ಮತದಾನ ಪ್ರತಿಯೊಬ್ಬರ ಆದ್ಯ ಕರ್ತವ್ಯ: ಸತ್ಯಭಾಮ
Team Udayavani, Apr 13, 2019, 4:24 PM IST
ಚಿತ್ರದುರ್ಗ: ಮತದಾನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಸಿ. ಸತ್ಯಭಾಮ ಚಾಲನೆ ನೀಡಿದರು.
ಚಿತ್ರದುರ್ಗ: ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳುವಂತೆ
ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷೆ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಸಿ.ಸತ್ಯಭಾಮ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಮತದಾನ
ಜಾಗೃತಿ ಬೃಹತ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಮತದಾನ 18 ವರ್ಷ ಮೇಲ್ಪಟ್ಟವರ ಹಕ್ಕಾಗಿದೆ. ಒಂದೊಂದು ಮತದ ಮೌಲ್ಯ ಸಾಕಷ್ಟಿರುತ್ತದೆ. ಒಂದೊಂದು ಮತದಲ್ಲಿ ಸಂಸದರು, ಶಾಸಕರು ಸೋತ
ನಿದರ್ಶನಗಳಿವೆ. ಹಾಗಾಗಿ ಮತದಾನ ಎಲ್ಲರ ಆದ್ಯ ಕರ್ತವ್ಯ ಆಗಬೇಕು ಎಂದರು.
ಒಂದು ಮತಕ್ಕೆ ಒಬ್ಬ ಅಭ್ಯರ್ಥಿಯ ಭವಿಷ್ಯ ನಿರ್ಧರಿಸುವ ಶಕ್ತಿ ಇದೆ ಎಂಬುದನ್ನು ಅರಿತು ಮತದಾನ ಮಾಡಬೇಕು. ಹೆಣ್ಣೊಂದು ಕಲಿತರೆ ಶಾಲೆ ತೆರೆದಂತೆ, ಒಂದು ಹೆಣ್ಣು ಮತದಾನ ಜಾಗೃತಿ ಮೂಡಿದರೆ ಕುಟುಂಬದ ಸಂಪೂರ್ಣ ಮತದಾನ ಮಾಡಿಸುವ ಶಕ್ತಿ ಹೊಂದಿದ್ದಾಳೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ವೃತ್ತದಿಂದ ಆರಂಭವಾದ ಜಾಥಾ, ಅಂಬೇಡ್ಕರ್ ಸರ್ಕಲ್, ಪ್ರವಾಸಿ ಮಂದಿರ, ದೊಡ್ಡಪೇಟೆ, ಗಾಂಧಿ ಸರ್ಕಲ್, ಸಂಗೊಳ್ಳಿ ರಾಯಣ್ಣ ವೃತ್ತ ಹಾಗೂ ಪ್ರಮುಖ ಬೀದಿಗಳಲ್ಲಿ ಸಾಗಿತು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅ ಧಿಕಾರಿ ರಾಜಾ ನಾಯ್ಕ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೆಂಕಟಲಕ್ಷ್ಮೀ, ಚಂದ್ರಪ್ಪ ಹಾಗೂ ಸಿಬ್ಬಂದಿ
ಇದ್ದರು.
ಆಮಿಷಕ್ಕೆ ಬಲಿಯಾಗದಿರಿ
ಮತದ ಮಹತ್ವ ಅರಿಯದವರು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಾರೆ. ಕಳೆದ ಬಾರಿಗಿಂತ ಹೆಚ್ಚಿನ ಮತದಾನ ಮಾಡಿಸಲು ಎಲ್ಲಾ ಇಲಾಖೆಯ ಸಿಬ್ಬಂದಿಗಳು ಮತ್ತು ಅಧಿಕಾರಿ ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಕೆಲಸ ಮಾಡುತ್ತಿದ್ದೇವೆ. ಸಾರ್ವಜನಿಕರು ಶೇ. 100ರಷ್ಟು ಮತದಾನ ಮಾಡಿ ಚಿತ್ರದುರ್ಗ ಜಿಲ್ಲೆಯನ್ನು ಮೊದಲ ಸ್ಥಾನಕ್ಕೆ ಕೊಂಡೊಯ್ಯಬೇಕು. ಅಭಿವೃದ್ಧಿ ಉದ್ದೇಶದಿಂದ ಉತ್ತಮ ಅಭ್ಯರ್ಥಿಗೆ ಮತ ಹಾಕಬೇಕು. ಆಮಿಷ-ಆಕಾಂಕ್ಷೆಗಳಿಗೆ ಬಲಿಯಾಗದೆ ಜಿಲ್ಲೆಯ ಹಿತದೃಷ್ಟಿಯಿಂದ ಮತದಾನ ಮಾಡಿ ಎಂದು ಸತ್ಯಭಾಮ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು