ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಆ್ಯಪ್‌ ಬಿಡುಗಡೆ


Team Udayavani, Aug 11, 2020, 1:07 PM IST

ಪ್ರಾಣಿಗಳ ದತ್ತು ಸ್ವೀಕಾರಕ್ಕೆ ಆ್ಯಪ್‌ ಬಿಡುಗಡೆ

ಚಿತ್ರದುರ್ಗ: ಕರ್ನಾಟಕ ಮೃಗಾಲಯ ಪ್ರಾಧಿಕಾರ ಹೊರತಂದಿರುವ ಪ್ರಾಣಿಗಳ ದತ್ತು ಸ್ವೀಕಾರದ ಆ್ಯಪ್‌ನ್ನು ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಜಿಪಂ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, Zak ಆ್ಯಪ್‌ ಮೂಲಕ ಮೃಗಾಲಯ ವೀಕ್ಷಣೆಗೆ ಅನ್‌ಲೈನ್‌ ಟಿಕೆಟ್‌ ವ್ಯವಸ್ಥೆ ಹಾಗೂ ಪ್ರಾಣಿಗಳ ದತ್ತು ಸ್ವೀಕಾರ ಮತ್ತು ಮೃಗಾಲಯಕ್ಕೆ ದೇಣಿಗೆ ನೀಡುವವರಿಗೆ ಈ ಆ್ಯಪ್‌ ಸಹಕಾರಿಯಾಗಿದೆ ಎಂದರು.

ಮೃಗಾಲಯದ ಅಭಿವೃದ್ಧಿಗಾಗಿ ದೇಶದ ವಿವಿಧ ಭಾಗದಲ್ಲಿರುವ ಜನ ವೀಕ್ಷಣೆ, ಟಿಕೆಟ್‌ ಕಾಯ್ದಿರಿಸುವಿಕೆ, ದೇಣಿಗೆ ನೀಡಬಹುದು. ಚಿತ್ರದುರ್ಗದಲ್ಲಿನ ಮೃಗಾಲಯ ಅಭಿವೃದ್ಧಿಗೆ ದೇಣಿಗೆ ನೀಡುವವರು ಹಾಗೂ ಪ್ರಾಣಿಗಳ ದತ್ತು ಸ್ವೀಕಾರ ಪಡೆಯುವವರಿಗೆ ಈ ಆ್ಯಪ್‌ ಸಹಕಾರಿಯಾಗಿದೆ ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ್‌ ನಾಯ್ಕ ಮಾತನಾಡಿ, ಮೃಗಾಲಯ ವೀಕ್ಷಣೆಗೆ ಬರುವ ಸಾರ್ವಜನಿಕರ ಹಿತ ದೃಷ್ಟಿಯಿಂದ ಕೋವಿಡ್‌ ಮುಂಜಾಗ್ರತಾ ಕಾಪಾಡುವ ಸಲುವಾಗಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಲ್ಲುವ ಬದಲು ಆ್ಯಪ್‌ ಮೂಲಕ ಟಿಕೆಟ್‌ಗಳನ್ನು ಬುಕ್‌ ಮಾಡಿ ನೇರ ಪ್ರವೇಶ ಪಡೆಯಬಹುದು.

ಮೃಗಾಲಯಕ್ಕೆ ಭೇಟಿ ನೀಡುವ ಪ್ರಾಣಿ ಪ್ರಿಯರು ಪ್ರಾಣಿಗಳನ್ನು ದತ್ತು ಸ್ವೀಕಾರ ಮಾಡಲು ಈ ಅಪ್ಲಿಕೇಷನ್‌ ಸಹಕಾರಿಯಾಗಿದೆ. ಮೃಗಾಲಯಕ್ಕೆ ದೇಣಿಗೆ ನೀಡುವ ಎಲ್ಲಾ ಸಾರ್ವಜನಿಕರು ಈ ಆ್ಯಪ್‌ ಬಳಸಿ ಮೃಗಾಲಯವನ್ನು ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಘವೇಂದ್ರ ಮಾತನಾಡಿ ಕೋವಿಡ್‌ನಿಂದ ಮೃಗಾಲಯದ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ವಿರಳವಾಗಿದ್ದು, ಮೃಗಾಲಯ ನಿರ್ವಹಣೆ ವೆಚ್ಚ ಹೆಚ್ಚಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಪ್ರತಿ ದಿನ ಪ್ರಾಣಿಗಳಿಗೆ ಆಹಾರ ನೀಡಲು 1 ರಿಂದ 2 ಲಕ್ಷದ ವರೆಗೆ ಖರ್ಚು ಬರುತ್ತದೆ. ಹೊಸ ಪ್ರಾಣಿಗಳನ್ನು ತರಲು ತೊಂದರೆ ಆಗಿದೆ. ಹಾಗಾಗಿ ಪ್ರಾಣಿ ಪ್ರಿಯರು ಪ್ರಾಣಿಗಳ ದತ್ತು ಸ್ವೀಕಾರ ಮಾಡಬಹುದು ಹಾಗೂ ದೇಣಿಗೆ ನೀಡಬಹುದು ಎಂದು ಹೇಳಿದರು.

ಜಿಪಂ ಸಿಇಒ ಟಿ.ಯೊಗೇಶ್‌, ವಲಯ ಅರಣ್ಯಾಧಿಕಾರಿ ವಸಂತ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.