ಗಾಳಿ-ಬೆಳಕಿನಷ್ಟೇ ಯೋಗವೂ ಅನಿವಾರ್ಯ
Team Udayavani, May 22, 2018, 4:40 PM IST
ಚಿತ್ರದುರ್ಗ: ಮನುಷ್ಯನಿಗೆ ಗಾಳಿ, ಬೆಳಕು, ನೀರು ಎಷ್ಟು ಮುಖ್ಯವೋ ಯೋಗವೂ ಅಷ್ಟೇ ಅನಿವಾರ್ಯ. ಇದು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ನಗರದ ಈಶ್ವರೀಯ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಯೋಗ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಯೋಗದ ಬಗ್ಗೆ ಯುವಕರಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ವಿಶ್ವ ಯೋಗ ದಿನ ಘೋಷಿಸಿದರು. ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಯೋಗಕ್ಕೆ ವಿಶೇಷ ಸ್ಥಾನ ನೀಡಿ ಗೌರವಿಸಲಾಗಿದೆ. ಆಧುನಿಕ ವೈದ್ಯಕೀಯ ಚಿಕಿತ್ಸೆಯಿಂದ ಗುಣವಾಗದ ಕಾಯಿಲೆಗಳನ್ನು ಯೋಗ ಗುಣಪಡಿಸಿದೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಯೋಗ ಮಾಡುವುದರಿಂದ ಏಕಾಗ್ರತೆ ಸಾಧಿಸಬಹುದು. ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಯೋಗ ಸಾಧನೆಯ ಅವಶ್ಯಕತೆ ಹೆಚ್ಚಿದೆ. ನಾವು ಉಪಯೋಗಿಸುವ ಆಹಾರ, ನೀರು, ಉಸಿರಾಡುವ ಗಾಳಿ ಎಲ್ಲವೂ ಮಲಿನಗೊಂಡಿದೆ. ಇದರಿಂದ ರೋಗ ರುಜಿನಗಳಿಂದ ಬಳಲುವಂತಾಗಿದೆ.
ಇವುಗಳಿಂದ ಸಾಧ್ಯವಿರುವಷ್ಟು ವಿಮುಕ್ತರಾಗಿ ಆರೋಗ್ಯವಂತರಾಗಿ, ದೀರ್ಘಾಯುಗಳಾಗಿ ಬದುಕಿ ಬಾಳಲು ಯೋಗಾಭ್ಯಾಸ, ಪ್ರಕೃತಿ ಚಿಕಿತ್ಸೆ ಅಗತ್ಯ. ಯೋಗಾಸನ ಮನುಷ್ಯನ ಶರೀರದ ರಚನಾ ಶಾಸ್ತ್ರದ ಆಧಾರದ ಮೇಲೆ ನಿಂತಿದೆ.
ಯೋಗಾಸನವೆಂಬುದು ಜಗತ್ತಿಗೆ ಭಾರತದ ದೊಡ್ಡ ಕೊಡುಗೆ. ಯೋಗಾಭ್ಯಾಸದಿಂದ ಜೀರ್ಣಾಂಗಗಳ ಶಕ್ತಿ ವೃದ್ಧಿಗೊಳ್ಳುತ್ತದೆ. ಇದರಿಂದ ಹಲವಾರು ರೋಗಗಳನ್ನು ತಡೆಗಟ್ಟಬಹುದು. ಶರೀರ ಸ್ವಾಸ್ಥ್ಯಕ್ಕಾಗಿ ಕೆಲವು ಯೋಗಾಸನಗಳನ್ನಾದರೂ ನಮ್ಮ ನಿತ್ಯ ಜೀವನದಲ್ಲಿ ಆಚರಣೆಯಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಹೇಳಿದರು.
ಮುಖ್ಯ ಆಯುಷ್ ಅಧಿಕಾರಿ ಸಿದ್ಧೇಶ್ವರ, ಯೋಗ ಗುರುಗಳಾದ ರಾಘವೇಂದ್ರ, ಸೋಮಣ್ಣ, ಹೇಮಾವತಿ, ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಇದ್ದರು.
ಬದಲಾಗುತ್ತಿರುವ ಆಧುನಿಕ ಆಹಾರ ಪದ್ಧತಿಯಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಉಂಟಾಗುತ್ತಿದೆ.
ಯೋಗ ಮಾಡುವುದರಿಂದ ಕಾಯಿಲೆಯಿಂದ ದೂರ ಇರಬಹುದು. ಆರೋಗ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಪ್ರತಿ ದಿನ ಯೋಗ ಮಾಡುವುದನ್ನು ಕಲಿಯಬೇಕು.
ಜಿ.ಎಚ್. ತಿಪ್ಪಾರೆಡ್ಡಿ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ