ರಸ್ತೆ ಹಾಳುಗೆಡವಿದ ಗುತ್ತಿಗೆದಾರರ ವಿರುದ್ಧ ಕ್ರಮ


Team Udayavani, Dec 27, 2020, 6:10 PM IST

ರಸ್ತೆ ಹಾಳುಗೆಡವಿದ ಗುತ್ತಿಗೆದಾರರ ವಿರುದ್ಧ ಕ್ರಮ

ಚಿತ್ರದುರ್ಗ: ಮಿತಿ ಮೀರಿದ ಮಣ್ಣಿನ ಲೋಡ್‌ ಹೊತ್ತು ಲಾರಿಗಳು ಸಂಚರಿಸಿದ್ದರಿಂದ ಮೂರು ತಿಂಗಳಹಿಂದಷ್ಟೇ ನಿರ್ಮಿಸಿದ್ದ ರಸ್ತೆ ಹಾಳಾಗಿದ್ದು, ಗುತ್ತಿಗೆದಾರರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಸೂಚಿಸಿದರು.

ಹಾಳಾಗಿದ್ದ ರಸ್ತೆಗೆ ಗುತ್ತಿಗೆದಾರರು ಬೇಕಾಬಿಟ್ಟಿಯಾಗಿ ತೇಪೆ ಹಾಕಿದ್ದರಿಂದ ಇಂಗಳದಾಳ್‌ ಭಾಗದ ಜನತೆ ಶಾಸಕರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಶನಿವಾರಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್‌, ಗಣಿ ಮತ್ತುಭೂವಿಜ್ಞಾನ ಇಲಾಖೆ ಅಥವಾ ಅರಣ್ಯಇಲಾಖೆಯಿಂದ ಅನುಮತಿ ಪಡೆಯದೆರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿಇಂಗಳದಾಳ್‌ ಮಾರ್ಗವಾಗಿ ಸುಮಾರು40 ಟನ್‌ ಮಣ್ಣು ಹೊತ್ತ ಲಾರಿಗಳಸಂಚರಿಸಿವೆ. ಇದರಿಂದ ಮೂರು ತಿಂಗಳ ಹಿಂದೆ ಕೋಟ್ಯಂತರ ರೂ. ವೆಚ್ಚದಲ್ಲಿನಿರ್ಮಿಸಿದ ರಸ್ತೆ ಹಾಳಾಗಿದೆ. ಕೋವಿಡ್‌ಮತ್ತಿತರೆ ಕಾರಣಕ್ಕೆ ಅನುದಾನ ತರಲುಒದ್ದಾಡುವ ಸ್ಥಿತಿ ಇದೆ. ಆದ್ದರಿಂದ ರಸ್ತೆಹಾಳು ಮಾಡಿದವರೇ ಅದನ್ನು ಪುನರ್‌ನಿರ್ಮಾಣ ಮಾಡಬೇಕು. ಈ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ದೂರು ದಾಖಲಿಸಬೇಕೆಂದರು.

ಕೆಆರ್‌ಡಿ ಕಂಪನಿ ವ್ಯವಸ್ಥಾಪಕ ಚಂದ್ರಶೇಖರ್‌ ಮಾತನಾಡಿ, ಈಗಾಗಲೇ ಗುಂಡಿ ಬಿದ್ದಿರುವ ಕಡೆಗಳಲ್ಲಿ ಡಾಂಬರ್‌ ಹಾಕಿದ್ದೇವೆ. ಉಳಿದ ಕಡೆಯೂ ಸರಿಮಾಡಿಕೊಡುತ್ತೇವೆ ಎಂದರು. ಇದಕ್ಕೆಗ್ರಾಮಸ್ಥರು ಹಾಗೂ ಶಾಸಕರುಒಪ್ಪಲಿಲ್ಲ. ಇಂಗಳದಾಳ್‌ ಗೇಟಿನಿಂದಲಂಬಾಣಿಹಟ್ಟಿವರೆಗೆ ರಸ್ತೆ ಸಂಪೂರ್ಣಹಾಳಾಗಿದೆ. ಹೊಸದಾಗಿ ಮಾಡಿ ಎಂದುಪಟ್ಟು ಹಿಡಿದರು. ಪಿಎನ್‌ಸಿ ಕಂಪನಿಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದು,ಕೆಆರ್‌ಡಿ ಕಂಪನಿಯವರು ಮಣ್ಣುಹೊಡೆಯುವ ಗುತ್ತಿಗೆ ಪಡೆದಿದ್ದಾರೆ.

ಹೆದ್ದಾರಿ ನಿರ್ಮಾಣ ಮಾಡುವ ಕಾರಣಕ್ಕೆ ಹಳ್ಳಿಗಳ ರಸ್ತೆ ಹಾಳು ಮಾಡುವುದುಸರಿಯಲ್ಲ. ಹಾಳಾಗಿರುವ ರಸ್ತೆ ದುರಸ್ಥಿ ಮಾಡಿಕೊಡಬೇಕು. ಅದನ್ನು ಬಿಟ್ಟು ಲಾಬಿ ಮಾಡುವುದು ಸರಿಯಲ್ಲ ಎಂದು ಶಾಸಕ ತಿಪ್ಪಾರೆಡ್ಡಿ ಆಕ್ಷೇಪಿಸಿದರು.

ಸಿಪಿಐ ಬಾಲಚಂದ್ರ ನಾಯ್ಕ, ಆರ್‌ಎಫ್‌ಒ ಸಂದೀಪ್‌ ನಾಯಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಮಾಪತಿ ಮತ್ತಿತರರು ಇದ್ದರು.

ಬೌನ್ಸರ್‌ ಕರೆತಂದ ಗುತ್ತಿಗೆದಾರ! :  ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ರಸ್ತೆ ಹಾಳಾಗಿರುವುದನ್ನು ಪರಿಶೀಲಿಸಲುತೆರಳುವ ಜಾಗಕ್ಕೆ ಗುತ್ತಿಗೆದಾರ ಚಂದ್ರಶೇಖರ್‌, ಆರು ಜನ ಬೌನ್ಸರ್‌ಗಳನ್ನು ಕರೆತಂದಿದ್ದರು. ಇದನ್ನು ಗಮನಿಸಿದ ಶಾಸಕರು ಇವರು ಯಾರು, ಇಲ್ಲಿಗೆಯಾಕೆ ಬಂದಿದ್ದಾರೆ ಎಂದು ಪ್ರಶ್ನಿಸಿದರು. ತಕ್ಷಣ ಗುತ್ತಿಗೆದಾರ ಚಂದ್ರಶೇಖರ್‌ಇವರನ್ನು ಸಿನಿಮಾ ಶೂಟಿಂಗ್‌ಗಾಗಿ ಕರೆತಂದಿದ್ದೇನೆ ಎಂದರು. ತಕ್ಷಣಬೌನ್ಸರ್‌ ಹುಡುಗರನ್ನು ವಿಚಾರಿಸಿದಾಗ ಸೆಕ್ಯೂರಿಟಿಗಾಗಿ ಬಂದಿದ್ದೇವೆ ಎಂದುಉತ್ತರಿಸಿದರು. ಇದರಿಂದ ಕೆರಳಿದ ಶಾಸಕರು ರೌಡಿಸಂ ಮಾಡಲು ಬಂದಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಎಲ್ಲರ ಮೇಲೆ ದೂರು ದಾಖಲಿಸುವಂತೆ ಸೂಚನೆ ನೀಡಿದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.