ಅಂಬೇಡ್ಕರರದು ಬಹುಮುಖೀ ವ್ಯಕ್ತಿತ್ವ


Team Udayavani, Apr 15, 2021, 6:50 PM IST

ಹಜ್ಗಹಗಹದ್ಗಹಹ್ಗದ

ಚಿತ್ರದುರ್ಗ: ಅವಮಾನಗಳ ಪಾಕದಿಂದ ಎದ್ದು, ಸರ್ವರಿಗೂ ಸಮಪಾಲು, ಸಮಭಾಳು ಧ್ಯೇಯದೊಂದಿಗೆ ಭಾರತೀಯರ ಹಣೆಬರಹ ಬರೆದ ಭಾಷ್ಯಕಾರ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು.

ಭೋವಿ ಗುರುಪೀಠದಲ್ಲಿ ಬುಧವಾರ ನಡೆದ ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಅಂಬೇಡ್ಕರರನ್ನು ಕೇವಲ ಓರ್ವ ಸಂವಿಧಾನ ತಜ್ಞ, ಕಾನೂನು ತಜ್ಞ ಎಂದು ಬಿಂಬಿಸುತ್ತಿರುವುದು ವಿಷಾದನೀಯ. ಅವರ ಬಹುಮುಖೀ ಪ್ರತಿಭೆಯನ್ನು ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದರು. ಡಾ| ಅಂಬೇಡ್ಕರ್‌ ಈ ದೇಶದ ನದಿಗಳು, ನೀರಾವರಿ, ಜಲಮೂಲಗಳ ಸಂರಕ್ಷಣೆ ಕುರಿತಂತೆ ಸಾಕಷ್ಟು ಅಧ್ಯಯನ ನಡೆಸಿದ್ದಾರೆ. ಭಾರತದ ಪ್ರಪ್ರಥಮ ಸವಿಸ್ತಾರ ನೀರಾವರಿ ಪಾಲಿಸಿಯನ್ನು ರೂಪಿಸಿದ ಭಾರತ ಮೊದಲ ಜಲಸಂರಕ್ಷಣಾ ಹೋರಾಟಗಾರ ಅಂಬೇಡ್ಕರ್‌ ಎಂದು ಸ್ಮರಿಸಿದರು.

ಅಂಬೇಡ್ಕರ್‌ ಉತ್ತಮ ವಕೀಲ, ಅರ್ಥಶಾಸ್ತ್ರಜ್ಞ, ಸಮಾಜ ವಿಜ್ಞಾನಿ, ಆಡಳಿತಗಾರ, ತತ್ವಜ್ಞಾನಿ, ಸಂವಿಧಾನ ಶಿಲ್ಪಿ, ಮಾನವೀಯತೆಯ ಮಹಾಮೂರ್ತಿ, ಮಾನವ ಹಕ್ಕುಗಳ ಹೋರಾಟಗಾರ, ರಾಜಕೀಯ ತಜ್ಞ, ಸಮಾಜಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಇತಿಹಾಸ ತಜ್ಞ, ಖ್ಯಾತ ಚಿಂತಕ, ವಿಶ್ವಮಾನವ, ಆಧುನಿಕ ಭಾರತದ ನಿರ್ಮಾಪಕ, ಶಿಕ್ಷಣ ತಜ್ಞ ಹೀಗೆ ಪಟ್ಟಿ ಬೆಳೆಯುತ್ತಾ ಸಾಗುತ್ತದೆ. ಅವರು ದಲಿತರಾಗಿ ಹುಟ್ಟದೆ, ಮೇಲ್ವರ್ಗದಲ್ಲಿ ಜನಿಸಿದ್ದರೆ ದೈವಿಕ ಅವತಾರ ಪುರುಷರ ಸಾಲಿಗೆ ಸೇರಿಬಿಡುತ್ತಿದ್ದರು. ಆದರೆ ಪೂರ್ವಾಗ್ರಹ ಪೀಡಿತ ಮನಸ್ಸಿನಿಂದ ನೋಡದೆ, ವಾಸ್ತವ ಅರ್ಥೈಸಿಕೊಂಡರೆ ಬಡವರನ್ನು ಒಳಗೊಂಡ ಭಾರತದ ಭಾಗ್ಯವಿಧಾತ.

ಭಾರತೀಯರ  ಧೀಶಕ್ತಿ, ಜಾತಿ ವಿನಾಶದ ಜಾತ್ಯತೀತ ಶಕ್ತಿಯಾಗಿ ಡಾ| ಬಿ.ಆರ್‌. ಅಂಬೇಡ್ಕರ್‌ ರಾರಾಜಿಸುತ್ತಾರೆ ಎಂದು ಬಣ್ಣಿಸಿದರು. ಹೊಸದುರ್ಗ ಕುಂಚಿಟಿಗ ಗುರುಪೀಠದ ಡಾ| ಶಾಂತವೀರ ಸ್ವಾಮೀಜಿ ಮಾತನಾಡಿ, ಅಂಬೇಡ್ಕರರನ್ನು ಬುದ್ಧ, ಬಸವ, ಕನಕ, ವಾಲ್ಮೀಕಿ, ಪೈಗಂಬರರಂತೆ ಸಂತನಾಗಿ ನೋಡಬೇಕು. ಅಂಬೇಡ್ಕರ್‌ ಬಡವರ ಬೆಳಕು, ನೊಂದವರಿಗೆ ಅಸರೆ, ಅಕ್ಷರ ನೀಡಿದ ಕರುಣಾಕರ. ಇಷ್ಟೆಲ್ಲ ನೀಡಿದ ಮಹಾತ್ಮನನ್ನು ದಲಿತ ಎಂಬ ಕಾರಣಕ್ಕೆ ಉದಾಸೀನ ಭಾವದಿಂದ ನೋಡುವುದು ಸರಿಯಲ್ಲ. ಕಲಿಯುಗದಲ್ಲಿ ಎಲ್ಲ ಭಾರತೀಯರ ಧರ್ಮಗ್ರಂಥ ಸಂವಿಧಾನವನ್ನು ತಮ್ಮ ಪರಿಶ್ರಮದಿಂದ ಅವಮಾನ, ಅನುಮಾನ ಮೆಟ್ಟಿ ನಿಂತು, ಶಿಕ್ಷಣವೇ ದೊಡ್ಡ ಅಸ್ತ್ರ ಎಂಬುದನ್ನು ಸಾಧಿ ಸಿ ತೋರಿದ ಮಾರ್ಗದರ್ಶಕ ಅಂಬೇಡ್ಕರ್‌ ಎಂದರು. ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ಬಸವ ಹರಳಯ್ಯ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀಬಸವ ಪ್ರಭು ಸ್ವಾಮೀಜಿ, ನಗರಸಭೆ ನಾಮನಿರ್ದೇಶನ ಸದಸ್ಯ ತಿಮ್ಮಣ್ಣ, ಜಿಲ್ಲಾ ಭೋವಿ ಸಂಘದ ಕಾರ್ಯದರ್ಶಿ ಲಕ್ಷ್ಮಣ, ಖಜಾಂಚಿ ಈ. ಮಂಜುನಾಥ, ಯುವ ಮುಖಂಡ ನಾಗರಾಜ, ಹನುಮಂತ, ಶಿಕ್ಷಕ ಶ್ರೀಧರ, ಆನಂದ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.