ಇ-ಲೋಕ ಅದಾಲತ್‌ನಲ್ಲಿ 629 ಪ್ರಕರಣ ಇತ್ಯರ್ಥ


Team Udayavani, Sep 21, 2020, 6:40 PM IST

ಇ-ಲೋಕ ಅದಾಲತ್‌ನಲ್ಲಿ 629 ಪ್ರಕರಣ ಇತ್ಯರ್ಥ

ಹೊಳಲ್ಕೆರೆ: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನಡೆದ ಮೆಗಾ ಇ-ಲೋಕ ಅದಾಲತ್‌ನಲ್ಲಿ 629 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, 85,53,254 ರೂ. ವಸೂಲಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೇಮಾ ವಸಂತ ರಾವ್‌ ಪವಾರ್‌ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಮೆಗಾ ಇ-ಲೋಕ ಅದಾಲತ್‌ ಗೆ ಚಾಲನೆ ನೀಡಿ ಅವರು ಮಾತನಾಡಿದರು. ಈಗಿನ ಪರಿಸ್ಥಿತಿಯಲ್ಲಿ ಡಿಜಿಟಲ್‌ ವೇದಿಕೆ ಪ್ರಮುಖ ಪಾತ್ರ ವಹಿಸಲಿದೆ. ವಕೀಲರು ಮತ್ತು ಕಕ್ಷಿದಾರರು ಪರಿಸ್ಥಿತಿಗೆ ಪೂರಕವಾಗಿ ಸ್ಪಂದಿಸುವ ಮೂಲಕ ಇ-ಲೋಕ ಅದಾಲತ್‌ಪ್ರಯೋಜನ ಪಡೆದುಕೊಳ್ಳಬೇಕು. ಕೋವಿಡ್‌-19 ಹಿನ್ನಲೆಯಲ್ಲಿ ನ್ಯಾಯದಾನದಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಕಕ್ಷಿದಾರರಿಗೆ ಡಿಜಿಟಲ್‌ ಅದಾಲತ್‌ ಸೌಲಭ್ಯವನ್ನು ಕಲ್ಪಿಸಿಕೊಟ್ಟಿದೆ. ಹಾಗಾಗಿ ಕಕ್ಷಿದಾರರು ವ್ಯಾಜ್ಯಗಳನ್ನು ರಾಜಿ- ಸಂಧಾನದ ಮೂಲಕ ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಬೇಕು. ಈ ಮೂಲಕ ವ್ಯಾಜ್ಯ ಮುಕ್ತ ಬದುಕು ಕಟ್ಟಿಕೊಳ್ಳಬೇಕೆಂದರು.

ಸಿವಿಲ್‌ ಹಿರಿಯ ವಿಭಾಗದಲ್ಲಿದ್ದ 1607 ಪ್ರಕರಣಗಳಲ್ಲಿ 462 ರಾಜಿಗೆ ಬಂದಿದ್ದು, 379 ಪ್ರಕರಣಗಳು ಮುಕ್ತಾಯಗೊಂಡಿವೆ. ಸಿವಿಲ್‌ ಕಿರಿಯ ಪ್ರಿನ್ಸಿಪಲ್‌ ಕೋರ್ಟ್‌ನಲ್ಲಿ 1117ರಲ್ಲಿ 369 ರಾಜಿಗೆ ಬಂದಿದ್ದು, 227 ಪ್ರಕರಣ ಮುಕ್ತಾಯಗೊಂಡಿವೆ. ಹೆಚ್ಚುವರಿ ಸಿವಿಲ್‌ ಕಿರಿಯ ನ್ಯಾಯಾಲಯದಲ್ಲಿದ್ದ 468 ರಲ್ಲಿ 80 ಪ್ರಕರಣಗಳು ಬಂದಿದ್ದು, 23 ಪ್ರಕರಣಗಳುರಾಜಿಯಾಗಿವೆ. ಬ್ಯಾಂಕ್‌ ಹಾಗೂ ಹಣಕಾಸು ಪ್ರಕರಣಗಳಲ್ಲಿ 85,53,254 ರೂ. ಗಳನ್ನು ಬ್ಯಾಂಕ್‌ ಹಾಗೂ ಕಕ್ಷಿದಾರರಿಗೆ ವಸೂಲಿ ಮಾಡಿಕೊಟ್ಟಿದೆ ಎಂದರು.

ಕಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾಧಿಧೀಶ ರವಿ ಮಾತನಾಡಿ, ಮೆಗಾ ಇ-ಲೋಕ ಅದಾಲತ್‌ ಕಕ್ಷಿದಾರರಿಗೆ ಸಹಕಾರಿ. ಪರಸ್ಪರ ಹೊಂದಾಣಿಕೆಯಿಂದ ವ್ಯಾಜ್ಯಗಳಿಂದ ಮುಕ್ತಿ ಪಡೆದುಕೊಂಡು ಆರ್ಥಿಕ ನಷ್ಟ ಇಲ್ಲದಂತೆ ನ್ಯಾಯ ಪಡೆದುಕೊಳ್ಳಬಹುದು ಎಂದರು.

ಕಿರಿಯ ಸಿವಿಲ್‌ ನ್ಯಾಯಾಲಯದ ನ್ಯಾಯಾ ಧೀಶ ನಾಗೇಶ್‌, ವಕೀಲರ ಸಂಘದ ಅಧ್ಯಕ್ಷ ಜಿ.ಈ. ರಂಗಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ

Supreme Court

State-Governor ಕದನ: ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೇಣುಕಾಸ್ವಾಮಿ ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

Renukaswamy ಕುಟುಂಬಕ್ಕೆ ನಟ ವಿನೋದ್‌ ರಾಜ್‌ ಸಾಂತ್ವನ

1-weewq

Bharamasagara; ಸ್ಥಳೀಯ ಟಿಪ್ಪರ್ ಗಳನ್ನು ಬಳಸಿಕೊಳ್ಳಲು ಆಗ್ರಹಿಸಿ ಪ್ರತಿಭಟನೆ

Nayakanahatti

Nayakanahatti; ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಳ್ಳರ ಗ್ಯಾಂಗ್

Chitradurga

Congress Government; ಮೊದಲು ನಿಮ್ಮ ಕಾಲದ ಹಗರಣಕ್ಕೆ ಉತ್ತರ ಕೊಡಿ: ಬಿವೈವಿ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

Renuka Swamy Case: ಎ 4 ತಾಯಿ ನಿಧನ; ವಿಡಿಯೋ ಕಾಲ್‌ನಲ್ಲಿ ಅಂತಿಮ ದರ್ಶನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.