ಮುರುಘಾ ಮಠ ಸಮಾಜ ಪರಿವರ್ತನಾ ಕೇಂದ್ರ:ಸಿದ್ಧಲಿಂಗಯ್ಯ
ಧಾರವಾಡ ಮುರುಘಾ ಮಠದ ಮಲ್ಲಿಕಾರ್ಜುನ ಶ್ರೀ ಸೇರಿ ಹಲವು ಗಣ್ಯರಿಗೆ 'ಮುರುಘಾ ಶ್ರೀ' ಪ್ರಶಸ್ತಿ ಪ್ರದಾನ
Team Udayavani, Oct 6, 2019, 4:38 PM IST
ಚಿತ್ರದುರ್ಗ: ಧಾರ್ಮಿಕ ಪೀಠವನ್ನು ಸಮಾಜ ಪರಿವರ್ತನಾ ಕೇಂದ್ರವನ್ನಾಗಿ ಮಾಡಿರುವ ಚಿತ್ರದುರ್ಗ ಮುರುಘಾ ಮಠ ಎಲ್ಲರಿಗೂ ಮಾದರಿ ಎಂದು ಸಾಹಿತಿ ಸಿದ್ದಲಿಂಗಯ್ಯ ಹೇಳಿದರು.
ಮುರುಘಾಮಠದ ಅನುಭವ ಮಂಟಪದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದ ಶನಿವಾರದ ಸಭಾ ಕಾರ್ಯಕ್ರಮದಲ್ಲಿ “ಮುರುಘಾಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿ, ಮುರುಘಾಮಠ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ನನಗೆ ಪ್ರಶಸ್ತಿ ನೀಡಿರುವುದು ಮುರುಘಾ ಶರಣರ ಔದಾರ್ಯ ಎಂದರು.
ಸಾಮೂಹಿಕ ವಿವಾಹ ಸಾವಿರಾರು ಕುಟುಂಬಗಳನ್ನು ಸಾಲದ ಬಾಧೆಯಿಂದ ಹೊರತರುವ ಕೆಲಸ ಮಾಡಿದೆ. ಅಂಧ ಶ್ರದ್ಧೆ, ಮೌಡ್ಯದಿಂದ ಸಮಾಜವನ್ನು ಹೊರ ತರುವ ಕೆಲಸ ಮಠದಿಂದ ಆಗಿದೆ. ವಿವಿಧ ಸಮುದಾಯಗಳಿಗೆ ಗುರು ದೀಕ್ಷೆ ನೀಡಿದ್ದಾರೆ ಎಂದು ಬಣ್ಣಿಸಿದರು.
ಡಾ| ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಮುರುಘಾ ಶಾಂತವೀರ
ಸ್ವಾಮೀಜಿ ಚಿತ್ರದುರ್ಗದಲ್ಲಿ ನೆಲೆ ನಿಲ್ಲುವಂತೆ ಮಾಡಿದ್ದು ಅರಸರಾದ ಭರಮಣ್ಣ ನಾಯಕ ಅವರು. ಕೋಟೆ ಮತ್ತು ಕೆರೆಯ ದಡದಲ್ಲಿ ಮಠ ಸ್ಥಾಪಿಸುವ ಮೂಲಕ ಹೊಸ ಪರಂಪರೆಯನ್ನು ಹುಟ್ಟು ಹಾಕಿದರು. ಆಗ ಗುರು ಮತ್ತು ಶಿಷ್ಯರ ಸಂಬಂಧ ಆಪ್ತವಾಗಿತ್ತು ಎಂದರು.
‘ಅರಸು ಮನೆತನದ ಜೊತೆಗೆ ಮುರುಘಾಮಠ ಅನುಪಮ ಸಂಬಂಧ ಹೊಂದಿತ್ತು. ಚಿತ್ರದುರ್ಗದ ಮುರುಘಾ ಮಠದ ಪರಂಪರೆಯ ದೇಶದ ಎಲ್ಲೆಡೆ ಪಸರಿಸಿದೆ. 12ನೇ ಶತಮಾನದಲ್ಲಿ ಬಸವಣ್ಣ ನೀಡಿದ ದಾಸೋಹ ಪರಂಪರೆಯನ್ನು ಮುರುಘಾಮಠ ಮುಂದುವರೆಸಿದೆ. ಬರ ಪರಿಸ್ಥಿತಿ ತಲೆದೋರಿದ ಸಂದರ್ಭದಲ್ಲಿ ದಾಸೋಹದ ಮೂಲಕ ಜನರಿಗೆ ನೆರವು ನೀಡಿದೆ ಎಂದು ಹೇಳಿದರು.
ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ವಾಣಿಜ್ಯೋದ್ಯಮಿ ಜಯಕುಮಾರ್, ಸಾಹಿತಿ ಸಿದ್ದಲಿಂಗಯ್ಯ, ಸಾಮಾಜಿಕ ಹೋರಾಟಗಾರ ಮುರುಘಾರಾಜೇಂದ್ರ ಒಡೆಯರ್ ಅವರಿಗೆ “ಮುರುಘಾಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಂಡ್ಯದ ಯುವ ವಿಜ್ಞಾನಿ ಎನ್.ಎಂ.ಪ್ರತಾಪ್ ಅವರಿಗೆ “ಭರಮಣ್ಣ ನಾಯಕ ಶೌರ್ಯ ಪ್ರಶಸ್ತಿ’ ಪ್ರದಾನ
ಮಾಡಲಾಯಿತು. ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ