ನಿರುದ್ಯೋಗಿಗಳ ತರಬೇತಿಗೆ 230 ಅಧಿಕಾರಿಗಳ ನೇಮಕ


Team Udayavani, Jul 6, 2017, 12:08 PM IST

CH-3.jpg

ಚಿತ್ರದುರ್ಗ: ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ತರಬೇತಿ ನೀಡಲು ರಾಜ್ಯಾದ್ಯಂತ 230
ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರ ನಿವಾಸದಲ್ಲಿ ಬುಧವಾರ ಕೌಶಲ್ಯ ತರಬೇತಿ ಕುರಿತು ಚರ್ಚೆ ನಡೆಸಿದ ಅವರು, ಈಗಿರುವ ಉದ್ಯೋಗ ವಿನಿಮಯ ಅಧಿ ಕಾರಿಗಳನ್ನೇ ಜಿಲ್ಲಾ ಸಂಯೋಜಕರನ್ನಾಗಿ ನೇಮಿಸಿ ಕನಿಷ್ಠ ಐ ಜನ ಸಿಬ್ಬಂದಿ ಇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು. ಉದ್ಯೋಗ ತರಬೇತಿಗಾಗಿ ರಾಜ್ಯದಲ್ಲಿ 6.50 ಲಕ್ಷ
ನಿರುದ್ಯೋಗಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ 18, 901 ಹೆಸರುಗಳು 
ನೋಂದಣಿಯಾಗಿವೆ. ಗ್ರಾಮೀಣ ಭಾಗದ ಬಡ ರೈತರ ಮಕ್ಕಳು ವಿದೇಶಕ್ಕೆ ಹೋಗುವ ಅವಕಾಶವನ್ನು ಕೌಶಲ್ಯ
ಅಭಿವೃದ್ಧಿ ನಿಗಮ ಕಲ್ಪಿಸಲಿದೆ. ಅದಕ್ಕಾಗಿ ಯುರೋಪ್‌, ಇಟಲಿ, ಫ್ರಾನ್ಸ್‌, ಜರ್ಮನಿ, ಆಸ್ಟ್ರೇಲಿಯಾ ದೇಶಗಳ ಜೊತೆ
ಒಪ್ಪಂದ ಮಾಡಿಕೊಳ್ಳಲಾಗಿದೆ. ತರಬೇತಿ ಪಡೆಯುವವರಿಗೆ ಗೌರವಧನ ನೀಡುವ ಬದಲು ಉಚಿತ ವಸತಿ ಹಾಗೂ
ಊಟದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಹಾಲಿ ಇರುವ ಕೋರ್ಸ್‌ಗಳ ಜೊತೆಗೆ ಹೊಸ ಕೋರ್ಸ್ಗಳನ್ನು ಪರಿಚಯಿಸಲಾಗುವುದು. 2-3 ತಿಂಗಳು ತರಬೇತಿ
ನೀಡಿದ ನಂತರ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅನುವು ಮಾಡಿಕೊಡಲಾಗುವುದು. ಇದರಿಂದ ಗ್ರಾಮೀಣ
ಹಾಗೂ ನಗರ ಪ್ರದೇಶದ ನಿರುದ್ಯೋಗಿಗಳಿಗೆ ಅರ್ಜಿ ಬರೆಯುವುದು, ಕಂಪ್ಯೂಟರ್‌ ಜ್ಞಾನ, ಸಂದರ್ಶನಕ್ಕೆ ಹೇಗೆ ತಯಾರಿ ಮಾಡಿಕೊಳ್ಳಬಹುದು ಎಂಬುದರ ಪರಿಚಯವಾಗಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶಯದಂತೆ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸೃಷ್ಟಿಸುವ ಸಲುವಾಗಿ ಆಗಸ್ಟ್‌ ಅಥವಾ ಸೆಪ್ಟಂಬರ್‌ ಮೊದಲ ವಾರದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಯ ನಿರುದ್ಯೋಗಿಗಳನ್ನು ಒಂದೆಡೆ ಸೇರಿಸಿ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು. ಚಿತ್ರದುರ್ಗ ಜಿಲ್ಲೆಯಲ್ಲೇ ಉದ್ಯೋಗ ಮೇಳವನ್ನು ಆಯೋಜಿಸುವಂತೆ ಬೇಡಿಕೆ
ಹೆಚ್ಚಿದೆ. ವಿಶ್ವ ಕೌಶಲ್ಯ ದಿವಸ್‌ ಆಗಿರುವ ಜು. 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ
ಉದ್ಯೋಗ ಮೇಳಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಮಾತನಾಡಿ, ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ನಿರುದ್ಯೋಗಿಗಳಿಗೆ ಸಿಗುವ ತರಬೇತಿ ಫಲಪ್ರದವಾಗಬೇಕಾದರೆ ಗೌರವಧನ ನೀಡುವ ಬದಲು ವಸತಿಯುತ ತರಬೇತಿ ನೀಡಬೇಕು. ಆಗ ಇಂತಹ ಯೋಜನೆಗಳು ಯಶಸ್ವಿಯಾಗುವುದಲ್ಲದೆ ಯುವಕ/ಯುವತಿಯರು ಸ್ವಾವಲಂಬಿ ಜೀವನ ಕಂಡುಕೊಳ್ಳಬಹುದು. ರಾಜ್ಯದ ಬಹುತೇಕ ಉದ್ಯೋಗ ವಿನಿಮಯ ಕೇಂದ್ರಗಳು ಕೆಲಸವಿಲ್ಲದೆ ಖಾಲಿ ಬಿದ್ದಿವೆ. ಅಲ್ಲಿನ ಉದ್ಯೋಗಾ ಧಿಕಾರಿಯನ್ನೇ ಜಿಲ್ಲಾ ಸಂಯೋಜಕರನ್ನಾಗಿ ನೇಮಕ ಮಾಡಿಕೊಳ್ಳುವಂತೆ ಸಲಹೆ ನೀಡಿದರು. 

ರಾಯಚೂರು, ಕಾರವಾರ, ಬಳ್ಳಾರಿ, ಬೆಂಗಳೂರಿನ ಪೀಣ್ಯ, ಕೋಲಾರದಲ್ಲಿ ನಡೆಸಿದ ಉದ್ಯೋಗ ಮೇಳ ಯಶಸ್ವಿಯಾಗಿವೆ. ಮಂಗಳೂರು, ಮೂಡಬಿದಿರೆಯಲ್ಲಿ ಕಾರ್ಯಾಗಾರ ಮಾಡಿದ್ದೇವೆ. 60ರಿಂದ 70 ವರ್ಷದ ಹಿರಿಯ
ನಾಗರೀಕರಿಗೂ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಯೋಜನ ದೊರಕಬೇಕು ಎಂಬುದು ನಮ್ಮ ಉದ್ದೇಶ
ಮುರಳೀಧರ ಹಾಲಪ್ಪ, ಅಧ್ಯಕ್ಷರು, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.