“ಕಾಂಗ್ರೆಸ್ನೊಂದಿಗಿನ ಮೈತ್ರಿ ಯಾದವರಿಗೆ ಮುಳುವಾಯ್ತು’
Team Udayavani, May 9, 2017, 3:45 AM IST
ಚಿತ್ರದುರ್ಗ: “ನಾನು ಪ್ರಧಾನಮಂತ್ರಿ ಹುದ್ದೆಯಿಂದ ಇಳಿದ ನಂತರ ಎಲ್ಲಾ ರಾಜ್ಯಗಳ ಪ್ರಾದೇಶಿಕ ಪಕ್ಷಗಳ ನಾಯಕರು ಒಮ್ಮತದಿಂದ ಮುಲಾಯಂಸಿಂಗ್ ಯಾದವ್ ಅವರನ್ನು ಪ್ರಧಾನಿ ಮಾಡಲು ಸಜ್ಜಾಗಿದ್ದೆವು.
ಆದರೆ ಶ್ರೀರಾಮನಿಗೆ ಪಟ್ಟಾಭಿಷೇಕ ಮಾಡಲು ಹೊರಟಾಗ ಮಂಥರೆ, ಕೈಕೇಯಿಯ ಮನಸ್ಸು ಕೆಡಿಸಿದ ಹಾಗೆ ಐ.ಕೆ. ಗುಜ್ರಾಲ್ ಅವರನ್ನು ಪ್ರಧಾನಿಯನ್ನಾಗಿಸಲು ನಿರ್ಧಾರ ಕೈಗೊಳ್ಳಲಾಯಿತು. ಹಾಗಾಗಿ ಮುಲಾಯಂಸಿಂಗ್ ಅವರಿಗೆ ಪ್ರಧಾನಿ ಪಟ್ಟ ತಪ್ಪಿತ್ತು. ಗುಜ್ರಾಲ್ ಅವರನ್ನು ಪ್ರಧಾನಿಯನ್ನಾಗಿಸಿದ ನಿರ್ಧಾರವನ್ನು ನಾನು ವಿರೋಧಿಸಿದ್ದೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಿಂದಿನ ದಿನಗಳ ಮೆಲುಕು ಹಾಕಿದರು.
ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೂಡ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗೆ ಉತ್ತರಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಅಖೀಲೇಶ್ ಯಾದವ್ ತಪ್ಪು ಮಾಡಿದ್ದಾರೆ. ಕಾಂಗ್ರೆಸ್ಗೆ 105 ಸ್ಥಾನ ನೀಡಿದರೂ ಕೇವಲ 7 ಸ್ಥಾನಗಳಲ್ಲಿ ಗೆದ್ದಿದೆ. ಒಂದು ರಾತ್ರಿಯಲ್ಲಿ ತೆಗೆದುಕೊಂಡ ದಿಢೀರ್ ನಿರ್ಧಾರ ಯಾದವರಿಗೆ ಮುಳುವಾಗಿದೆ. ಆತುರದ ನಿರ್ಧಾರ ಕೈಗೊಂಡಿದ್ದಕ್ಕೆ ಸರಿಯಾದ ಬೆಲೆ ತೆತ್ತರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ