29 ವರ್ಷದಿಂದ 16 ಸಾವಿರ ಸಾಮೂಹಿಕ ವಿವಾಹ

ಬಸವಣ್ಣ 900 ವರ್ಷಗಳ ಹಿಂದೆ ಜಾರಿಗೊಳಿಸಿದ್ದ ಕಾರ್ಯಕ್ರಮಗಳ ಮುಂದುವರಿಕೆ: ಮುರುಘಾ ಶರಣರು

Team Udayavani, May 6, 2019, 5:50 PM IST

6–May-35

ಚಿತ್ರದುರ್ಗ: ಡಾ| ಶಿವಮೂರ್ತಿ ಮುರುಘಾ ಶರಣರು ನೂತನ ವಧು-ವರರನ್ನು ಹರಸಿದರು.

ಚಿತ್ರದುರ್ಗ: ನವದಂಪತಿಗಳು ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಅಪನಂಬಿಕೆಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಇಲ್ಲಿನ ಅನುಭವ ಮಂಟಪದಲ್ಲಿ ಮುರುಘಾ ಮಠದ ಬಸವ ಕೇಂದ್ರ ಹಾಗೂ ಎಸ್‌.ಜೆ.ಎಂ ಶಾಂತಿ ಮತ್ತು ಪ್ರಗತಿ ಫೌಂಡೇಶನ್‌ ಸಂಯುಕ್ತಾಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ 29ನೇ ವರ್ಷದ ಐದನೇ ತಿಂಗಳ ಸಾಮೂಹಿಕ ಕಲ್ಯಾಣ ಮಹೋತ್ಸವ ಮತ್ತು ಟೆಕ್ನೋಪಾರ್ಕ್‌ ಪ್ರದರ್ಶನ ಕೇಂದ್ರದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶರಣರು ಮಾತನಾಡಿದರು.

ಸಾರ್ಥಕ ಜೀವನ ನಿಮ್ಮದಾಗಬೇಕು. ಇಂತಹ ಜೀವನ ನಿಮ್ಮದಾಗಬೇಕಾದರೆ ಹಣ, ಆಸ್ತಿ, ಬಂಗಾರ ಎಂದು ಅತಿಯಾದ ವ್ಯಾಮೋಹ ದುರಾಸೆಗಳ ಹಿಂದೆ ಹೋಗಬೇಡಿ. ಆದರ್ಶಗಳ ಹಿಂದೆ ಹೋಗಬೇಕು ಎಂದರು.

ಬಸವಣ್ಣ, ಅಲ್ಲಮ, ಸಿದ್ಧರಾಮೇಶ್ವರರು 900 ವರ್ಷಗಳ ಹಿಂದೆ ಇಂತಹ ವಿವಾಹಗಳನ್ನು ಮಾಡಿಸಿದ್ದರು. ಹಾಗೆಯೇ ಮುರುಘಾ ಮಠ ಕಳೆದ 29 ವರ್ಷಗಳಿಂದ 16 ಸಾವಿರಕ್ಕೂ ಹೆಚ್ಚಿನ ಮದುವೆಗಳನ್ನು ಮಾಡಿಸಿದೆ. ಇದೊಂದು ವಿಶ್ವ ದಾಖಲೆ ಎಂದು ಬಣ್ಣಿಸಿದರು.

ಇತ್ತೀಚಿನ ದಿನಗಳಲ್ಲಿ ಮದುವೆ, ಮುಂಜಿಗಾಗಿ, ಇತರೆ ಸಾಮಾಜಿಕ ಕಾರ್ಯಗಳಿಗಾಗಿ ಜನರು ಲಕ್ಷಾಂತರ ರೂ.ಗಳ ಸಾಲ ಮಾಡುತ್ತಿದ್ದಾರೆ. ದೊಡ್ಡ ಮಟ್ಟದಲ್ಲಿ ಸಾಲ ಮಾಡಿ ಸಾಲದ ಸುಳಿಗೆ ಸಿಲುಕುವ ಬದಲಿಗೆ ಪ್ರತಿ ತಿಂಗಳು 5 ರಂದು ಉಚಿತ ಮದುವೆಯನ್ನು ಮುರುಘಾ ಮಠದಲ್ಲಿ ಆಯೋಜಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ ಮಾತನಾಡಿ, ಸಾಮೂಹಿಕ ವಿವಾಹದಿಂದ ಬಡವರು, ಮಧ್ಯಮ ವರ್ಗದವರಿಗೆ ಹೆಚ್ಚು ಅನುಕೂಲವಾಗಲಿದೆ. ಮುರುಇಘಾ ಶರಣರ ಸಾನ್ನಿಧ್ಯದಲ್ಲಿ ನಡೆಯುವಂತಹ ಇಂತಹ ಮದುವೆಗಳ ಭಾಗ್ಯ ಹೆಚ್ಚು ಜನರಿಗೆ ಸಿಗುವುದಿಲ್ಲ. ಇಲ್ಲಿ ಪ್ರತಿ ತಿಂಗಳು ನಡೆಯುವ ನವ ವಧು-ವರರಿಗೆ ಇಂತಹ ಭಾಗ್ಯ ಸಿಗುತ್ತಿದೆ ಎಂದರು.

ಕಾಲೇಜು ಶಿಕ್ಷಣ ಇಲಾಖೆಯ ಶಿವಮೊಗ್ಗ ವಲಯದ ಜಂಟಿ ನಿರ್ದೇಶಕ ಪ್ರೊ| ಕೆ. ಪ್ರಸಾದ್‌ ಮಾತನಾಡಿ, ಹಣ, ಆಸ್ತಿ, ಸಂಪತ್ತು ಕ್ರೋಢೀಕರಣಗೊಂಡಂತೆಲ್ಲ ಬಹಳಷ್ಟು ಜನ ಸ್ವಾರ್ಥಿಗಳಾಗಿದ್ದಾರೆ. ಸಮಾಜದಲ್ಲಿನ ಬಡವರ ಕುರಿತು ಯಾರೊಬ್ಬರೂ ಚಿಂತನೆ ಮಾಡುವುದಿಲ್ಲ. ಆದರೆ ನಿಸ್ವಾರ್ಥಿಗಳಾಗಿರುವ ಶರಣರು 29 ವರ್ಷಗಳಿಂದ ಈ ಸಾಮಾಜಿಕ ಕಾರ್ಯ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಾನ್ನಿಧ್ಯ ವಹಿಸಿದ್ದ ದೇವದುರ್ಗದ ಅರಿವಿನ ಮನೆಯ ಗುರು ಬಸವದೇವರು ಆಶೀರ್ವಚನ ನೀಡಿ, ಪಂಚಾಂಗ ಮತ್ತು ಜ್ಯೋತಿಷ್ಯ ಇಲ್ಲದೆ ಇಲ್ಲಿ ಕಲ್ಯಾಣ ಮಹೋತ್ಸವ ನಡೆಯುತ್ತಿದೆ. ಗುಡಿ ಗುಂಡಾರಗಳಲ್ಲಿ ದೇವರು ಕಾಣುವುದಿಲ್ಲ, ನಿಮ್ಮಲ್ಲಿಯೇ ಇದ್ದಾನೆ ಎಂದರು.

74 ಜೋಡಿ ದಾಂಪತ್ಯ ಜೀವನ ಪ್ರವೇಶಿಸಿದರು. ಕೇತೇಶ್ವರ ಸ್ವಾಮಿಗಳು ಮತ್ತು ಪ್ರಜ್ಞಾನಂದ ಸ್ವಾಮೀಜಿ, ಎಸ್‌.ಜೆ.ಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಕಾರ್ಯನಿರ್ವಹಣಾ ನಿರ್ದೇಶಕ‌ ಡಾ| ಜಿ.ಎನ್‌. ಮಲ್ಲಿಕಾರ್ಜುನಪ್ಪ, ಕಾರ್ಯನಿರ್ವಹಣಾಧಿಕಾರಿ ಎಂ.ಜಿ. ದೊರೆಸ್ವಾಮಿ, ಕೆಇಬಿ ಷಣ್ಮುಖಪ್ಪ, ಮಲ್ಲಿಕಾರ್ಜುನ್‌, ಪೈಲ್ವಾನ್‌ ತಿಪ್ಪೇಸ್ವಾಮಿ, ಪ್ರೊ| ಜಯ ನಾಯ್ಕ, ಎನ್‌. ತಿಪ್ಪಣ್ಣ, ಪ್ರೊ| ಮಹಂತೇಶ್‌ ಇದ್ದರು.

ಜಮುರಾ ಕಲಾವಿದರು ಪ್ರಾರ್ಥಿಸಿದರು. ಪಿಆರ್‌ಒ ಪ್ರದೀಪ್‌ಕುಮಾರ್‌ ಜಿ.ಟಿ. ನಿರೂಪಿಸಿದರು. ಪ್ರೊ| ಸಾಲಿಮಠ ಸ್ವಾಗತಿಸಿದರು. ಜ್ಞಾನಮೂರ್ತಿ ವಂದಿಸಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.