ಮುದ್ರಣ ಮಾಧ್ಯಮದ ಸಂಕಷ್ಟ ದೂರವಾಗಲಿ: ರಾಜ್ಯ ಬಿಜೆಪಿ ವಕ್ತಾರ ಜಗ್ಗೇಶ್  

ಸಾಮಾಜಿಕ ಜಾಲತಾಣ ಸದ್ಬಳಕೆ ಅಗತ್ಯ

Team Udayavani, Mar 29, 2021, 9:08 PM IST

Untitled-10

ಚಿತ್ರದುರ್ಗ: ತಲೆ ಬುಡವಿಲ್ಲದ ಸಾಮಾಜಿಕ ಜಾಲತಾಣದ ಮೇಲೆ ಅವಲಂಬಿತರಾಗುವ ಬದಲು ಇಂದಿನ ತಾಂತ್ರಿಕ ಯುಗದಲ್ಲೂ ಮುದ್ರಣ ಮಾಧ್ಯಮ ನಂಬಿಕೆ ಉಳಿಸಿಕೊಂಡಿದೆ. ಈ ನಿಟ್ಟಿನಲ್ಲಿ ಪ್ರತಿ ದಿನ ಕನಿಷ್ಟ ಎರಡು ಪತ್ರಿಕೆಗಳನ್ನಾದರೂ ಓದುವ ಅಭ್ಯಾಸ ಮಾಡಿಕೊಳ್ಳಿ ಎಂದು ರಾಜ್ಯ ಬಿಜೆಪಿ ವಕ್ತಾರ, ಮಾಜಿ ಶಾಸಕ, ನಟ ಜಗ್ಗೇಶ್‌ ಕರೆ ನೀಡಿದರು.

ಬಿಜೆಪಿಯ ದಾವಣಗೆರೆ ವಿಭಾಗದ ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳ ತಾಲ್ಲೂಕು ಬಿಜೆಪಿ ಮಾಧ್ಯಮ ಸಂಚಾಲಕರು ಹಾಗೂ ಸಹ ಸಂಚಾಲಕರಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ಮಾಧ್ಯಮ ಮಂಥನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಕನಸುಗಳು ಸಾಕಾರಗೊಳ್ಳಲು ಮಾಧ್ಯಮ ಅತಿ ಮುಖ್ಯ. ಶರವೇಗದಲ್ಲಿ ಸುಳ್ಳು ಸುದ್ದಿಗಳನ್ನು ಬಿತ್ತರಿಸುತ್ತಿರುವ ಸಾಮಾಜಿಕ ಜಾಲತಾಣದಿಂದ ಮುದ್ರಣ ಮಾಧ್ಯಮ ಸಂಕಷ್ಟಕ್ಕೊಳಗಾಗಿದೆ. ಆದರೆ ತನ್ನ ಶಕ್ತಿಯನ್ನು ಕಳೆದುಕೊಂಡಿಲ್ಲ. ಸಾಮಾಜಿಕ ಜಾಲತಾಣವನ್ನು ಸರಿಯಾಗಿ ಬಳಿಸಿಕೊಂಡಿರುವುದು ನಮ್ಮ ಪ್ರಧಾನಿ ನರೇಂದ್ರ ಮೋದಿ ಮಾತ್ರ. ಇದು ಸ್ಪರ್ಧಾತ್ಮಕ ಯುಗ, ಆದರೆ ಯಾವ ಕಾರಣಕ್ಕೂ ಉದ್ವೇಗ, ದ್ವೇಷದ ಮನೋಭಾವ ಬೇಡ. ಯಾರನ್ನೂ ಉತ್ಪ್ರೆಕ್ಷೆ, ಅಣಕ ಮಾಡಬಾರದು. ಬಿಜೆಪಿ ಶ್ರದ್ಧೆಯಿಂದ ಕಟ್ಟಿದ ಪಕ್ಷ. ಇಲ್ಲಿ ಕಲಿಯುವ ಆಸಕ್ತಿ ಮತ್ತು ಶ್ರದ್ಧೆ ಇದ್ದರೆ ಜ್ಞಾನ ಪ್ರಾಪ್ತಿಯಾಗುತ್ತದೆ ಎಂದರು.

ನಡೆ-ನುಡಿ ಸರಿಯಿದ್ದರೆ ದೇವರು ಕೈಹಿಡಿದು ನಡೆಸುತ್ತಾನೆ. ಆರಂಭದಲ್ಲಿ ಏನೂ ಅರಿವಿಲ್ಲದೆ ಕಾಂಗ್ರೆಸ್‌ ಸೇರಿ ಇದ್ದ ಎಲ್ಲವನ್ನೂ ಕಳೆದುಕೊಂಡು ಕೊನೆಗೆ ಮಂತ್ರಾಲಯದ ರಾಘವೇಂದ್ರಸ್ವಾಮಿ ಸನ್ನಿ  ಧಿಗೆ ಹೋಗಿ ಕಣ್ಣೀರು ಸುರಿಸಿದೆ. ಅಲ್ಲಿಂದ ಲಕ್ಷಾಂತರ ಅಭಿಮಾನಿಗಳು ನನ್ನನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ಸ್ಪರ್ಧಿಸುವಂತೆ ಒತ್ತಾಯಿಸಿ ಗೆಲ್ಲಿಸಿದರು ಎಂದು ಸ್ಮರಿಸಿಕೊಂಡರು.

ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಮಾಧ್ಯಮ ಮತ್ತು ರಾಜಕೀಯದ ನಡುವೆ ಸಂಘರ್ಷ-ಸಾಮರಸ್ಯದ ಸಂಬಂಧವಿದೆ. ತಾಜಾ ಸುದ್ದಿಗಳನ್ನು ಕೊಡುವುದು ಅನಿವಾರ್ಯ. ರಾಜಕಾರಣಿಗಳು ಒಳ್ಳೆಯದು ಮಾಡಿದಾಗ ಬೆನ್ನು ತಟ್ಟುವುದು, ಕೆಟ್ಟದ್ದನ್ನು ಮಾಡಿದಾಗ ಎಚ್ಚರಿಸುವ ಜವಾಬ್ದಾರಿ ಮಾಧ್ಯಮದ ಮೇಲಿದೆ ಎಂದು ತಿಳಿಸಿದರು.

ಹಾಲಾಹಲದ ರಾಜಕಾರಣದಲ್ಲಿ ಸತ್ಯವನ್ನೇ ತೋರಿಸಬೇಕು. ಬಿಜೆಪಿ ನಿಮ್ಮನ್ನು ಸೈನಿಕರಂತೆ ಸಿದ್ಧಗೊಳಿಸುತ್ತಿದೆ. ಪಕ್ಷದ ವಾಗ್ಧಾನ ಜಾರಿಗೊಳಿಸಬೇಕಾದರೆ ಮಾಧ್ಯಮ ಸಂಚಾಲಕರು, ಸಹ ಸಂಚಾಲಕರು ಮಾಹಿತಿ ವಿನಿಮಯ ಮಾಡಿಕೊಳ್ಳುವಲ್ಲಿ ಮಾಧ್ಯಮದವರೊಡನೆ ಆರೋಗ್ಯಪೂರ್ಣ ಸಂಬಂಧ ಇಟ್ಟುಕೊಂಡು ಸಮಾಜಮುಖೀಯಾಗಿ ಕೆಲಸ ಮಾಡಬೇಕು ಎಂದರು.

ಆಳುವ ಸರ್ಕಾರಗಳು ಮದಗಜದಂತೆ. ಕಾಲ ಕಾಲಕ್ಕೆ ಅಂಕುಶ ಹಾಕಿ ಪಳಗಿಸುವ ಕೆಲಸ ಮಾಧ್ಯಮ ಮಾಡಬೇಕಿದೆ. ಪ್ರತಿಭೆ, ಬದ್ಧತೆ ಇದ್ದರೆ ಎಂತಹ ಕಠಿಣ ಹಾದಿ ಇದ್ದರೂ ಯಶಸ್ಸಿನ ತುತ್ತ ತುದಿ ಏರಬಹುದು ಎಂದು ತಿಳಿಸಿದರು. ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್‌, ರಾಜ್ಯ ಮಾಧ್ಯಮ ಸಂಚಾಲಕರಾದ ಅವಿನಾಶ್‌, ಕೆಂಡೋಜಿ, ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್‌, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್‌. ನವೀನ್‌, ಖನಿಜ ನಿಗಮದ ಅಧ್ಯಕ್ಷ ಎಸ್‌. ಲಿಂಗಮೂರ್ತಿ ಮತ್ತಿತರರು ಭಾಗವಹಿಸಿದ್ದರು. ಡಿ.ಒ. ಮುರಾರ್ಜಿ ಪ್ರಾರ್ಥಿಸಿದರು. ಕೊಪ್ಪಳ ನಾಗರಾಜ್‌ ಸ್ವಾಗತಿಸಿದರು. ವಕ್ತಾರ ನಾಗರಾಜ್‌ ಬೇದ್ರೆ ನಿರೂಪಿಸಿದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.