಾಪಂ ಸ್ಥಾನಗಳ ಆಯ್ಕೆಗೂ ಮತದಾನ

Team Udayavani, May 30, 2019, 12:42 PM IST

30-May-24

ಚಿತ್ರದುರ್ಗ: ಹೊಳಲ್ಕೆರೆ ಪಟ್ಟಣ ಪಂಚಾಯತ್‌ ಚುನಾವಣೆಗೆ ಮತ ಚಲಾಯಿಸಲು ವಿಕಲಚೇತನರು ಮತಗಟ್ಟೆಗೆ ಆಗಮಿಸಿದ್ದು ಹೀಗೆ.

ಚಿತ್ರದುರ್ಗ: ಹಿರಿಯೂರು ನಗರಸಭೆ, ಮೊಳಕಾಲ್ಮೂರು ಮತ್ತು ಹೊಳಲ್ಕೆರೆ ಪಟ್ಟಣ ಪಂಚಾಯತ್‌, ಗ್ರಾಮ ಪಂಚಾಯತ್‌ಗಳ ಖಾಲಿ ಇದ್ದ ಸದಸ್ಯ ಸ್ಥಾನಗಳಿಗೆ ಬುಧವಾರ ಶಾಂತಿಯುತ ಮತದಾನ ನಡೆಯಿತು. ಜಿಲ್ಲೆಯಲ್ಲಿ ಒಟ್ಟು ಶೇ. 78.99 ಮತದಾನ ದಾಖಲಾಗಿದೆ.

ಹಿರಿಯೂರು ನಗರಸಭೆ ಶೇ. 70.93, ಮೊಳಕಾಲ್ಮೂರು ಶೇ. 83.19 ಮತ್ತು ಹೊಳಲ್ಕೆರೆ ಪಟ್ಟಣ ಪಂಚಾಯತ್‌ದಲ್ಲಿ ಶೇ. 82.85 ಮತದಾನವಾಗಿದೆ. ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದಾಗಿ ಮಧ್ಯಾಹ್ನದವರೆಗೆ ಬಹುತೇಕ ಕಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಇಂದು ಕೂಡ ಮಳೆಯಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಮತದಾನ ಸಂದರ್ಭದಲ್ಲಿ ಮಳೆರಾಯ ಬಿಡುವು ನೀಡಿದ್ದರಿಂದ ಮತದಾನ ಸುಗಮವಾಗಿನಡೆಯಿತು.

ಹಿರಿಯೂರು ನಗರಸಭೆಗೆ ನಡೆದ ಚುನಾವಣೆಯಲ್ಲಿ ಬೆಳಿಗ್ಗೆ ಮಂದಗತಿಯಿಂದ ಮತದಾನ ಆರಂಭವಾಯಿತು. ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯಲ್ಲಿ ಬೆಳಿಗ್ಗೆಯಿಂದಲೂ ಮತದಾನ ಬಿರುಸಿನಿಂದ ನಡೆಯಿತು. ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಹಿರಿಯೂರು ನಗರಸಭೆಯ 31 ವಾರ್ಡ್‌ಗಳ ಪೈಕಿ ಒಂದು ವಾರ್ಡ್‌ಗೆ ಅವಿರೋಧ ಆಯ್ಕೆ ನಡೆದಿದೆ. 53 ಮತಗಟ್ಟೆ ಸ್ಥಾಪಿಸಿದ್ದು 30 ವಾರ್ಡ್‌ಗಳಿಗೆ ಒಟ್ಟು 117 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಮೊಳಕಾಲ್ಮೂರು ಪಟ್ಟಣ ಪಂಚಾಯತ್‌ದ 16 ವಾರ್ಡ್‌ಗಳ ಚುನಾವಣೆಗೆ 16 ಮತಗಟ್ಟೆಗಳನ್ನು ಸ್ಥಾಪಿಸಿದ್ದು ಒಟ್ಟು 43 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಹೊಳಲ್ಕೆರೆ ಪಟ್ಟಣ ಪಂಚಾಯತ್‌ದ 16 ವಾರ್ಡ್‌ಗಳ ಚುನಾವಣೆಗೆ 16 ಮತಗಟ್ಟೆಗಳನ್ನು ತೆರೆದಿದ್ದು, 43 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು.

ಹೊತ್ತೇರಿದಂತೆ ಮತ ಚಲಾವಣೆಯೂ ಹೆಚ್ಚಾಯ್ತು: ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ, ಆರಂಭದಲ್ಲಿ ನಿಧಾನಗತಿಯಲ್ಲಿ ಸಾಗಿದರೂ ನಂತರ ವೇಗ ಪಡೆಯಿತು. ಹಿರಿಯೂರು ನಗರ ವ್ಯಾಪ್ತಿಯಲ್ಲಿ ನಿಧಾನಗತಿಯಲ್ಲಿ ಸಾಗಿದರೆ, ಮೊಳಕಾಲ್ಮೂರು ಹಾಗೂ ಹೊಳಲ್ಕೆರೆ ವ್ಯಾಪ್ತಿಯಲ್ಲಿ ಬೆಳಿಗ್ಗೆಯಿಂದಲೇ ಹೆಚ್ಚಿನ ಪ್ರಮಾಣದ ಮತದಾನ ದಾಖಲಾಯಿತು. ಬೆಳಿಗ್ಗೆ 9 ಗಂಟೆಯ ವೇಳೆಗೆ ಹಿರಿಯೂರು ನಗರಸಭೆ ಶೇ. 8.48, ಮೊಳಕಾಲ್ಮೂರು ಶೇ. 16. 89, ಹೊಳಲ್ಕೆರೆ ಶೇ.11. 89 ಸೇರಿದಂತೆ ಒಟ್ಟಾರೆ ಜಿಲ್ಲೆಯಲ್ಲಿ ಶೇ. 10.58 ಮತದಾನವಾಗಿತ್ತು. ಬೆಳಿಗ್ಗೆ 9 ಗಂಟೆಯ ಬಳಿಕ ಮತದಾನ ವೇಗ ಪಡೆಯಿತು. 11 ಗಂಟೆ ಹೊತ್ತಿಗೆ ಹಿರಿಯೂರು ನಗರಸಭೆ ಶೇ. 21.28, ಮೊಳಕಾಲ್ಮೂರು ಶೇ. 36.11, ಹೊಳಲ್ಕೆರೆ ಶೇ. 33.37 ಮತ ಚಲಾವಣೆಯಾಗಿ ಒಟ್ಟಾರೆ ಶೇ. 26.12 ರಷ್ಟು ಮತದಾನ ದಾಖಲಾಗಿತ್ತು.

ಮಧ್ಯಾಹ್ನ 1 ಗಂಟೆ ವೇಳೆಗೆ ಹಿರಿಯೂರು ನಗರಸಭೆ ಶೇ. 38.50, ಮೊಳಕಾಲ್ಮೂರು ಶೇ. 56.86, ಹೊಳಲ್ಕೆರೆ ಶೇ. 54.95, ಒಟ್ಟಾರೆ ಜಿಲ್ಲೆಯಲ್ಲಿ ಶೇ. 44.82 ಮತದಾನವಾಗಿತ್ತು. ಮಧ್ಯಾಹ್ನ 3 ಗಂಟೆಗೆ ಹಿರಿಯೂರು ಶೇ. 53.78, ಮೊಳಕಾಲ್ಮೂರು ಶೇ. 71.46, ಹೊಳಲ್ಕೆರೆ ಶೇ. 69.82, ಒಟ್ಟಾರೆ ಜಿಲ್ಲೆಯಲ್ಲಿ ಶೇ. 59.84 ಮತದಾನವಾಯಿತು. ಮತದಾನಕ್ಕೆ ಕೊನೆಯ ಸಮಯವಾದ ಸಂಜೆ 5 ಗಂಟೆಗೆ ಅಂತಿಮವಾಗಿ ಹಿರಿಯೂರು ಶೇ. 70.93, ಮೊಳಕಾಲ್ಮೂರು ಶೇ. 83.19, ಹೊಳಲ್ಕೆರೆ ಶೇ. 82.85 ಹಾಗೂ ಜಿಲ್ಲೆಯಲ್ಲಿ ಶೇ. 78.99 ಮತ ಚಲಾವಣೆಯಾಯಿತು.

ಗ್ರಾಮ ಪಂಚಾಯತ್‌: ವಿವಿಧ ಕಾರಣಗಳಿಂದ ತೆರವಾಗಿದ್ದ ಹಲವು ಗ್ರಾಮ ಪಂಚಾಯತ್‌ಗಳ 12 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಿತು. ಈ ಪೈಕಿ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ, ಮ್ಯಾಸರಹಟ್ಟಿ, ಚಳ್ಳಕೆರೆ ತಾಲೂಕು ರಾಮದುರ್ಗ, ಮನಮೈನಹಟ್ಟಿ ಪರಶುರಾಮಪುರ, ಚಿತ್ರದುರ್ಗ ತಾಲೂಕು ಪುಡುಕಲಹಳ್ಳಿ, ಹೊಸದುರ್ಗ ತಾಲೂಕು ಕಬ್ಬಿನಕೆರೆ ಹಾಗೂ ಹೊಳಲ್ಕೆರೆ ತಾಲೂಕಿನ ರಂಗವ್ವನಹಳ್ಳಿ ಸೇರಿದಂತೆ ಒಟ್ಟು ಎಂಟು ಗ್ರಾಮ ಪಂಚಾಯತ್‌ ಸದಸ್ಯರ ಆಯ್ಕೆ ಅವಿರೋಧವಾಗಿ ನಡೆದಿತ್ತು. ಉಳಿದ ನಾಲ್ಕು ಗ್ರಾಪಂಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.

ಚಿತ್ರದುರ್ಗ ತಾಲೂಕು ಮಾಡನಾಯಕನಹಳ್ಳಿ ಗ್ರಾಪಂ ವ್ಯಾಪ್ತಿಯ ರಾಯಣ್ಣನಹಳ್ಳಿ, ಹಿರಿಯೂರು ತಾಲೂಕು ಯರಬಳ್ಳಿ ಗ್ರಾಪಂನ ಕಂದಿಕೆರೆ, ಹೊಸಯಳನಾಡು ಗ್ರಾಪಂನ ಆಲೂರು, ಹಾಗೂ ಜವನಗೊಂಡನಹಳ್ಳಿ ಗ್ರಾಪಂನ ಕಾಟನಾಯಕನಹಳ್ಳಿ ಕ್ಷೇತ್ರದ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಿತು. ಚಿತ್ರದುರ್ಗ ತಾಲೂಕು ರಾಯಣ್ಣನಹಳ್ಳಿ ಶೇ. 63.64, ಹಿರಿಯೂರು ತಾಲೂಕು ಕಂದಿಕೆರೆ ಶೇ. 79.69, ಆಲೂರು ಶೇ. 70.50 ಹಾಗೂ ಕಾಟನಾಯಕನಹಳ್ಳಿ ಶೇ. 59.65 ರಷ್ಟು ಮತದಾನವಾಗಿದೆ.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.