ತಾಂತ್ರಿಕ ಸಮಸ್ಯೆ ಕಾರಣಕ್ಕೆ ವಿಶಲ್ ಆ್ಯಪ್ ಹಿಂಪಡೆದಿದ್ದೇವೆ: ವಿ. ಸೋಮಣ್ಣ
Team Udayavani, Jan 31, 2021, 6:39 PM IST
ಚಿತ್ರದುರ್ಗ: ವಸತಿ ಯೋಜನೆಗಳು ಯಾವ ಹಂತದಲ್ಲಿವೆ ಎನ್ನುವುದನ್ನು ಗಮನಿಸುವ ಉದ್ದೇಶದಿಂದ ಬಳಕೆಯಾಗುತ್ತಿದ್ದ ವಿಶಲ್ ಆ್ಯಪ್ ಅನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.
ಚಿತ್ರದುರ್ಗದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ವರ್ ಮತ್ತಿತರೆ ಸಮಸ್ಯೆಗಳಿಗೆ ಅಧಿಕಾರಿಗಳು ಹೆದರಿದ್ದರು. ಸಾಕಷ್ಟು ದೂರು ಬರುತ್ತಿದ್ದವು. ಹಣ ಕೂಡಾ ಬಿಡುಗಡೆಯಾಗುತ್ತಿರಲಿಲ್ಲ. ಈವರೆಗೆ ಶೇ. 62 ರಷ್ಟು ಮಾತ್ರ ಅನುದಾನ ಖರ್ಚಾಗಿತ್ತು. ಇನ್ನೂ ಶೇ. 38 ಖರ್ಚಾಗಬೇಕಿದೆ. ಈ ನಿಟ್ಟಿನಲ್ಲಿ ತಾತ್ಕಾಲಿಕವಾಗಿ ಮೂರು ತಿಂಗಳ ಕಾಲ ವಿಶಲ್ ಆ್ಯಪ್ ಹಿಂಪಡೆದಿದ್ದೇವೆ. ಈಗ ಜಿಪಿಎಸ್ ಮೂಲಕವೇ ಮನೆಗಳಿಗೆ ಹಣ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯದ ಅಲೆಮಾರಿ, ಸುಡುಗಾಡು ಸಿದ್ದರಿಗೆ ನಿವೇಶನ, ಮನೆ ನೀಡುವ ಬಗ್ಗೆ ಈಗಾಗಲೇ ಸರ್ಕಾರಿ ಆದೇಶ ಬಂದಿದೆ. ಶಾಸಕರು, ಅಧಿಕಾರಿಗಳು ಹಕ್ಕುಪತ್ರ ವಿತರಿಸಲಿದ್ದಾರೆ. ಮಾರ್ಚ್30 ರೊಳಗೆ ಬಜೆಟ್ನಲ್ಲಿರುವುದನ್ನು ಖರ್ಚು ಮಾಡಲು ಶಾಸಕರು, ಸಿಇಒ ಸೇರಿದಂತೆ ಅಧಿಕಾರಿಗಳಿಗೆ ಪತ್ರ ಬರೆಯುತ್ತೇನೆ ಎಂದರು.
ಇದನ್ನೂ ಓದಿ: ಸೋದರಳಿಯನ ಪ್ರಗತಿಗೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ ಇನ್ಮುಂದೆ ಏಕಾಂಗಿ: ಶಾ ಆಕ್ರೋಶ
ಉದ್ಧವ್ ಠಾಕ್ರೆ ಉದ್ಧಟತನದ ಪರಮಾವಧಿ:
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜನಪ್ರಿಯತೆ ಕುಂದಿದೆ. ಅದಕ್ಕಾಗಿ ಏನೇನೋ ಮಾತಾಡಿ ಜನಪ್ರಿಯತೆ ಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸೋಮಣ್ಣ ವ್ಯಂಗ್ಯವಾಡಿದರು.
ಈಗಾಗಲೇ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀಡಿರುವ ಹೇಳಿಕೆಗೆ ನಾನು ಪುಷ್ಠಿ ಕೊಡುತ್ತೇನೆ. ಠಾಕ್ರೆಯ ಉದ್ಧಟತನದ ಪರಮಾವಧಿಗೆ ಸಿಎಂ ಬಿಎಸ್ವೈ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಮಹಾಜನ್ ವರದಿಯೇ ಅಂತಿಮ ತೀರ್ಮಾನ. ನಮ್ಮ ರಾಜ್ಯದಲ್ಲಿರುವುದನ್ನು ಅಭಿವೃದ್ಧಿ ಮಾಡಲು ಯಾರನ್ನೋ ಕೇಳುವ ಅಗತ್ಯವಿಲ್ಲ.
ಒಬ್ಬ ಮುಖ್ಯಮಂತ್ರಿಯಾಗಿ ಆ ಹುದ್ದೆಯ ಗಾಂಭಿರ್ಯತೆ ಅರ್ಥ ಮಾಡಿಕೊಳ್ಳದೆ ಈ ರೀತಿಯಾಗಿ ಜನರನ್ನು ಎತ್ತಿಕಟ್ಟುವುದು ಮೂರ್ಖತನ ಎಂದು ಹೇಳಿದರು.
ಇದನ್ನೂ ಓದಿ: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮರಕ್ಕೆ ಅಪ್ಪಳಿಸಿದ ಕಾರು;ಸ್ಥಳದಲ್ಲಿಯೇ ಇಬ್ಬರ ದುರ್ಮರಣ,
ಯುಗಾದಿಯೊಳಗೆ ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ ಎಂಬ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಗ್ಗೆ ನಾವು ಮಾತನಾಡುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಖುದ್ದು ಅಮಿತ್ ಶಾ ಅವರೇ ಬಿ.ಎಸ್. ಯಡಿಯೂರಪ್ಪ ಇನ್ನೂ ಎರಡೂವರೆ ವರ್ಷ ಮುಖ್ಯಮಂತ್ರಿ ಎಂದು ಹೇಳಿದ್ದಾರೆ ಎಂದರು.
ವಿಶ್ವನಾಥ್ ಅವರಿಗೆ ಮಂತ್ರಿಸ್ಥಾನ ಕುರಿತ ಪ್ರಶ್ನೆಗೆ ಅದು ಮುಗಿದು ಹೋದ ವಿಚಾರ ಎಂದು ಪ್ರತಿಕ್ರಿಯಿಸಿದರು. ಈ ವೇಳೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಇದ್ದರು
ಇದನ್ನೂ ಓದಿ: ಕೋವಿಡ್ ಲಸಿಕೆ ಪಡೆದಿದ್ದ ಆರೋಗ್ಯ ಕಾರ್ಯಕರ್ತೆ ಸಾವು; ತೆಲಂಗಾಣದಲ್ಲಿ 3ನೇ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ