ನಾಯಕನಹಟ್ಟಿ ದೇಗುಲದಲ್ಲಿ 67.65 ಲಕ್ಷ ರೂ. ಕಾಣಿಕೆ ಸಂಗ್ರಹ

ಜಾತ್ರೆ ಸಂದರ್ಭದಲ್ಲಿ ಈ ಪ್ರಮಾಣದ ಕಾಣಿಕೆ ಸಂಗ್ರಹ ಇದೇ ಮೊದಲು

Team Udayavani, Apr 21, 2022, 2:29 PM IST

nayakanahatti

ನಾಯಕನಹಟ್ಟಿ: ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ಹುಂಡಿಗಳಲ್ಲಿ 67.65 ಲಕ್ಷ ರೂ.ಗಳ ದಾಖಲೆ ಪ್ರಮಾಣದ ಹಣ ಸಂಗ್ರಹವಾಗಿದೆ. ಒಳಮಠದ ಹುಂಡಿಗಳಲ್ಲಿ 51,40,500 ರೂ, ಹೊರಮಠದ ಹುಂಡಿಗಳಲ್ಲಿ 16,24,583 ರೂಗಳು ಸೇರಿದಂತೆ ಒಟ್ಟು 67,65,583 ರೂ. ಸಂಗ್ರಹವಾಗಿದೆ. ಜಾತ್ರೆ ಸಂದರ್ಭದಲ್ಲಿ ಈ ಪ್ರಮಾಣದಲ್ಲಿ ಹಣ ಸಂಗ್ರಹವಾಗಿರುವುದು ಇದೇ ಮೊದಲು.

ಕೊರೊನಾ ಹಿನ್ನೆಲೆಯಲ್ಲಿ ಎರಡು ವರ್ಷ ಜಾತ್ರೆ ಜರುಗಿದರೂ ಭಕ್ತರಿಗೆ ನಿರ್ಬಂಧ ವಿಧಿಸಲಾಗಿತ್ತು. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿರಲಿಲ್ಲ. ಯಾವುದೇ ನಿರ್ಬಂಧಗಳಿಲ್ಲದೆ ಮಾ. 20 ರಂದು ಜಾತ್ರೆ ಜರುಗಿತು. ಹೀಗಾಗಿ ಸುಮಾರು ಎರಡು ಲಕ್ಷ ಭಕ್ತರು ಜಾತ್ರೆಗೆ ಆಗಮಿಸಿದ್ದರು. ಸಾಮಾನ್ಯವಾಗಿ ಹುಂಡಿ ಹಣ ಎಣಿಕೆ ಕಾರ್ಯ ಬೆಳಗ್ಗೆ ಆರಂಭವಾಗಿ ಸಂಜೆ ಮುಕ್ತಾಯವಾಗುತ್ತಿತ್ತು. ಆದರೆ ಈ ಬಾರಿಯ ಹುಂಡಿ ಹಣದ ಎಣಿಕೆ ಕಾರ್ಯ ಮುಕ್ತಾಯವಾದಾಗ ರಾತ್ರಿ 8 ಗಂಟೆಯಾಗಿತ್ತು. ಜಾತ್ರೆಗೆ ಮುಂಚೆ ಜ. 28ರಂದು ಹುಂಡಿ ಹಣವನ್ನು ಎಣಿಕೆ ಮಾಡಲಾಗಿತ್ತು. ಅಂದು 57.93 ಲಕ್ಷ ರೂ. ಸಂಗ್ರಹವಾಗಿತ್ತು. ಜಾತ್ರೆಯ ಮುಂಚೆ, ಜಾತ್ರೆಯ ನಂತರ ಹಾಗೂ ಶ್ರಾವಣ ಮಾಸದ ನಂತರ ಹುಂಡಿ ಹಣವನ್ನು ವರ್ಷದಲ್ಲಿ ಮೂರು ಬಾರಿ ಎಣಿಸಲಾಗುತ್ತದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇಲ್ಲಿನ ದೇವಾಲಯವನ್ನು ‘ಎ’ ಶ್ರೇಣಿಯ ದೇವಾಲಯ ಎಂದು ಪರಿಗಣಿಸಲಾಗಿದೆ.

ಎರಡು ತಿಂಗಳಲ್ಲಿ ಕೋಟಿ ಮೀರಿದ ಆದಾಯ

ಜ. 30ರಿಂದ ಇಲ್ಲಿಯವರೆಗೆ ದೇವಾಲಯಕ್ಕೆ ಒಂದು ಕೋಟಿಗೂ ಹೆಚ್ಚಿನ ಹಣವನ್ನು ಭಕ್ತರು ನಾನಾ ರೀತಿಯಲ್ಲಿ ದೇವಾಲಯಕ್ಕೆ ನೀಡಿದ್ದಾರೆ. ತೆಂಗಿನಕಾಯಿ, ಹಣ್ಣು, ಪ್ರಸಾದ ಇನ್ನಿತರೆ ಮಾರಾಟದಿಂದ ಎರಡು ತಿಂಗಳ ಅವಧಿಯಲ್ಲಿ 35.45 ಲಕ್ಷ ರೂ. ಸಂಗ್ರಹವಾಗಿದೆ. ದೇವಾಲಯದಲ್ಲಿ ಜರುಗುವ ರುದ್ರಾಭಿಷೇಕ ಸೇವೆಗಳಿಂದ 3.14 ಲಕ್ಷ ರೂ. ಸಂಗ್ರಹವಾಗಿದೆ. ಲಗ್ನ ಕಾಣಿಕೆ, ಬಾಡಿಗೆ ಸೇರಿದಂತೆ ಇತರೆ ರೂಪದಿಂದ 13.5 ಲಕ್ಷ ರೂ.ಗಳ ಆದಾಯ ದೇವಾಲಯಕ್ಕೆ ದೊರೆತಿದೆ. ಹೀಗೆ ಎರಡು ತಿಂಗಳಲ್ಲಿ ನಾನಾ ರೂಪಗಳಿಂದ 1.19 ಕೋಟಿ ರೂ.ಗಳಷ್ಟು ಹಣವನ್ನು ಭಕ್ತಾದಿಗಳು ನೀಡಿದ್ದಾರೆ.

ನೇರ ದರ್ಶನದಿಂದ 6.95 ಲಕ್ಷ ರೂ. ಸಂಗ್ರಹ

ಜಾತ್ರೆಯಲ್ಲಿ ಅತಿ ಹೆಚ್ಚಿನ ಭಕ್ತರು ದೇವರ ದರ್ಶನಕ್ಕೆ ಆಗಮಿಸುತ್ತಾರೆ. ಜನಸಂದಣೆ ಹೆಚ್ಚಾಗಿರುವುದರಿಂದ ನೇರ ದರ್ಶನ ವ್ಯವಸ್ಥೆ ಏರ್ಪಡಿಸಲಾಗಿತ್ತು. ಇದಕ್ಕಾಗಿ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. 6,950 ಜನರು ನೇರ ದರ್ಶನ ಪಡೆದಿದ್ದು, ಇದರಿಂದ ದೇವಾಲಯಕ್ಕೆ 6.95 ಲಕ್ಷ ರೂ. ಆದಾಯ ದೊರೆತಿದೆ.

ಕಂದಾಯ ಇಲಾಖೆ, ಕೆನರಾ ಬ್ಯಾಂಕ್‌, ದೇವಾಲಯ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ತಹಶೀಲ್ದಾರ್‌ ಎನ್‌. ರಘುಮೂರ್ತಿ, ದೇವಾಲಯದ ಇಒ. ಎಚ್‌. ಗಂಗಾಧರಪ್ಪ, ಪಿಎಸ್‌ಐ ಜೆ. ಶಿವರಾಜ್‌, ಕೆನರಾ ಬ್ಯಾಂಕ್‌ ವ್ಯವಸ್ಥಾಪಕ ಸೂರ್ಯದೇವ ನಾಯ್ಕ, ರಾಜಸ್ವ ನಿರೀಕ್ಷಕ ಚೇತನ್‌, ಶಿರಸ್ತೇದಾರ್‌ ಸದಾಶಿವಪ್ಪ, ಸಿಬ್ಬಂದಿ ರೇಖಾ, ದೇವಾಲಯದ ಸಿಬ್ಬಂದಿ ಸತೀಶ್‌ ಮತ್ತಿತರರು ಇದ್ದರು.

ಹುಂಡಿಯಲ್ಲಿತ್ತು ವಿದೇಶಿ ನಾಣ್ಯ-ಕರೆನ್ಸಿ

ಹುಂಡಿಯಲ್ಲಿ ಸಂಗ್ರಹವಾದ ನಾಣ್ಯಗಳಲ್ಲಿ ಹಲವಾರು ವಿದೇಶಿ ನಾಣ್ಯ ಹಾಗೂ ಕರೆನ್ಸಿಗಳು ಕಂಡುಬಂದವು. ಯೂರೋ, ಸೆಂಟ್‌, ಅರಬ್‌ ದೇಶದ ನಾಣ್ಯಗಳನ್ನು ಭಕ್ತಾದಿಗಳು ಹುಂಡಿಗೆ ಹಾಕಿದ್ದರು. ಈ ಬಾರಿ ನಾಣ್ಯಗಳಿಗಿಂತ ನೋಟುಗಳ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾಗಿತ್ತು. 1.98 ಲಕ್ಷ ರೂ.ಗಳಷ್ಟು ನಾಣ್ಯಗಳು ಹುಂಡಿಯಲ್ಲಿದ್ದವು. 69 ಸಾವಿರ ಮೌಲ್ಯದ 5 ರೂ. ನಾಣ್ಯಗಳು, 70 ಸಾವಿರ ರೂ. ಮೌಲ್ಯದ 2 ರೂ., 55,920 ರೂ.ಗಳಷ್ಟು 1 ರೂ. ನಾಣ್ಯಗಳು ಹುಂಡಿಯಲ್ಲಿದ್ದವು. ಇದರ ಜತೆಗೆ ಹಲವಾರು ರೀತಿಯ ಬೆಳ್ಳಿ ಆಭರಣಗಳೂ ಇದ್ದವು. ಹುಂಡಿ ಎಣಿಕಾ ಕಾರ್ಯವನ್ನು ಸಂಪೂರ್ಣವಾಗಿ ವಿಡಿಯೋ ಚಿತ್ರೀಕರಣ ಮಾಡಲಾಯಿತು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.