ಶ್ರೀರಾಮುಲು ಕಾರು ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರ ಬಂಧನ
Team Udayavani, Oct 18, 2019, 12:49 PM IST
ಚಿತ್ರದುರ್ಗ: ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ವಿಳಂಬವಾಗುತ್ತಿರುವುದನ್ನು ಖಂಡಿಸಿ ಆರೋಗ್ಯ ಸಚಿವ ಶ್ರೀರಾಮುಲು ಕಾರಿಗೆ ಅಡ್ಡಗಟ್ಟಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಕಚೇರಿ ಪ್ರವೇಶಿಸುವ ಗೇಟ್ ನಲ್ಲಿ ಕಾರು ಅಡ್ಡಗಟ್ಟಿ ಕೆಲ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಸುಮಾರು 30 ಜನ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಸಚಿವ ಶ್ರೀರಾಮುಲು ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಗೆ ಹಾಜರಾಗುತ್ತಿದ್ದ ವೇಳೆ ಪ್ರತಿಭಟನೆ ನಡೆಯಿತು.