ನಾಲೆ-ಕೆರೆ ದುರಸ್ತಿಗೆ ಒತ್ತಾಯಿಸಿ ಮನವಿ ಸಲ್ಲಿಕೆ


Team Udayavani, Apr 21, 2022, 6:02 PM IST

lake-repair

ಮೊಳಕಾಲ್ಮೂರು: ತಾಲೂಕಿನ ರಂಗಯ್ಯನದುರ್ಗ ಜಲಾಶಯದ ಅಡಿಯಲ್ಲಿ ಬರುವ ಎಡ ಮತ್ತು ಬಲ ದಂಡೆ ನಾಲೆಗಳ ದುರಸ್ತಿ ಹಾಗೂ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಂಗಯ್ಯನದುರ್ಗ ಜಲಾಶಯ ವ್ಯಾಪ್ತಿಯ ಕೆರೆಗಳ ಮತ್ತು ಕಾಲುವೆಗಳ ನೀರು ಬಳಕೆದಾರರ ಸಂಘದಿಂದ ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಟಿ. ಸುರೇಶ್‌ಕುಮಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ರಂಗಯ್ಯನದುರ್ಗ ಜಲಾಶಯದ ನೀರು ಬಳಸಿಕೊಳ್ಳುವ ರೈತರಿಗೆ ಸುಮಾರು 10 ವರ್ಷಗಳಿಂದ ಆರ್‌.ಡಿ.ಪಿ ಜಲಾಶಯದಲ್ಲಿರುವ ನೀರನ್ನು ಅಚ್ಚುಕಟ್ಟು ಜಮೀನುಗಳಿಗೆ ಬಿಟ್ಟಿರುವುದಿಲ್ಲ. ಪ್ರಸ್ತುತ ಸುಮಾರು 27 ಅಡಿ ನೀರು ಜಲಾಶಯದಲ್ಲಿದ್ದು, ಕುಡಿಯುವ ನೀರಿಗೆ ಮಾತ್ರ ಬಳಸಲಾಗುತ್ತಿದೆ. ಹಾಗಾಗಿ ಜಲಾಶಯದ ಎಡ ಮತ್ತು ಬಲ ದಂಡೆ ನಾಲೆಗಳಲ್ಲಿ ಮುಳ್ಳಿನ ಜಾಲಿಗಿಡಗಳು ಬೆಳೆದಿವೆ. ಇದರಿಂದ ಈ ಎರಡೂ ನಾಲೆಗಳ ಕಾಲುವೆಗಳು ಹಾಳಾಗಿವೆ. ಈ ಜಲಾಶಯದ ನೀರನ್ನು ಇನ್ನಿತರ ಕೆರೆಗಳಿಗೆ ಹೊರಗೆ ಬಿಡಲಾಗದ ಕಾರಣ ಜರೂರಾಗಿ ನಾಲೆಗಳನ್ನು ದುರಸ್ತಿ ಮಾಡಿಕೊಡಬೇಕಾಗಿದೆ. ರಂಗಯ್ಯನದುರ್ಗ ಜಲಾಶಯವು ತುಂಬಿದಲ್ಲಿ ಸುಮಾರು 6 ಸಾವಿರ ಎಕರೆ ಜಮೀನುಗಳಿಗೆ ನೀರುಣಿಸುತ್ತದೆ. ಈ ಜಲಾಶಯವು 33 ಅಡಿಗಳ ಸಾಂದ್ರತೆಯನ್ನು ಹೊಂದಿದೆ. ಪ್ರಸ್ತುತ 27 ಅಡಿಗಳಷ್ಟು ನೀರಿರುವುದರಿಂದ ಬೇಸಾಯ ಮಾಡಿ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಬೇಕಾಗಿದೆ. ತಾಲೂಕಿನಲ್ಲಿ ಬರುವ ಕೆರೆಗಳ ನೀರು ಹರಿದು ಬರುವುದರಿಂದ ರಾಜ ಕಾಲುವೆ ಹಾಗೂ ಕೆರೆಗಳಲ್ಲಿ ಬೆಳೆದಿರುವ ಜಂಗಲ್‌ ಮತ್ತು ಹೂಳು ತೆಗೆಸಿದ್ದಲ್ಲಿ ಕೆರೆಗಳಿಗೆ ಸರಾಗವಾಗಿ ನೀರು ಹರಿದುಬಂದು ಕೆರೆಯಲ್ಲಿ ನೀರು ಶೇಖರಣೆಯಾಗುತ್ತದೆ. ಸಂಬಂಧಿತ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಬಿ.ಎಸ್. ಐಯ್ಯಣ್ಣ, ಸಿಪಿಐನ ಜಾಫರ್‌ ಷರೀಫ್‌, ಜಿ.ಆರ್. ಶ್ರೀನಿವಾಸ್‌, ವೈ. ಆಂಜನೇಯ, ಗಂಗಮ್ಮ, ಎನ್‌. ಸಿದ್ದಪ್ಪ, ಬಿ.ಎಚ್. ರುದ್ರಪ್ಪ, ಬಸವರಾಜ್‌, ಹೊನ್ನೂರಪ್ಪ, ಡಿ. ತಿಪ್ಪೇಸ್ವಾಮಿ, ಮರಿಸ್ವಾಮಿ, ಗೋವಿಂದರಾಜ್‌, ಪಿ.ಎಸ್.ನಂಜಪ್ಪ, ಎಂ.ಎಸ್‌. ರಾಜು, ಎನ್‌. ಮಲ್ಲಿಕಾರ್ಜುನ, ಪಾಪಣ್ಣ, ದುರುಗೇಶ್‌, ಪೂಜಾರಿ ತಿಪ್ಪೇಸ್ವಾಮಿ, ಕೆ.ಬಿ. ಪಾಪಣ್ಣ, ಬೋರಯ್ಯ ಇತರರು ಇದ್ದರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ISRO Success: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

ISRO ಸಾಧನೆ: ಅಂತರಿಕ್ಷ ನೌಕೆ ‘ಪುಷ್ಪಕ್‌’ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ…

1-aasdasd

IPL ಬೆಟ್ಟಿಂಗ್ ಜಾಲ; ಗಂಡನಿಗೆ ಸಾಲಗಾರರ ಹಿಂಸೆ: ಪತ್ನಿ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.