ವೈಚಾರಿಕ ದಸರಾಕ್ಕೆ ಅದ್ಧೂರಿ ತೆರೆ 

ಈ ಬಾರಿಯ ಶರಣ ಸಂಸ್ಕೃತಿ ಉತ್ಸವಕ್ಕೆ ಅತಿ ಹೆಚ್ಚು ಜನಮನ್ನಣೆ: ಡಾ| ಶಿವಮೂರ್ತಿ ಮುರುಘಾ ಶರಣರು

Team Udayavani, Oct 12, 2019, 5:41 PM IST

11-October-20

ಚಿತ್ರದುರ್ಗ: ಸೌಹಾರ್ದ ನಡಿಗೆಯಿಂದ ಪ್ರಾರಂಭವಾದ ಮುರುಘಾ ಮಠದ 2019ನೇ ಸಾಲಿನ ಶರಣ ಸಂಸ್ಕೃತಿ ಉತ್ಸವ ಭಾವೈಕ್ಯ ಸಮಾವೇಶದೊಂದಿಗೆ ಶುಕ್ರವಾರ ಸಂಪನ್ನಗೊಂಡಿತು.

ನಿತ್ಯವೂ ವಿಚಾರಗಳ ಹೂರಣ, ಆಟ, ಪಾಠ, ಮನರಂಜನೆ ಜತೆ ಜತೆಗೆ ನಾಡಿನ ಸಮಸ್ಯೆಗಳ ಕುರಿತ ಗಂಭೀರವಾದ ವಿಚಾರ ಮಂಥನಗಳೊಂದಿಗೆ ಪ್ರಸಕ್ತ ವರ್ಷದ ಉತ್ಸವ ಯಶಸ್ಸು ಕಂಡಿದೆ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಸಂತಸ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಘಾ ಶರಣರು, ಈ ಬಾರಿಯ ಶರಣ ಸಂಸ್ಕೃತಿ ಉತ್ಸವ ಹೆಚ್ಚು ಜನಮನ್ನಣೆ ಗಳಿಸಿದ್ದು ಹೊಸ ಇತಿಹಾಸವನ್ನೇ ಸೃಷ್ಟಿಸಿದೆ. ಅ. 2 ರಿಂದ 11 ರವರೆಗೆ ಹತ್ತು ದಿನಗಳ ಕಾಲ ನಿರಾಂತಕ ಹಾಗೂ ನಿರ್ವಿಘ್ನವಾಗಿ ಉತ್ಸವ ನಡೆದಿದೆ. ಇಲ್ಲಿ ನಡೆದ ಗೋಷ್ಠಿಗಳಲ್ಲಿ ಹೊರ ಹೊಮ್ಮಿರುವ ವಿಚಾರಗಳು ಸಮಾಜ ಹಾಗೂ ಸರ್ಕಾರಕ್ಕೆ ತಲುಪಿವೆ ಎಂದು ತಿಳಿಸಿದರು.

ಶರಣ ಸಂಸ್ಕೃತಿ ಉತ್ಸವದ ಆರಂಭದ ಮೂರು ದಿನಗಳ ಕಾಲ ನಡೆದ ಚಿಂತನಾ ಗೋಷ್ಠಿಗಳು ಬಹಳಷ್ಟು ಜನರ ಗಮನವನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ನಾಡಿನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು, ಚಿಂತಕರು, ಕವಿ, ಸಾಹಿತಿಗಳು, ಸಾಧಕರು ಖುಷಿಯಿಂದ ಪಾಲ್ಗೊಂಡಿದ್ದಾರೆ.

ಅನೇಕ ಕಾರ್ಯಕ್ರಮಗಳಿಗೆ ಜನ ಕಿಕ್ಕಿರಿದು ಸೇರಿದ್ದಾರೆ. ಇದುವರೆಗಿನ ಎಲ್ಲ ಉತ್ಸವಗಳನ್ನು ಈ ವರ್ಷದ ಕಾರ್ಯಕ್ರಮಗಳು ಮೀರಿಸಿವೆ. ಊಟದ ವ್ಯವಸ್ಥೆ ಬಹಳ ಅಚ್ಚುಕಟ್ಟಾಗಿ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ವಾರ ಕಾಲ ನಡೆದ ಸಹಜ ಶಿವಯೋಗ ಕಾರ್ಯಕ್ರಮದಲ್ಲೂ ನಿತ್ಯವೂ ಕನಿಷ್ಠ 3 ಸಾವಿರ ಭಕ್ತರು ಭಾಗವಹಿಸುವ ಮೂಲಕ ಬದುಕಿಗೆ ಬೇಕಾದ ಪ್ರೇರಣೆಯನ್ನು ಪಡೆದುಕೊಂಡಿದ್ದಾರೆ. ಜಿಲ್ಲೆಯ ನೀರಾವರಿ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ಕೊಟ್ಟಿದ್ದಾರೆ.

ಬಾಸ್ಕೆಟ್‌ಬಾಲ್‌ ಪಂದ್ಯಾವಳಿಗಾಗಿ ಹೊಸ ಅಂಕಣವನ್ನೇ ನಿರ್ಮಿಸಲಾಗಿದೆ. ಬಸವ ಪುತ್ಥಳಿ ನಿರ್ಮಾಣವಾದರೆ ಚಿತ್ರದುರ್ಗ ಜಿಲ್ಲೆಯ ಸ್ವರೂಪವೇ ಬದಲಾಗಲಿದೆ ಎಂದು ಕಾನೂನು ಸಂಸದೀಯ ಸಚಿವ ಮಾಧುಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಜಿಲ್ಲೆ ಮಾತ್ರವಲ್ಲ, ಕರ್ನಾಟಕದ ಚಿತ್ರಣವೇ ಬದಲಾಗಲಿದೆ ಎಂದರು.

ಈ ವೇಳೆ ಶರಣ ಸಂಸ್ಕೃತಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಹನುಮಲಿ ಷಣ್ಮುಖಪ್ಪ, ಪದಾಧಿಕಾರಿಗಳಾದ ಪಟೇಲ್‌ ಶಿವಕುಮಾರ್‌, ಎ.ಜಿ. ಪರಮಶಿವಯ್ಯ, ಡಿ.ಎಸ್‌. ಮಲ್ಲಿಕಾರ್ಜುನ್‌
ಇತರರು ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.