ರಂಗಭೂಮಿ ಭಾರತೀಯ ಸಂಸ್ಕೃತಿಯ ಪ್ರತೀಕ; ಡಾ| ಪ್ರೇಮಪಲ್ಲವಿ

ಇಂದಿನ ಕಾಲದಲ್ಲಿ ಮೊಬೈಲ್‌, ಟಿವಿಯಿಂದ ನಾಶವಾಗುತ್ತಾರಾ ಎನ್ನುವ ಭಯ ಕಾಡುತ್ತಿದೆ.

Team Udayavani, Jan 12, 2022, 6:08 PM IST

ರಂಗಭೂಮಿ ಭಾರತೀಯ ಸಂಸ್ಕೃತಿಯ ಪ್ರತೀಕ

ಚಿತ್ರದುರ್ಗ: ರಂಗಭೂಮಿ ನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಸರ್ಕಾರಿ ಕಲಾ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ| ಪ್ರೇಮಪಲ್ಲವಿ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಮಂಗಳವಾರ ಆರಂಭವಾದ ಮೂರು ದಿನಗಳ ಯುವರಂಗ ಜಿಲ್ಲಾ ಕಾಲೇಜು ರಂಗೋತ್ಸವದಲ್ಲಿ ಅವರು ಮಾತನಾಡಿದರು.

ಮನುಷ್ಯ ಹುಟ್ಟಿದಾಗಲೇ ರಂಗಭೂಮಿ ಉದಯವಾಗಿದೆ. ಜನಸಾಮಾನ್ಯರ ಜೀವನ ಚಿತ್ರಣವನ್ನು ರಂಗಭೂಮಿ, ನಾಟಕ ಒಳಗೊಂಡಿದೆ. ಆದರೆ ಸಾಹಿತ್ಯಕ್ಕೆ ದೊರೆತಷ್ಟು ಆದ್ಯತೆ ರಂಗಭೂಮಿಗೆ ಸಿಗುತ್ತಿಲ್ಲ ಎಂದು ವಿಷಾದಿಸಿದರು.

ನಾಟಕ ಸೃಜನಶೀಲ ಕಲೆಯಾಗಿ ಹೊರಹೊಮ್ಮಿದ್ದು, 20ನೇ ಶತಮಾನದಲ್ಲಿ. ರಂಗಭೂಮಿಯನ್ನು ಜಾನಪದ, ಅಭಿಜಾತ ಎಂದು ಎರಡು ಭಾಗವಾಗಿ ವಿಂಗಡಿಸಬಹುದಾಗಿದೆ. ಬೆಳ್ಳಿತೆರೆ ನಡುವೆ ರಂಗಭೂಮಿ ಅಸ್ತಿತ್ವ ಕಳೆದುಕೊಳ್ಳಬಾರದು. ಯುವ ಸಮೂಹ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ದೇಸಿ ಕಲೆ ರಂಗಭೂಮಿ ಉಳಿದು ನಾಟಕಕಾರರನ್ನು ಬೆಳೆಸಿ ಪ್ರೋತ್ಸಾಹಿಸಿದಂತಾಗುತ್ತದೆ. ಶಿಕ್ಷಣದ ಜೊತೆ ರಂಗ ಶಿಕ್ಷಣಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಒಲವು ತೋರಿದಾಗ ಜೀವನ ಪರಿಪೂರ್ಣವಾಗಲಿದೆ ಎಂದರು.

ಹಿರಿಯೂರಿನ ಜ್ಞಾನಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಡಾ| ವಿ. ಬಸವರಾಜ್‌ ಮಾತನಾಡಿ, ಎಲ್ಲಾ ಕಾಲಕ್ಕೂ ಮೌಲ್ಯಗಳನ್ನು ಎತ್ತಿಹಿಡಿಯುವ ರಂಗಭೂಮಿ ಜನಾಶಯ, ಸಮುದಾಯದ ಪರವಾಗಿದೆ.

ಮಾಧ್ಯಮಗಳ ಆರ್ಭಟ, ರಾಜಕೀಯ ಮೇಲಾಟಗಳನ್ನು ನೋಡಿ ಎಲ್ಲದರಿಂದಲೂ ದೂರವಿರಬೇಕು ಅನ್ನಿಸುತ್ತದೆ. ರಂಗಭೂಮಿ ಮೂಲಕ ಸಾಂಸ್ಕೃತಿಕ, ಸೃಜನಶೀಲತೆ, ಜೀವನ ಕೌಶಲ್ಯಕ್ಕೆ ತೆರೆದುಕೊಂಡರೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಬದುಕಿನ ಸತ್ಯಗಳನ್ನು ರಂಗಭೂಮಿ ತಿಳಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ವಿದ್ಯಾರ್ಥಿಗಳು ಪಠ್ಯಕ್ರಮಗಳಿಗಷ್ಟೆ ಜೋತು ಬಿದ್ದಿರುವ ಇಂದಿನ ಕಾಲದಲ್ಲಿ ಮೊಬೈಲ್‌, ಟಿವಿಯಿಂದ ನಾಶವಾಗುತ್ತಾರಾ ಎನ್ನುವ ಭಯ ಕಾಡುತ್ತಿದೆ. ಪಠ್ಯದ ಆಚೆಗೂ ರಂಗಭೂಮಿ ಮಹತ್ವದ ಪಾತ್ರ ವಹಿಸುತ್ತಿದೆ. ತರಗತಿಗಳಿಂದ ಕಲಿಯಲಾರದ ಅನೇಕ ವಿಚಾರಗಳನ್ನು ರಂಗಭೂಮಿ ಕಲಿಸುತ್ತದೆ ಎಂದು ತಿಳಿಸಿದರು.

ಬೆಂಗಳೂರಿನ ರಂಗ ಸಮಾಜದ ಸದಸ್ಯ ಶಿವೇಶ್ವರ ಗೌಡ, ಎಸ್‌ಜೆಎಂ ಕಾಲೇಜು ಪ್ರಾಚಾರ್ಯ ಡಾ| ಕೆ.ಸಿ. ರಮೇಶ್‌ ಮಾತನಾಡಿದರು. ಡಾನ್‌ಬೋಸ್ಕೋ ಪದವಿ ಕಾಲೇಜು ಪ್ರಾಚಾರ್ಯ ಡಾ| ಜೋ, ಧನಕೋಟಿ ವೇದಿಕೆಯಲ್ಲಿದ್ದರು.

ರಂಗಕಲೆಗೆ ಆಧುನಿಕ ಸ್ಪರ್ಶ ದೊರೆಯಲಿ
ನಾಟಕಗಳ ಮೂಲಕ ಸಮಾಜವನ್ನು ತಿದ್ದಬಹುದು. ರಂಗಕಲೆ ಬಗ್ಗೆ ಜನರಲ್ಲಿ ಆಸಕ್ತಿ ಕಡಿಮೆಯಾಗುತ್ತಿದೆ ಅಂದುಕೊಂಡಿರಬಹುದು, ಆದರೆ ಕಡಿಮೆಯಾಗಿಲ್ಲ. ರಂಗಕಲೆಗೆ ಆಧುನಿಕ ಸ್ಪರ್ಶ ನೀಡಬೇಕಾಗಿದೆ. ನಾಟಕ ಮತ್ತು ಯುವ ಪೀಳಿಗೆ ನಡುವೆ ಸಾಕಷ್ಟು ಅಂತರವಿದೆ. ಅದಕ್ಕೆ ಕಾರಣ ಹುಡುಕಿ ಯುವ ಸಮುದಾಯವನ್ನು ರಂಗಭೂಮಿಯತ್ತ ಸೆಳೆಯಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಧನಂಜಯ ತಿಳಿಸಿದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.