ಒಗ್ಗಟ್ಟಿನ ಕೊರತೆ, ಅತಿಯಾದ ವಿಶ್ವಾಸ ಶಾಪವಾಯ್ತು
Team Udayavani, May 24, 2019, 3:30 PM IST
ಚಿತ್ರದುರ್ಗ: 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಮೋದಿ ಅಲೆ ಇದ್ದರೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿ.ಎನ್. ಚಂದ್ರಪ್ಪ ಸಂಸದರಾಗಿ ಆಯ್ಕೆಯಾಗಿದ್ದರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನವರಾದ ಚಂದ್ರಪ್ಪ, ಜಿಲ್ಲೆಯಿಂದ ಕಣಕ್ಕಿಳಿದು ಒಂದು ಲಕ್ಷಕ್ಕೂ ಹೆಚ್ಚು ಮತದ ಅಂತರದಿಂದ ಜಯಶಾಲಿಯಾಗಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಈ ಬಾರಿಯೂ ಸ್ಪರ್ಧಿಸಿದ್ದ ಅವರು, ಪುನರಾಯ್ಕೆಯಾಗುವ ಕನಸು ಕಂಡಿದ್ದರು. ಆದರೆ ಈ ಸಲ ಮೋದಿ ಅಲೆ ಹಾಗೂ ಪ್ರಬಲ ಪೈಪೋಟಿಯಿಂದಾಗಿ ಮತ್ತೆ ಸಂಸತ್ ಪ್ರವೇಶಿಸುವ ಅವರ ಆಸೆ ಭಗ್ನಗೊಂಡಿದೆ. ಚಂದ್ರಪ್ಪ ಸೋಲಿಗೆ ಹಲವಾರು ಕಾರಣಗಳಿವೆ. ವೈಯಕ್ತಿಕವಾಗಿ ಸರಳ-ಸಜ್ಜನ ಎನ್ನಿಸಿಕೊಂಡು ಐದು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದರೂ ಅದು ಮತವಾಗಿ ಪರಿವರ್ತನೆಯಾಗಲೇ ಇಲ್ಲ. ಅಲ್ಲದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು, ಮಾಜಿ, ಹಾಲಿ ಶಾಸಕರು ಕ್ರಿಯಾಶೀಲವಾಗಿ ಕೆಲಸ ಮಾಡದೇ ಇರುವುದು ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿತು.
ಬಿಜೆಪಿ ಕೂಡ ಮಾದಿಗ ಸಮುದಾಯದವರಿಗೆ ಟಿಕೆಟ್ ನೀಡಿದ್ದು, ಮಾದಿಗ ಸಮುದಾಯದವರೇ ಆದ ಚಂದ್ರಪ್ಪಗೆ ಮುಳುವಾಯಿತು. ಶಿರಾ, ಪಾವಗಡ ಕ್ಷೇತ್ರಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಪಡೆದ ಮತಗಳನ್ನು ಗಣನೆಗೆ ತೆಗೆದುಕೊಳ್ಳಲಾಯಿತು. ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಹೆಚ್ಚಿನ ಲಾಭವಾಗುತ್ತದೆ ಎಂದು ಬಲವಾಗಿ ನಂಬಿ ಕೂರಲಾಯಿತು. ಮಾಜಿ ಶಾಸಕರ ಮೇಲೆ ಹೆಚ್ಚು ಅವಲಂಬಿತವಾದರೂ ನಿರೀಕ್ಷಿತ ಪ್ರಮಾಣದಲ್ಲಿ ಅವರು ಸರಿಯಾಗಿ ಕೆಲಸ ಮಾಡಲಿಲ್ಲ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ನ ಇಬ್ಬರು, ಜೆಡಿಎಸ್ನ ಒಬ್ಬರು ಶಾಸಕರಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮತ ದೊರೆತಿಲ್ಲ. ಜಿಲ್ಲೆಯಲ್ಲಿ ಜೆಡಿಎಸ್ ಮತಗಳ ಸಂಖ್ಯೆ ಕಡಿಮೆ ಇರುವುದು, ಲಿಂಗಾಯತ ಮತಗಳು ಹೆಚ್ಚಾಗಿ ಬಿಜೆಪಿಗೆ ಬಂದಿರುವುದು. ಲಿಂಗಾಯತ ಸಮುದಾಯ ಕಾಂಗ್ರೆಸ್ ವಿರೋಧಿ ಎನ್ನುವಂತೆ ಬಿಂಬಿಸಿದ್ದರಿಂದ ಚಂದ್ರಪ್ಪ ಪರಾಜಯ ಅನುಭವಿಸಬೇಕಾಯಿತು ಎಂದು ವಿಶ್ಲೇಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
MUST WATCH
ಹೊಸ ಸೇರ್ಪಡೆ
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್