ಕಾರ್ಯಕರ್ತರು ಪಕ್ಷದ ಆಧಾರಸ್ತಂಭ
Team Udayavani, Mar 10, 2019, 11:23 AM IST
ಚಿತ್ರದುರ್ಗ: ಭಾರತೀಯಗೆ ಪ್ರಧಾನಿ ನರೇಂದ್ರ ಮೋದಿ ಐದು ವರ್ಷಗಳ ಕಾಲ ಏನು ಕೊಡುಗೆ ನೀಡಿದರು, ಅವರ ಸಾಧನೆ ಏನು ಎನ್ನುವ ವಿಚಾರವನ್ನು ಮನೆ ಮನೆಗೆ ತಲುಪಿಸುವ ಹೊಣೆಗಾರಿಕೆ ಬೂತ್ ಮಟ್ಟದ ಕಾರ್ಯಕರ್ತರ ಮೇಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್ ಕರೆ ನೀಡಿದರು.
ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಶಕ್ತಿ ಕೇಂದ್ರದ ಪ್ರಮುಖರ ಸಭೆ ನಡೆಸಿ ಮಾತನಾಡಿದ ಅವರು, ಬೂತ್ ಮಟ್ಟದ ಕಾರ್ಯಕರ್ತರು ಪಕ್ಷದ ಆಧಾರಸ್ತಂಭಗಳು, ಬೇರು ಮಟ್ಟದಲ್ಲಿ ಪಕ್ಷ ಬಲಿಷ್ಠವಾಗಿ ಕಟ್ಟಲು ಬೂತ್ ಮಟ್ಟದ ಕಾರ್ಯಕರ್ತರ ಶ್ರಮ ಸಾಕಷ್ಟಿರುತ್ತದೆ. ಲೋಕಸಭಾ ಚುನಾವಣೆಗಾಗಿ ಸತತ ಪರಿಶ್ರಮ ಹಾಕಬೇಕು. ಬಿಜೆಪಿಗೆ ಮತ ನೀಡುವಂತೆ ಮತದಾರರ ಮನವೊಲಿಸುವ ಕಾರ್ಯ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಪ್ರತಿಯೊಂದು ಬೂತ್ನಲ್ಲಿನ ಒಬ್ಬೊಬ್ಬರಿಗೆ ಐದು ಬೂತ್ಗಳ ಜವಾಬ್ದಾರಿ ವಹಿಸಲಾಗಿದೆ. ಸ್ಟಿಕ್ಕರ್ ಅಂಟಿಸಿ ಕರಪತ್ರವನ್ನು ಮನೆ ಮನೆಗೆ ವಿತರಿಸಿ ಪ್ರಧಾನಿ ಮೋದಿಯವರ ಸಾಧನೆಯನ್ನು ಜನತೆಗೆ ಮನವರಿಕೆ ಮಾಡಬೇಕು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎರಡನೇ ಬಾರಿ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವಂತೆ ಮನವಿ ಮಾಡಿದರು.
ಬಹುತೇಕ ಜನರು ಕೇಂದ್ರ ಸರ್ಕಾರದ ಫಲಾನುಭವಿಗಳೇ ಆಗಿರುತ್ತಾರೆ. ನಿಮ್ಮ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷದ ಪರ ಪ್ರಚಾರ ಪ್ರಾರಂಭಿಸಿ ಅದಕ್ಕಾಗಿ ಸಂಘಟನೆಯಿಂದ ಒಬ್ಬರು ರಾಜಕೀಯವಾಗಿ ಒಬ್ಬರನ್ನು ಜೋಡಿಸಿದ್ದೇವೆ.
ಹತ್ತು ಶಕ್ತಿ ಕೇಂದ್ರಗಳಲ್ಲಿ ಎರೆಡೆರಡು ಸಭೆ ನಡೆಸಿ ವಿಶೇಷ ಗಮನ ಕೊಡಿ ಎಂದು ಶಕ್ತಿ ಕೇಂದ್ರದ ಪ್ರಮುಖರಿಗೆ ತಿಳಿಸಿದರು. ವಿಭಾಗೀಯ ಸಹಪ್ರಭಾರಿ ಜಿ.ಎಂ. ಸುರೇಶ್, ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಶ್ ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಕಲ್ಲೇಶಯ್ಯ, ವಕ್ತಾರ ನಾಗರಾಜ ಬೇದ್ರೆ, ನಗರಾಧ್ಯಕ್ಷ ತಿಪ್ಪೇಸ್ವಾಮಿ, ಶಿವಣ್ಣಾಚಾರ್, ಖಜಾಂಚಿ ನರೇಂದ್ರ, ಸತೀಶ್ ಇದ್ದರು.
ದೇಶದೆಲ್ಲೆಡೆ ಮೋದಿ ಪರ ವಾತಾವರಣವಿದೆ. ದೇಶಕ್ಕೆ ಬಲಿಷ್ಠ ಪ್ರಧಾನಿ ಬೇಕು ಎಂದು ಬಹುಜನರು ನಿರೀಕ್ಷಿಸಿದಂತೆ ಕೆಲಸ ಮಾಡಿದ್ದಾರೆ. ಎಂತಹ ಸವಾಲು-ಸಮಸ್ಯೆಗಳು ಎದುರಾದರೂ ಸಮರ್ಥವಾಗಿ ನಿಭಾಯಿಸಿದ್ದಾರೆ. ರೈತರ ಖಾತೆಗಳಿಗೆ ನೇರವಾಗಿ ಎರಡು ಸಾವಿರ ರೂ.ಜಮಾ ಆಗುವಂತೆ ಮಾಡಿದ್ದಾರೆ. ಆಯುಷ್ಮಾನ್ ಭಾರತ್ ಸೇರಿದಂತೆ 300ಕ್ಕೂ ಹೆಚ್ಚು ಜನಪರ ಯೋಜನೆಗಳನ್ನು ದೇಶದ ಜನತೆಗೆ ಕೊಡುಗೆಯಾಗಿ ನೀಡಿದ್ದಾರೆ.
ಕೆ.ಎಸ್. ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ