ಭಯೋತ್ಪಾದನೆ ನಿರ್ಮೂಲನೆಗೆ ಕೈ ಜೋಡಿಸಿ


Team Udayavani, Sep 20, 2017, 2:48 PM IST

20-chitradurga.jpg

ಚಿತ್ರದುರ್ಗ: ದೇಶದ ಭದ್ರತೆಗಾಗಿ ಭಯೋತ್ಪಾದಕ ಕೃತ್ಯ ತಡೆಯುವುದು  ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ), ಪೊಲೀಸ್‌ ಮತ್ತು ಸರ್ಕಾರಗಳ ಜವಾಬ್ದಾರಿ. ಅಲ್ಲದೆ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವೂ ಆಗಿದೆ. ಈ ಬಗ್ಗೆ ಅರಿವು ಮೂಡಿಸಲು ದೇಶಾದ್ಯಂತ ಬೈಕ್‌ ಜಾಥಾ ನಡೆಸಲಾಗುತ್ತಿದೆ ಎಂದು ರಾಷ್ಟ್ರೀಯ ಭದ್ರತಾ ಪಡೆಯ ನಾಯಕ ಅಮಿತ್‌ಕುಮಾರ್‌ ಹೇಳಿದರು.

ನಗರದ ಎಸ್‌ಜೆಎಂ ಐಟಿ ಕಾಲೇಜು ಆವರಣದಲ್ಲಿ ಜಾಥಾದ ಮಹತ್ವದ ಬಗ್ಗೆ ಮಾತನಾಡಿದ ಅವರು, ನಾಗರಿಕರು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳೊಂದಿಗೆ ಕೈಜೋಡಿಸಬೇಕು. ಅದರಲ್ಲೂ ಯುವಕ-ಯುವತಿಯರು, ವಿದ್ಯಾರ್ಥಿಗಳ ಪಾತ್ರ ಮಹತ್ವದಾಗಿದೆ ಎಂದರು.

ದೇಶದ ರಕ್ಷಣೆಗಾಗಿ ಮತ್ತು ಭಯೋತ್ಪಾದಕರ ವಿರುದ್ಧದ ಹೋರಾಟಕ್ಕಾಗಿ 1984ರಲ್ಲಿ ಆರಂಭವಾದ ರಾಷ್ಟ್ರೀಯ
ಭದ್ರತಾ ಪಡೆ 33 ವರ್ಷಗಳನ್ನು ಪೂರೈಸಿದೆ. ದೇಶದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿಗಳನ್ನು ನಿಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. 2008ರಲ್ಲಿ ನಡೆದ ಮುಂಬೈ ದಾಳಿ ಮತ್ತು ಕಳೆದ ವರ್ಷ ಪಠಾಣ್‌ ಕೋಟ್‌ನಲ್ಲಿ ನಡೆದ ಉಗ್ರರ ದಾಳಿ ನಿಗ್ರಹಿಸುವಲ್ಲಿ ಎನ್‌ಎಸ್‌ಜಿ ಕಮಾಂಡೋಗಳು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಬಣ್ಣಿಸಿದರು.

ನಾಗರಿಕರು ಈ ದೇಶದ ಕಣ್ಣು ಮತ್ತು ಕಿವಿ ಇದ್ದಂತೆ. ಆದ್ದರಿಂದ ನಾಗರಿಕರಿಂದಲೇ ಭಯೋತ್ಪಾದನೆ ವಿರುದ್ಧ ಹೋರಾಟ ಆರಂಭವಾಗಬೇಕು. ನಮ್ಮ ಸುತ್ತಮುತ್ತ ನಡೆಯುವ ಸಮಾಜಘಾತುಕ ಕೃತ್ಯಗಳ ಮೇಲೆ ಕಣ್ಣಿಟ್ಟಿರಬೇಕು. ಅದನ್ನು ಸ್ಥಳೀಯ ಪೊಲೀಸರಿಗೆ ತಿಳಿಸುವ ಮೂಲಕ ಘಟನೆ ನಡೆಯದಂತೆ ತಡೆಯಬೇಕಿದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಬೈಕ್‌ ಜಾಥಾದಮುಖ್ಯ ಉದ್ದೇಶ ಎಂದರು.

ನಂತರ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳು ಭ್ರಷ್ಟಾಚಾರ, ಭಯೋತ್ಪಾದನೆ ತಡೆ, ಎನ್‌ಎಸ್‌ಜಿಗೆ ಸೇರುವ ವಿಧಾನಗಳ ಬಗ್ಗೆ ಪ್ರಶ್ನೆ ಕೇಳಿ ಉತ್ತರ ಪಡೆದರು. ನಿಮ್ಮ ತಂಡದಲ್ಲಿ ಕೇವಲ ಪುರುಷರಷ್ಟೇ ಇದ್ದಾರೆ, ಮಹಿಳಾ ಕಮಾಂಡೋಗಳಿಲ್ಲವೇ, ಸ್ಲೀಪಿಂಗ್  ಸೆಲ್‌ಗ‌ಳಿಂದಲೇ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ, ಅದನ್ನು ನಿಗ್ರಹಿಸುವುದು ಹೇಗೆ ಎಂಬ ಪ್ರಶ್ನೆಗಳನ್ನೂ ಮುಂದಿಟ್ಟರು.

ಮಹಿಳಾ ಕಮಾಂಡೂಗಳೂ ರಾಷ್ಟ್ರೀಯ ಭದ್ರತಾ ಪಡೆಯಲ್ಲಿದ್ದಾರೆ. ನಾಗರಿಕರು ಎಚ್ಚರ ವಹಿಸಿದರೆ ಭ್ರಷ್ಟಾಚಾರದ ಜೊತೆಗೆ ಎಲ್ಲ ತರಹದ ಭಯೋತ್ಪಾದನೆಯನ್ನೂ ನಿಗ್ರಹಿಸಬಹುದು. ಅದು ಶಾಲಾ-ಕಾಲೇಜುಗಳಿಂದಲೇ ಪ್ರಾರಂಭವಾಗಬೇಕು ಎಂದು ಅಮಿತ್‌ ಕುಮಾರ್‌ ಹೇಳಿದರು.

ನಗರ ಪೊಲೀಸ್‌ ಠಾಣೆ ನಿರೀಕ್ಷಕ ಎಸ್‌ .ಟಿ. ಒಡೆಯರ್‌, ಕೋಟೆ ಠಾಣೆ ವಿಭಾಗದ ವೃತ್ತ ನಿರೀಕ್ಷಕ ಮಹಮ್ಮದ್‌ ಫೈಜುಲ್ಲಾ ಹಾಗೂ ಸಿಬ್ಬಂದಿ, ಎಸ್‌ಜೆಎಂ ಐಟಿ ಕಾಲೇಜು ಪ್ರಾಧ್ಯಾಪಕರು ಇದ್ದರು. ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್‌ ಜಾಥಾ ನಡೆಸಲಾಯಿತು. ಡಿವೈಎಸ್‌ಪಿ ಲಕ್ಷ್ಮಣ ನಿಂಬರಗಿ ಸಾಥ್‌ ನೀಡಿದರು.

7 ಸಾವಿರ ಕಿಮೀ ಕ್ರಮಿಸುವ ಗುರಿ
ಬೈಕ್‌ ಜಾಥಾ 40 ದಿನಗಳಲ್ಲಿ 13 ರಾಜ್ಯಗಳ ಒಟ್ಟು 7 ಸಾವಿರ ಕಿಮೀ ದೂರವನ್ನು ಕ್ರಮಿಸಲಿದೆ. ದೆಹಲಿಯಿಂದ ಆರಂಭಗೊಂಡಿರುವ ಜಾಥಾ, ಜೈಪುರ, ಅಜ್ಮೀರ್ , ಉದಯಪುರ, ಅಹ್ಮದಾಬಾದ್‌, ಸೂರತ್‌, ಮುಂಬೈ, ಸತಾರಾ, ಬೆಳಗಾವಿ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿದೆ. ಇಲ್ಲಿಂದ ಬೆಂಗಳೂರು, ಚೆನ್ನೈ, ಹೈದರಾಬಾದ್‌, ಭುವನೇಶ್ವರ್‌, ಕೋಲ್ಕತ್ತಾಕ್ಕೆ ಹೋಗಿ ನಂತರ ದೆಹಲಿ ತಲುಪಲಿದೆ. ತಂಡದಲ್ಲಿ ಒಟ್ಟು 32 ಕಮಾಂಡೋಗಳಿದ್ದು, 20 ಬೈಕ್‌ ಸವಾರರು, 12 ಸಹಾಯಕರು ಇದ್ದಾರೆ ಎಂದು ಅಮಿತ್‌ಕುಮಾರ್‌ ಮಾಹಿತಿ ನೀಡಿದರು. ಜಾಥಾದ ಮೂಲಕ ಆಯಾ ಭಾಗದ ಶಾಲಾ-ಕಾಲೇಜುಗಳು, ವಕೀಲರ ಸಂಘ, ಯುವಕ ಸಂಘಗಳನ್ನು ಭೇಟಿಯಾಗಿದ್ದೇವೆ. ಎಲ್ಲ ಕಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಮ್ಮನ್ನು ತುಂಬಾ ಆತ್ಮೀಯವಾಗಿ ಸ್ವಾಗತಿಸಿ ಆತಿಥ್ಯ ಮಾಡಿ ಬೀಳ್ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.