ಜಿಲ್ಲಾದ್ಯಂತ 30 ಸಾವಿರ ವಿಶೇಷ ಮತದಾರರು: ಡಿಸಿ


Team Udayavani, Mar 16, 2019, 10:29 AM IST

cta-1.jpg

ಚಿತ್ರದುರ್ಗ: ಲೋಕಸಭಾ ಚುನಾವಣೆಗೆ ಪ್ರತಿಯೊಬ್ಬರು ಹಬ್ಬದ ರೀತಿಯಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಿ ಭವ್ಯ ಭಾರತ ನಿರ್ಮಾಣ ಮಾಡುವಂತೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ನಗರದ ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಅಂಗವಿಕಲರು ಮತ್ತು ವಿಶೇಷ ಮತದಾರರಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಮತ್ತು ವಿದ್ಯುನ್ಮಾನ ಮತಯಂತ್ರ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ಸಾಮನ್ಯ ಜನರು ಚುನಾವಣೆಯಲ್ಲಿ ಯಾವುದೇ ತೊಂದರೆ ಇಲ್ಲದೆ ಭಾಗವಹಿಸಬೇಕು. ಜಿಲ್ಲಾದ್ಯಂತ 30 ಸಾವಿರ ವಿಶೇಷ ಮತದಾರರಿದ್ದು ಅದರಲ್ಲಿ 15 ಸಾವಿರ ಜನರನ್ನು ಗುರುತಿಸಿ ಮತದಾನಕ್ಕೆ ಒಳಪಡಿಸಿದ್ದೇವೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾನದಲ್ಲಿ ಭಾಗವಹಿಸಬೇಕು. ಬೇರೆಯವರ ಸಹಕಾರವಿಲ್ಲದೆ ಮತದಾನ ಮಾಡಬೇಕು. ಅದಕ್ಕಾಗಿ ಕೇಲವು ಸ್ಥಳಗಳನ್ನು ಗುರುತಿಸಲಾಗಿದೆ ಎಂದರು.
 
ಅಂಗವಿಲಕರು ಇದ್ದು ಅಂತವರಿಗೆ ಮಾಹಿತಿ ನೀಡಿದರೆ ಅವರಿಗೆ ಮತದಾನ ಮಾಡಲು ವಾಹನಗಳ ವ್ಯವಸ್ಥೆ ಮಾಡಲಾಗುವುದು. ಚುನಾವಣಾ ಆಯೋಗಕ್ಕೆ ವಾಹನಗಳ ವ್ಯವಸ್ಥೆ ಮಾಡಲು ಪತ್ರ ಬರೆಯಲಾಗಿದೆ. ಆಶಾ ಕಾರ್ಯಕರ್ತರನ್ನು ಬಳಸಿಕೊಳ್ಳಲು ಯೋಚನೆ ಮಾಡುತ್ತಿದ್ದೇವೆ. ಕಣ್ಣಿನ ತೊಂದರೆ ಇರುವವರಿಗೆ ಆದಷ್ಟು ಸಹಾಯ ಮಾಡಲಾಗುತ್ತದೆ. ಗ್ರಾಮೀಣ ಭಾಗದ ಎಲ್ಲ ಜನರು ಮತದಾನ ಮಾಡಬೇಕು. ಕಳೆದ ಬಾರಿಗಿಂತ ಹೆಚ್ಚು ಮತ ಪ್ರಮಾಣ ಹೆಚ್ಚಿಸಬೇಕು. ಮತದಾನ ಪ್ರತಿಯೊಬ್ಬರ ಹಕ್ಕು
ಅದನ್ನು ಚಲಾಯಿಸಬೇಕು. ಅಂಗವಿಕಲರಿಗೆ ಬೇಕಾಗುವ ವ್ಯವಸ್ಥೆ ಮಾಡಲು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

ಜಿಪಂ ಸಿಇಒ ಸಿ. ಸತ್ಯಭಾಮ ಮಾತನಾಡಿ, 2011ರ ಜನಗಣತಿ ಪ್ರಕಾರ 30 ಸಾವಿರಗಿಂತ ಹೆಚ್ಚು ವಿಶೇಷ ಮತರಾರರಿದ್ದಾರೆ. ಆದರೆ ಕೇವಲ 15, 436 ಜನರು ಮಾತ್ರ ಮತದಾನ ಪತ್ರದಲ್ಲಿ ಹೆಸರು ನೋಂದಣಿ ಮಾಡಿ ಕೊಂಡಿದ್ದಾರೆ. ಉಳಿದವರನ್ನು ಪತ್ತೆ ಮಾಡಲಾಗುತ್ತಿದೆ ಎಂದರು. 

ಅಂಗವಿಕಲ ಇಲಾಖೆ, ಗ್ರಾಮ ಪಂಚಾಯತ್‌ ಸೇರಿದಂತೆ ಮತ್ತಿತರರು ತಮ್ಮ ವ್ಯಾಪ್ತಿಯಲ್ಲಿ ಬರುವಂತ ಅಂಗವಿಕಲರನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಬುದ್ಧಿಮಾಂದ್ಯರನ್ನು ಸಹ ಮತದಾನಕ್ಕೆ ಒಳಪಡಿಸಬೇಕು. ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಅಂಗವಿಕಲರನ್ನು ಹುಡಕಬೇಕು. ಒಬ್ಬ ಅಂಗವಿಕಲನು ಸಹ ಮತದಾನದಿಂದ ಹೊರ ಉಳಿಯಬಾರದು ಎಂಬ ಮೂಲ ಉದ್ದೇಶ ಚುನಾವಣಾ ಆಯೋಗದ ಧ್ಯೇಯವಾಗಿದೆ ಎಂದು. ಸಹಾಯಕರು ಸಹ ಒಂದ ಪಕ್ಷದ ಪರವಾಗಿ ಮತ ಹಾಕಲು ಪ್ರಚೋದನೆ ಮಾಡಬಾರದು.

ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಮತ ಚಲಾಯಿಸಬೇಕು. ಚುನಾವಣೆ ಸಮಯ ಹತ್ತಿರವಿದ್ದು, ಬಿಟ್ಟು ಹೋಗಿರುವವರನ್ನು
ಮತದಾರರ ಪಟ್ಟಿಯಲ್ಲಿ ಆದಷ್ಟು ಬೇಗ ಸೇರಿಸಲು ಶ್ರಮ ವಹಿಸಬೇಕು. ಪ್ರಜಾಪ್ರಭುತ್ವದಲ್ಲಿ ಅಂಗವಿಕಲರಿಗೆ ಹೆಚ್ಚಿನ ವ್ಯವಸ್ಥೆ ಮಾಡಿ ಮುನ್ನಲೆಗೆ ತರುವ ಕೆಲಸ ಮಾಡಲಾಗುತ್ತಿದೆ. ಹಿರಿಯ ನಾಗರಿಕರು ಮತ ಪರಿಶೀಲಿಸಿಕೊಳ್ಳಬೇಕು. 1950 ಉಚಿತ ಸಹಾಯವಾಣಿ ಮೂಲಕ ಮಾಹಿತಿ ಪಡೆಯಬಹುದು ಎಂದರು.  ಜಿಲ್ಲಾ ಅಂಗವಿಕಲರ ಇಲಾಖೆಯ ಮತ್ತು ಸ್ವೀಪ್‌ ಸಮಿತಿ ನೋಡಲ್‌ ಅಧಿ ಕಾರಿ ಜೆ. ವೈಶಾಲಿ, ತಾಪಂ ಇಒ ಕೃಷ್ಣನಾಯ್ಕ ಇದ್ದರು.  

ಟಾಪ್ ನ್ಯೂಸ್

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.