ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಕ್ರಮ
ಸಾಮಾಜಿಕ ಭದ್ರತಾ ಯೋಜನೆಗಳಿಂದ ಜನರ ಬಾಳಲ್ಲಿ ನೆಮ್ಮದಿ: ಶಾಸಕ ತಿಪ್ಪಾರೆಡ್ಡಿ
Team Udayavani, Apr 27, 2022, 3:09 PM IST
ಚಿತ್ರದುರ್ಗ: ಸವಲತ್ತು ವಂಚಿತರ ಮನೆಬಾಗಿಲಿಗೆ ತೆರಳಿ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳನ್ನು ತಲುಪಿಸುವ ಕಾರ್ಯಕ್ರಮವನ್ನು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ತರಾಸು ರಂಗಮಂದಿರ ಹಾಗೂ ಹಿರೇಗುಂಟನೂರು ಗ್ರಾಮದ ದ್ಯಾಮಲಾಂಬ ದೇವಸ್ಥಾನದ ಬಳಿ ಮಂಗಳವಾರ ಆಯೋಜಿಸಿದ್ದ ಕಂದಾಯ ಇಲಾಖೆಯಿಂದ ನೀಡುವ ಸಾಮಾಜಿಕ ಭದ್ರತಾ ಯೋಜನೆಯ ಮಂಜೂರಾತಿ ಆದೇಶಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು. ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿಗಳ ಮನೆಗಳಿಗೆ ತೆರಳಿ ಫಲಾನುಭವಿಗಳನ್ನು ಹುಡುಕಿ ಯೋಜನೆ ತಲುಪಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಈ ಪ್ರಕಾರ ಫಲಾನುಭವಿಗಳನ್ನು ಗುರುತಿಸಿ ಅರ್ಜಿ ಪಡೆದು ಮಾಸಾಶನಗಳನ್ನು ಮಂಜೂರು ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡುವ ಮಾಸಾಶನಗಳ ಮೊತ್ತವನ್ನು ಹೆಚ್ಚಿಸಿದ್ದಾರೆ. ಸಾಮಾಜಿಕ ಭದ್ರತಾ ಯೋಜನೆಗಳಿಂದ ಜನರ ಬಾಳಲ್ಲಿ ನೆಮ್ಮದಿ ಮೂಡಿದೆ. ವೃದ್ಧರು, ಅಂಗವಿಕಲರು, ವಿಧವೆಯರಿಗೆ ಆಸರೆಯಾಗಿದೆ. ವೃದ್ಧರು ದೇಶದ ಆಸ್ತಿ, ದೇಶ ಕಟ್ಟುವಲ್ಲಿ ನಿಮ್ಮ ಪಾತ್ರ ಹಿರಿದು. ಮಕ್ಕಳಿಂದ ಪರಿತ್ಯಕ್ತರಾದವರ ಸಂಧ್ಯಾಕಾಲದ ಜೀವನ ಸುಗಮವಾಗಿ ನಡೆಸಲು ವೃದ್ಧಾಪ್ಯ ವೇತನ ಸಹಾಯಕವಾಗಿದೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಮಾಸಾಶನ ಜಮೆಯಾಗುತ್ತದೆ ಎಂದರು.
ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ, ಹೊಸದಾಗಿ ಅರ್ಜಿ ಸಲ್ಲಿಸುವವರು ನವೋದಯ ಆ್ಯಪ್ ಮೂಲಕ ಅರ್ಜಿ ಸಲ್ಲಿಸಿದರೆ 45 ದಿನಗಳಲ್ಲಿ ಯೋಜನೆಯನ್ನು ಮಂಜೂರು ಮಾಡಿ ಫಲಾನುಭವಿಗಳ ಮನೆಬಾಗಿಲಿಗೆ ಆದೇಶಪತ್ರ ತಲುಪಿಸಲಾಗುವುದು. ಕೋವಿಡ್ ಸಂಕಷ್ಟ ಕಾಲದಲ್ಲಿ ಕೇಂದ್ರ ಸರ್ಕಾರ ಎರಡು ವರ್ಷಗಳಿಂದ ದೇಶದ 80 ಕೋಟಿ ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸುತ್ತಿದೆ. ಉಜ್ವಲ ಯೋಜನೆ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ, ತಹಶೀಲ್ದಾರ್ ಸತ್ಯನಾರಾಯಣ, ಉಪ ತಹಶೀಲ್ದಾರ್ ಫಾತೀಮಾ, ಹಿರೇಗುಂಟನೂರು ಉಪ ತಹಶೀಲ್ದಾರ್ ಪ್ರೇಮಲತಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ, ಸದಸ್ಯರಾದ ಲಾವಣ್ಯ, ಪವಿತ್ರ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್