ಚಿತ್ರದುರ್ಗ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಪಿಡಿಒ
Team Udayavani, Jul 6, 2021, 4:01 PM IST
ಚಿತ್ರದುರ್ಗ: ಲಂಚ ಸ್ವೀಕರಿಸುವ ವೇಳೆ ಗ್ರಾ.ಪಂ ಪಿಡಿಒಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಹೊಳಲ್ಕೆರೆ ತಾಲ್ಲೂಕಿನ ಟಿ. ನುಲೇನೂರುನಲ್ಲಿ. ನಡೆದಿದೆ.
ಟಿ. ನುಲೇನೂರು ಗ್ರಾ.ಪಂ ಪಿಡಿಒ. ಶ್ರೀನಿವಾಸ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಮನೆಯ ಇ ಸ್ವತ್ತು ಹಾಗೂ ಜಾಬ್ ಕಾರ್ಡ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಗ್ರಾಮದ ನಿವಾಸಿಯಾಗಿರುವ ಗುರುಶಾಂತಪ್ಪ ಎಂಬುವವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ, ಕೆಲಸ ಮಾಡಿಕೊಡಲು 2 ಸಾವಿರ ಬೇಡಿಕೆ ಇಟ್ಟಿದ್ದರು. ಈ ಕುರಿತು ಎಸಿಬಿಗೆ ದೂರು ನೀಡಿದ್ದ ಗುರುಶಾಂತಪ್ಪ, ಇಂದು 2 ಸಾವಿರ ರೂಪಾಯಿಯನ್ನು ಪಿಡಿಒಗೆ ಕೊಡುವಾಗ, ಲಂಚ ಪಡೆಯಲು ಮುಂದಾಗಿದ್ದ ಪಿಡಿಒ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.
ಎಸಿಬಿ ಡಿವೈಎಸ್ಪಿ ಬಸವರಾಜ್ ಮಗದುಮ್ ನೇತೃತ್ವದಲ್ಲಿ ದಾಳಿ ನಡೆಸಿ. ಶ್ರೀನಿವಾಸ್ ವಶಕ್ಕೆ ಪಡೆದು ವಿಚಾರಣೆ ಮಾಡಿ, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ