ರೈತರ ಬದುಕು ಹಸನಾಗಿಸಲು ಕ್ರಮ

•ಕೃಷಿ ತಜ್ಞರು-ವಿಜ್ಞಾನಿಗಳು ಸಂಶೋಧನೆ ನಡೆಸಿ ಅನ್ನದಾತರಿಗೆ ನೆರವು ನೀಡಲಿ: ವಿನೋತ್‌ ಪ್ರಿಯಾ

Team Udayavani, Jun 2, 2019, 10:45 AM IST

cd-tdy-1..

ಚಿತ್ರದುರ್ಗ: ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಹಾಗೂ ಪ್ರಗತಿಪರ ರೈತರ ಸಭೆ ನಡೆಯಿತು.

ಚಿತ್ರದುರ್ಗ: ಕಳೆದ ಏಳು ವರ್ಷಗಳಿಂದ ಜಿಲ್ಲೆ ಸತತ ಬರಕ್ಕೆ ತುತ್ತಾಗಿದೆ. ಜಿಲ್ಲೆಯ ಮಳೆಯ ಪ್ರಮಾಣವನ್ನು ಆಧರಿಸಿ ಇಲ್ಲಿನ ಹವಾಗುಣಕ್ಕೆ ಅನುಗುಣವಾಗಿ ರೈತರ ಬದುಕನ್ನು ಹಸನಾಗಿಸಲು ಸಲಹಾತ್ಮಕ ಪ್ಯಾಕೇಜ್‌ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಕೃಷಿ, ತೋಟಗಾರಿಕೆ, ಬೆಳೆ ವಿಮೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು, ಕೃಷಿ, ತೋಟಗಾರಿಕೆ ತಜ್ಞರು, ಪ್ರಗತಿಪರ ರೈತರೊಂದಿಗೆ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸತತ ಬರದಿಂದಾಗಿ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ಇದರಿಂದ ಕುಡಿಯುವ ನೀರಿಗೂ ಸಮಸ್ಯೆ ಇದೆ. ಜಿಲ್ಲೆಯ ವರ್ಷದ ವಾಡಿಕೆ ಮಳೆ 750 ಮಿಮೀ ಇದ್ದು, ವರ್ಷಕ್ಕೆ 550 ಮಿಮೀ ಮಳೆಯಾಗುತ್ತಿದೆಯಾದರೂ ಸಕಾಲದಲ್ಲಿ ಆಗುತ್ತಿಲ್ಲ. ಕೇವಲ ಅಂಕಿ-ಅಂಶಗಳಲ್ಲಿ ಮಳೆಯ ಪ್ರಮಾಣ ದಾಖಲಾಗುತ್ತಿದೆ. ಭೂಮಿಯಲ್ಲಿ ಇಂಗಿ ಕೃಷಿಗೆ ಅಥವಾ ಅಂತರ್ಜಲ ವೃದ್ಧಿಗೆ ಬೇಕಾಗುವಷ್ಟು ಪ್ರಮಾಣದಲ್ಲಿ ಮಳೆ ಆಗುತ್ತಿಲ್ಲ. ಜಿಲ್ಲೆಯ ರೈತರು ಸಂಪೂರ್ಣವಾಗಿ ಮಳೆಯನ್ನೇ ಆಶ್ರಯಿಸಿದ್ದು, ಪ್ರತಿ ವರ್ಷ ಮುಂಗಾರು ಹಂಗಾಮಿಗೆ ಭೂಮಿ ಸಿದ್ಧಪಡಿಸಿ, ಬಿತ್ತನೆ ಮಾಡಿ, ಮಳೆ ಹಾಗೂ ಬೆಳೆಗೆ ಕಾಯುವ ಸ್ಥಿತಿ ಇದೆ. ಮಳೆ ಕೊರತೆಯಿಂದ ಬಿತ್ತಿದ ಬೆಳೆ ರೈತನ ಕೈ ಸೇರುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿನ ಹಿಂದಿನ ಮಳೆಯ ಪ್ರಮಾಣ, ಹವಾಗುಣ ಹಾಗೂ ಭೂಮಿಯ ಗುಣಮಟ್ಟಕ್ಕೆ ಅನುಗುಣವಾಗಿ ಕೃಷಿ ತಜ್ಞರು, ವಿಜ್ಞಾನಿಗಳು, ಸಂಶೋಧನೆ ನಡೆಸಿ ರೈತರು ಯಾವ ಬೆಳೆ ಬೆಳೆಯಬೇಕು, ಕೃಷಿ, ತೋಟಗಾರಿಕೆ ಅಥವಾ ಅರಣ್ಯೀಕರಣ, ಹೈನುಗಾರಿಕೆಯಲ್ಲಿ ಅನುಸರಿಸಬೇಕಾದ ಕ್ರಮಗಳೇನು, ಬೆಳೆಗಳ ಮಾದರಿ ಕುರಿತು ರೈತರಿಗೆ ಸಲಹಾತ್ಮಕವಾದ ಪ್ಯಾಕೇಜ್‌ ಸಿದ್ಧಪಡಿಸಿ ಪ್ರತಿಯೊಬ್ಬ ರೈತರಿಗೂ ತಲುಪಿಸುವ ಕಾರ್ಯ ಆಗಬೇಕು. ಆದರೆ ಅಂತಿಮವಾಗಿ ಯಾವ ಬೆಳೆ ಬೆಳೆಯುವುದು ಹಾಗೂ ಯಾವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುದು ಸೂಕ್ತ ಎಂಬ

ಅಂತಿಮ ನಿರ್ಧಾರ ರೈತರದೇ ಆಗಿರಬೇಕು. ಇಂಥದ್ದೇ ಬೆಳೆ ಬೆಳೆಯುವಂತೆ ಒತ್ತಾಯ ಹೇರುವುದು ಸರಿಯಲ್ಲ. ಈ ದಿಸೆಯಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಅರಣ್ಯ ಇಲಾಖೆಗಳು ತೋಟಗಾರಿಕೆ ವಿವಿ, ಕೃಷಿ ವಿಜ್ಞಾನ ಕೇಂದ್ರದ ಕೃಷಿ ತಜ್ಞರು, ಕೃಷಿ ವಿಜ್ಞಾನಿಗಳು ಕೂಡಲೇ ಕಾರ್ಯೋನ್ಮುಖರಾಗಬೇಕು. ಇದರಲ್ಲಿ ಪ್ರಗತಿಪರ ರೈತರ ಸಲಹೆಗಳಿಗೂ ಆದ್ಯತೆ ನೀಡಬೇಕು. ಸಾಧ್ಯವಾದಲ್ಲಿ ಜಿಲ್ಲೆಯಲ್ಲಿ ರೈತರ ಕ್ಲಬ್‌ಗಳನ್ನು ಪ್ರಾರಂಭಿಸಿದರೆ ಕೃಷಿ ಚಟುವಟಿಕೆ, ತಂತ್ರಜ್ಞಾನಗಳ ವಿಚಾರ ವಿನಿಮಯಕ್ಕೆ ಸೂಕ್ತ ವೇದಿಕೆ ದೊರೆಯಲಿದೆ ಎಂದು ಸಲಹೆ ನೀಡಿದರು.

ಮಳೆ ಕೊರತೆಯಿಂದ ರೈತರು ಉತ್ತಮ ಬೆಳೆ, ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆಹಾರ ಧಾನ್ಯಗಳನ್ನು ರೈತ ಸ್ವಂತ ಬಳಕೆಗೆ ದಾಸ್ತಾನು ಮಾಡಿಕೊಳ್ಳುತ್ತಿದ್ದು, ಇತರರಿಗೆ ಮಾರಾಟ ಮಾಡುವಷ್ಟು ಪ್ರಮಾಣದಲ್ಲಿ ಬೆಳೆ ಲಭ್ಯವಾಗುತ್ತಿಲ್ಲ. ಇದು ರೈತರ ಆರ್ಥಿಕ ಸಬಲತೆಗೆ ತೀವ್ರ ಹಿನ್ನಡೆಯಾಗಲು ಕಾರಣವಾಗಿದೆ. ಅನ್ನದಾತ ಬದುಕಬೇಕು, ಇತರರನ್ನೂ ಬದುಕಿಸುವಂತೆ ರೈತನಿಗೆ ಬಲ ನೀಡಬೇಕಿದೆ. ಈ ದಿಸೆಯಲ್ಲಿ ರೈತರು ಕೇವಲ ಕೃಷಿ ಮೇಲಷ್ಟೇ ಅವಲಂಬಿತರಾಗದೆ ಹೈನುಗಾರಿಕೆ, ಪುಷ್ಪ ಕೃಷಿ, ಅಣಬೆ ಕೃಷಿ ಮುಂತಾದ ನಿತ್ಯ ಆದಾಯ ತರಬಲ್ಲ ಉಪ ಕಸುಬನ್ನು ಕೈಗೊಳ್ಳುವಂತಾಗಬೇಕು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಸಿ. ಸತ್ಯಭಾಮ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೆನವರ್‌, ಅರಣ್ಯ ಇಲಾಖೆ ಅಧಿಕಾರಿ ಮಂಜುನಾಥ್‌, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಓಂಕಾರಪ್ಪ ಭಾಗವಹಿಸಿದ್ದರು.

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

18

Road mishap: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ; ಓರ್ವ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.