ಕೆಪಿಜೆಪಿಯಿಂದ ಜಿಲ್ಲೆಯ ಎಲ್ಲ ಕ್ಷೇತ್ರದಲ್ಲಿ ಸ್ಪರ್ಧೆ
Team Udayavani, Feb 6, 2018, 6:41 PM IST
ಚಿತ್ರದುರ್ಗ: ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ವತಿಯಿಂದ ಮುಂಬರುವ ವಿಧಾನ ಸಭಾ ಚುನಾವಣೆಗೆ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಗಜೇಂದ್ರ ಶರ್ಮಾ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ಪರ್ಧೆ ಮಾಡಬಯಸುವ ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಅರ್ಹ, ಉತ್ತಮ ಚಾರಿತ್ರ ಹಾಗೂ ಗೆಲ್ಲುವ ಸಾಮರ್ಥ್ಯವುಳ್ಳ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.
ಪಕ್ಷದ ಸಂಸ್ಥಾಪಕ ಅಧ್ಯಕ್ಷ ಡಿ. ಮಹೇಶ್ ಗೌಡ್ರು ಮತ್ತು ರಾಷ್ಟ್ರೀಯ ಅಧ್ಯಕ್ಷ ಉಪೇಂದ್ರ ಕುಮಾರ್ ಆದೇಶ ಮತ್ತು ಮಾರ್ಗದರ್ಶನದಲ್ಲಿ ಪಕ್ಷ ಸದೃಢವಾಗಲಿದೆ. ಸಮೃದ್ಧ ಕರ್ನಾಟಕ ನಿರ್ಮಾಣದೊಂದಿಗೆ ಲಂಚಮುಕ್ತ ಮತ್ತು ಪಾರದರ್ಶಕ ಆಡಳಿತ ನೀಡಲು ಕಟಿಬದ್ಧವಾಗಿದ್ದೇವೆ. ರಾಷ್ಟ್ರೀಯ ಪಕ್ಷಗಳ ದುರಾಡಳಿತಕ್ಕೆ ಸೋತು ಹೋಗಿರುವ ಮತದಾರರು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಪಕ್ಷ ಎಲ್ಲ ವರ್ಗದವರ ಹಿತ ಕಾಯಲಿದೆ. ಅದರಲ್ಲೂ ರೈತರು, ವಿದ್ಯಾರ್ಥಿಗಳು, ಕಾರ್ಮಿಕರು, ನಿರುದ್ಯೋಗಿಗಳು, ಮಹಿಳೆಯರು, ಬಡವರ ಸಬಲೀಕರಣಕ್ಕಾಗಿ ಶ್ರಮಿಸಲಿದೆ ಎಂದು ಹೇಳಿದರು.
ಪಕ್ಷದ ಸಾರ್ವಜನಿಕ ಸಂಪರ್ಕಾಧಿಕಾರಿ ತಟ್ಟೇಕೆರೆ ಮಲ್ಲೇಶ್ ಮಾತನಾಡಿ, ಪ್ರಗತಿಪರ ರೈತರಿಂದ ಹಿಡಿದು ಪಾರದರ್ಶಕವಾಗಿರುವ ಎಲ್ಲರನ್ನೂ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿಯೂ ಸ್ಪರ್ಧೆಗಿಳಿಸುವುದಾಗಿ ತಿಳಿಸಿದರು.
ಇಲ್ಲಿಯವರೆಗೂ ಆಡಳಿತ ನಡೆಸಿಕೊಂಡು ಬರುತ್ತಿರುವ ಎಲ್ಲಾ ಪಕ್ಷಗಳು ಒಂದಲ್ಲ ಒಂದು ರೀತಿಯಲ್ಲಿ ನಾಡಿನ ಸಂಪತ್ತನ್ನು ಲೂಟಿ ಮಾಡಿವೆ. ಚಿತ್ರದುರ್ಗದಲ್ಲಿ ಯಾವ ರಸ್ತೆಯೂ ಸರಿಯಾಗಿಲ್ಲ. ಇಲ್ಲಿನ ಜನಪ್ರತಿನಿ ಧಿಗಳು ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆಂಬುದು ಒಮ್ಮೆ ಇಲ್ಲಿ ಸುತ್ತಾಡಿದರೆ
ಗೊತ್ತಾಗುತ್ತದೆ ಎಂದು ಲೇವಡಿ ಮಾಡಿದರು. ಆಸಕ್ತ, ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ
ಮೊ: 9845114705/9986603226/988066 7527 ಸಂಪರ್ಕಿಸುವಂತೆ ಮನವಿ ಮಾಡಿದರು. ಕೆಪಿಜೆಪಿ ರಾಜ್ಯ ಉಪಾಧ್ಯಕ್ಷ ಆರ್. ಶಿವಕುಮಾರ್, ಮುಖಂಡ ಸಂಜಯ್ ಶರ್ಮಾ ಸುದ್ದಿಗೋಷ್ಠಿಯಲ್ಲಿದ್ದರು.
ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಹಲವಾರು ಜನ ನಮ್ಮ ಕಚೇರಿಗೆ ಅರ್ಜಿಗಳನ್ನು ಸಲ್ಲಿಸುತ್ತಿದ್ದಾರೆ. ಅಂತಿಮವಾಗಿ ಸಂದರ್ಶನ ನಡೆಸಿ ಭ್ರಷ್ಟಾಚಾರದಿಂದ ದೂರ ಇರುವವರನ್ನು ಹುಡುಕಿ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಲಾಗುವುದು.
ತಟ್ಟೇಕೆರೆ ಮಲ್ಲೇಶ್, ಕೆಪಿಜೆಪಿ ಸಾರ್ವಜನಿಕ ಸಂಪರ್ಕಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು