ಚಳ್ಳಕೆರೆಯಲ್ಲಿ 15 ದಿನ ಕ್ಷೌರದಂಗಡಿಗಳು ಬಂದ್
Team Udayavani, Jul 3, 2020, 10:03 AM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ನಗರದ ಎಲ್ಲಾ ಕ್ಷೌರಿಕರು ಸ್ವಯಂಪ್ರೇರಿತರಾಗಿ 15 ದಿನಗಳ ಕಾಲ ಕ್ಷೌರದಂಗಡಿಗಳನ್ನು ಬಂದ್ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಕ್ಷೌರದಂಗಡಿಗಳನ್ನು 15 ದಿನಗಳ ಕಾಲ ಬಂದ್ ಮಾಡಿ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಸಹಕಾರ ನೀಡಲು ನಿರ್ಧರಿಸಲಾಗಿದೆ ಎಂದು ಸವಿತಾ ಸಮಾಜದ ತಾಲೂಕು ಘಟಕದ ಅಧ್ಯಕ್ಷ ಎಸ್. ರಾಜು ತಿಳಿಸಿದರು.
ಕ್ಷೌರದಂಗಡಿಗಳನ್ನು ಬಂದ್ ಮಾಡುವ ಬಗ್ಗೆ ನಗರದ ಹೊರವಲಯದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯ ಸವಿತಾ ಸಂಘದ ನಿರ್ದೇಶನದ ಮೇರೆಗೆ ಚಳ್ಳಕೆರೆ ನಗರ ಹಾಗೂ ತಾಲೂಕಿನ ಸವಿತಾ ಸಮಾಜದವರು ಈ ನಿರ್ಧಾರ ಕೈಗೊಂಡಿದ್ದೇವೆ. ಅಲ್ಲದೆ ಜಾಗ್ರತೆ ವಹಿಸಲು ಜಿಲ್ಲಾಡಳಿತ ಕೂಡ ಸೂಚನೆ ನೀಡಿದೆ. ಸವಿತಾ ಸಮಾಜದ ಬಂಧುಗಳು ತಮ್ಮ ಸ್ವಇಚ್ಛೆ ಮೇರೆಗೆ ಜು. 2 ರಿಂದ 17ರ ತನಕ ನಗರ ಹಾಗೂ ಗ್ರಾಮೀಣ ಮಟ್ಟದ ಕ್ಷೌರದಂಗಡಿಗಳನ್ನು ಬಂದ್ ಮಾಡಲು ತೀರ್ಮಾನಿಸಿದ್ದಾರೆ. ಸಾರ್ವಜನಿಕರಿಗೆ ಆಗುವ ತೊಂದರೆ ಗಳಿಗೆ ವಿಷಾದಿಸುತ್ತೇವೆ ಎಂದರು. ಸಂಘದ ಕಾರ್ಯದರ್ಶಿ ಬಿ.ಎಸ್. ಶಿವರಾಮ್, ಖಜಾಂಚಿ ಎಚ್. ಪ್ರಕಾಶ್, ಕಾರ್ಯಾಧ್ಯಕ್ಷ ಆರ್. ನಾಗರಾಜ, ವೀರಕೇಸರಿ, ಗೌರವಾಧ್ಯಕ್ಷ ಎಸ್.ಪಿ. ಶ್ರೀನಿವಾಸನ್ ಹಾಗೂ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ