ಇ-ಲೋಕ ಅದಾಲತ್‌ನಲ್ಲಿ 629 ಪ್ರಕರಣ ಇತ್ಯರ್ಥ


Team Udayavani, Sep 21, 2020, 6:40 PM IST

ಇ-ಲೋಕ ಅದಾಲತ್‌ನಲ್ಲಿ 629 ಪ್ರಕರಣ ಇತ್ಯರ್ಥ

ಹೊಳಲ್ಕೆರೆ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆದ ಮೆಗಾ ಇ-ಲೋಕ ಅದಾಲತ್‌ನಲ್ಲಿ 629 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 85,53,254 ರೂ. ವಸೂಲಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೇಮಾ ವಸಂತ ರಾವ್‌ ಪವಾರ್‌ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಮೆಗಾ ಇ-ಲೋಕ ಅದಾಲತ್‌ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಿನ ಪರಿಸ್ಥಿತಿಯಲ್ಲಿ ಡಿಜಿಟಲ್‌ ವೇದಿಕೆ ಪ್ರಮುಖ ಪಾತ್ರ ವಹಿಸಲಿದೆ. ವಕೀಲರು ಮತ್ತು ಕಕ್ಷಿದಾರರು ಪರಿಸ್ಥಿತಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಇ-ಲೋಕ ಅದಾಲತ್‌ಪ್ರಯೋಜನ ಪಡೆದುಕೊಳ್ಳಬೇಕು. ಕೋವಿಡ್‌-19 ಹಿನ್ನಲೆಯಲ್ಲಿ ನ್ಯಾಯದಾನದಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಕಕ್ಷಿದಾರರಿಗೆ ಡಿಜಿಟಲ್‌ ಅದಾಲತ್‌ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದೆ. ಹಾಗಾಗಿ ಕಕ್ಷಿದಾರರು ವ್ಯಾಜ್ಯಗಳನ್ನು ರಾಜಿ- ಸಂಧಾನದ ಮೂಲಕ ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಈ ಮೂಲಕ ವ್ಯಾಜ್ಯ ಮುಕ್ತ ಬದುಕು ಕಟ್ಟಿಕೊಳ್ಳಬೇಕೆಂದರು.

ಸಿವಿಲ್‌ ಹಿರಿಯ ವಿಭಾಗದಲ್ಲಿದ್ದ 1607 ಪ್ರಕರಣಗಳಲ್ಲಿ 462 ರಾಜಿಗೆ ಬಂದಿದ್ದು, 379 ಪ್ರಕರಣಗಳು ಮುಕ್ತಾಯಗೊಂಡಿವೆ. ಸಿವಿಲ್‌ ಕಿರಿಯ ಪ್ರಿನ್ಸಿಪಲ್‌ ಕೋರ್ಟ್‌ನಲ್ಲಿ 1117ರಲ್ಲಿ 369 ರಾಜಿಗೆ ಬಂದಿದ್ದು, 227 ಪ್ರಕರಣ ಮುಕ್ತಾಯಗೊಂಡಿವೆ. ಹೆಚ್ಚುವರಿ ಸಿವಿಲ್‌ ಕಿರಿಯ ನ್ಯಾಯಾಲಯದಲ್ಲಿದ್ದ 468 ರಲ್ಲಿ 80 ಪ್ರಕರಣಗಳು ಬಂದಿದ್ದು, 23 ಪ್ರಕರಣಗಳುರಾಜಿಯಾಗಿವೆ. ಬ್ಯಾಂಕ್‌ ಹಾಗೂ ಹಣಕಾಸು ಪ್ರಕರಣಗಳಲ್ಲಿ 85,53,254 ರೂ. ಗಳನ್ನು ಬ್ಯಾಂಕ್‌ ಹಾಗೂ ಕಕ್ಷಿದಾರರಿಗೆ ವಸೂಲಿ ಮಾಡಿಕೊಟ್ಟಿದೆ ಎಂದರು.

ಕಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧಿಧೀಶ ರವಿ ಮಾತನಾಡಿ, ಮೆಗಾ ಇ-ಲೋಕ ಅದಾಲತ್‌ ಕಕ್ಷಿದಾರರಿಗೆ ಸಹಕಾರಿ. ಪರಸ್ಪರ ಹೊಂದಾಣಿಕೆಯಿಂದ ವ್ಯಾಜ್ಯಗಳಿಂದ ಮುಕ್ತಿ ಪಡೆದುಕೊಂಡು ಆರ್ಥಿಕ ನಷ್ಟ ಇಲ್ಲದಂತೆ ನ್ಯಾಯ ಪಡೆದುಕೊಳ್ಳಬಹುದು ಎಂದರು.

ಕಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾ ಧೀಶ ನಾಗೇಶ್‌, ವಕೀಲರ ಸಂಘದ ಅಧ್ಯಕ್ಷ ಜಿ.ಈ. ರಂಗಸ್ವಾಮಿ ಮತ್ತಿತರರು ಇದ್ದರು.

Ad

ಟಾಪ್ ನ್ಯೂಸ್

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ

ಕಾರ್ಮಿಕ ಮುಷ್ಕರ; ದ.ಕ.,ಉಡುಪಿ ಜಿಲ್ಲೆಯಲ್ಲಿ ಸಹಜ ಸ್ಥಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

muruga seer

ಕೋರ್ಟ್‌ಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಮುರುಘಾ ಶ್ರೀ

karajola

ಡಿಸೆಂಬರ್‌ನಲ್ಲಿ ಸರಕಾರ ಪತನ, ಬಿಜೆಪಿ ಅಧಿಕಾರಕ್ಕೆ: ಗೋವಿಂದ ಕಾರಜೋಳ

Chitradurga: ಜೈಲು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೇ ಕೈದಿಗಳ ಹ*ಲ್ಲೆ!

Chitradurga: ಜೈಲು ಪರಿಶೀಲನೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೇ ಕೈದಿಗಳ ಹ*ಲ್ಲೆ!

ರಾಜೀನಾಮೆ ಕೇಳದೆ, ಉಪಾಯ ಹೇಳಿಕೊಟ್ಟ ಕೈ ವರಿಷ್ಠರು: ಛಲವಾದಿ

ರಾಜೀನಾಮೆ ಕೇಳದೆ, ಉಪಾಯ ಹೇಳಿಕೊಟ್ಟ ಕೈ ವರಿಷ್ಠರು: ಛಲವಾದಿ

Chitradurga: ರೇಣುಕಾಸ್ವಾಮಿ ಹ*ತ್ಯೆಯಾಗಿ ಒಂದು ವರ್ಷ: ಆತ್ಮಶಾಂತಿಗಾಗಿ ಪೂಜೆ

Chitradurga: ರೇಣುಕಾಸ್ವಾಮಿ ಹ*ತ್ಯೆಯಾಗಿ ಒಂದು ವರ್ಷ: ಆತ್ಮಶಾಂತಿಗಾಗಿ ಪೂಜೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

High-Court

ಜನೌಷಧಿ ಕೇಂದ್ರ ಮುಚ್ಚುವ ಆದೇಶಕ್ಕೆ ಹೈಕೋರ್ಟ್‌ ತಡೆ

ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ:  ಡಾ.ಜಿ. ಪರಮೇಶ್ವರ್‌

ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್‌

Yaduveer-Wodeyar

ಮೈಸೂರು-ಕುಶಾಲನಗರ ಎಕ್ಸ್‌ಪ್ರೆಸ್‌ವೇ ಕಾರ್ಯ ಶೀಘ್ರ ಆರಂಭ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

ಕೊಡಗಿನಲ್ಲಿ ಅಕ್ರಮ ರೆಸಾರ್ಟ್‌ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.