ಜಾಗೃತಿ ಮೂಡಿಸಿದ್ರೂ ಹೆಚ್ಚಲಿಲ್ಲ ಮತ ಪ್ರಮಾಣ


Team Udayavani, Apr 19, 2019, 1:16 PM IST

Udayavani Kannada Newspaper

ಚಿತ್ರದುರ್ಗ: ಮಧ್ಯ ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಲ್ಲಿ ನೀರಸ ಮತದಾನವಾಗಿದೆ. ಈ ಬಾರಿ ಮತದಾನ ಹೆಚ್ಚಳ ಮಾಡಲೇಬೇಕೆಂಬ ಗುರಿ ಇಟ್ಟುಕೊಂಡಿದ್ದ ಚುನಾವಣಾ ಆಯೋಗ
ಹಾಗೂ ಸ್ವೀಪ್‌ ಸಮಿತಿ ಪ್ರಯತ್ನ ಅಷ್ಟೊಂದು ಫಲಕಾರಿಯಾಗಿಲ್ಲ.

ಜಿಲ್ಲೆಯ ಕೆಲವು ಭಾಗಗಳಲ್ಲಿ ಬೆಳಿಗ್ಗೆ 8 ಗಂಟೆಯಾದರೂ ಮತದಾನ ಆರಂಭವಾಗಿರಲಿಲ್ಲ. ಚಿತ್ರದುರ್ಗದ ಚೋಳಗಟ್ಟ ಮತದಾನ ಕೇಂದ್ರದ ಮತಗಟ್ಟೆ ಸಂಖ್ಯೆ 77ರಲ್ಲಿ ವಿವಿ ಪ್ಯಾಟ್‌ನಲ್ಲಿ ದೋಷ ಕಂಡು ಬಂದಿತ್ತು. ಚುನಾವಣಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಿಪೇರಿ ಮಾಡಿದ್ದರಿಂದ ಮತದಾನ ವಿಳಂಬವಾಗಿ ಆರಂಭವಾಯಿತು.

ಹಿರಿಯೂರು ನಗರದ ಮತಗಟ್ಟೆ ಸಂಖ್ಯೆ 157ರಲ್ಲಿ ಮತದಾನ ಆರಂಭವಾಗಿ 10 ನಿಮಿಷ ಕಳೆದ ಮೇಲೆ ಮತಯಂತ್ರ ಕೈಕೊಟ್ಟಿತ್ತು. ಬದಲಿ ಮತಯಂತ್ರ ವ್ಯವಸ್ಥೆ ಮಾಡಿದ ಮೇಲೆ ಮತದಾನ ಶುರುವಾಯಿತು.

ಮತದಾನ ಬಹಿಷ್ಕಾರ: ಕುಡಿಯುವ ನೀರು, ಮೂಲ ಸೌಕರ್ಯ
ಕಲ್ಪಿಸುವಂತೆ ಒತ್ತಾಯಿಸಿ ಚಿತ್ರದುರ್ಗ ತಾಲೂಕಿನ ಪಂಜಯ್ಯನಹಟ್ಟಿ ಗ್ರಾಮದ ಬೂತ್‌ ನಂ.29, ಓಬಣ್ಣಹಳ್ಳಿ ಹಾಗೂ
ಹೊಳಲ್ಕೆರೆ ತಾಲೂಕಿನ ನಗರಗಟ್ಟ ಗ್ರಾಮಗಳ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದರು.

ನಗರದ ಹಲವು ಬಡಾವಣೆಗಳು ಸೇರಿದಂತೆ ಜಿಲ್ಲೆಯ ಕೆಲವು ಮತಗಟ್ಟೆಗಳಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು.
ಇದರಿಂದಾಗಿ ಮಚತಗಟ್ಟೆಗಳು ಬಿಕೋ ಎನ್ನುತ್ತಿದ್ದವು. ಚುನಾವಣಾ ಆಯೋಗವೇ ಮತದಾರರಿಗೆ ಓಟರ್‌ ಸ್ಲಿಪ್‌ ನೀಡಿದ್ದರಿಂದ ಬಹುತೇಕ ಕಡೆ ಬೂತ್‌ ಏಜೆಂಟರು ಕೂಡ ಕಂಡು ಬರಲಿಲ್ಲ. ಮತದಾರರು ನೇರವಾಗಿ ಮತಗಟ್ಟೆಗೆ ಹೋಗಿ ಮತ ಚಲಾಯಿಸಿ ಬರುತ್ತಿದ್ದರು. ಮತದಾರರನ್ನು ಮತಗಟ್ಟೆಗೆ ಕರೆತರಲು ವಾಹನಗಳ ವ್ಯವಸ್ಥೆ ಮಾಡದ ಕಾರಣ ವಯೋವೃದ್ಧರು ಮತಗಟ್ಟೆಗಳತ್ತ ಅಷ್ಟಾಗಿ ಸುಳಿಯಲಿಲ್ಲ.

ಮತದಾರರ ಪರದಾಟ: ಓಟರ್‌ ಸ್ಲಿಪ್‌ ಮತ್ತು ಮತದಾನ ಗುರುತಿನ ಚೀಟಿ ಕಳೆದುಕೊಂಡ ಮತದಾರರು ಚೀಟಿಗಾಗಿ ಪರದಾಡಿದರು. ಮತಗಟ್ಟೆ ಅಧಿಕಾರಿಗಳು ನಾಲ್ಕೈದು ದಿನಗಳ ಮುಂಚಿತವಾಗಿ ಗುರುತಿನ ಚೀಟಿ ವಿತರಿಸಿದ್ದರು. ಕೆಲವು ಮತ ದಾರರು ಚೀಟಿ ಕಳೆದುಕೊಂಡ ಕಾರಣ ಅಧಿಕಾರಿಗಳು ಬದಲಿ ಗುರುತಿನ ಚೀಟಿ ನೀಡಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.