ದಮನಿತ ಮಹಿಳೆಯರ ಜೀವನ ಸುಧಾರಣೆಗೆ ನೆರವು


Team Udayavani, Jul 23, 2019, 11:37 AM IST

cd-tdy-2

ಚಿತ್ರದುರ್ಗ: ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಲಹಾ ಸಮಿತಿ ಸಭೆ ನಡೆಯಿತು.

ಚಿತ್ರದುರ್ಗ: ದಮನಿತ ಮಹಿಳೆಯರು, ತೃತೀಯ ಲಿಂಗಿಗಳಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಮೂಲಕ ಜೀವನ ಮಟ್ಟ ಸುಧಾರಣೆಗೆ ನೆರವು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಮನಿತ ಮಹಿಳೆಯರು (ಲೈಂಗಿಕ ಕಾರ್ಯಕರ್ತೆಯರು) ನೆಮ್ಮದಿಯ ಜೀವನ ನಡೆಸಲು ಪ್ರೋತ್ಸಾಹಧನ ಹಾಗೂ ಸ್ವಯಂ ಉದ್ಯೋಗಕ್ಕಾಗಿ ಸಾಲ, ವಸತಿ ಸೌಲಭ್ಯ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳಡಿ ಅಗತ್ಯ ಸವಲತ್ತು ಕಲ್ಪಿಸಲಾಗುವುದು. ಸರ್ಕಾರಿ ಸವಲತ್ತು ಪಡೆದುಕೊಂಡ ಬಳಿಕವೂ ಅದೇ ವೃತ್ತಿಯಲ್ಲಿ ಮುಂದುವರೆದರೆ ಸರ್ಕಾರದ ಉದ್ದೇಶ ಈಡೇರುವುದಿಲ್ಲ. ಅದೇ ರೀತಿ ಸರ್ಕಾರದಿಂದ ವಿವಿಧ ಸೌಲಭ್ಯ ಪಡೆದ ಮಂಗಳಮುಖೀಯರು ಎಲ್ಲೆಂದರಲ್ಲಿ ತಿರುಗಾಟ ನಡೆಸಿ ಭಿಕ್ಷಾಟನೆ ನಡೆಸುವುದು ಸರಿಯಲ್ಲ ಎಂದರು.

ದಮನಿತ ಮಹಿಳೆಯರು ಹಾಗೂ ಲೈಂಗಿಕ ಅಲ್ಪಸಂಖಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 25 ಸಾವಿರ ರೂ. ಸಹಾಯಧನ ಹಾಗೂ 25 ಸಾವಿರ ರೂ. ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುವುದು. ಅಲ್ಲದೆ ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾಡಳಿತ ಸಿದ್ಧವಿದೆ. ಆಸಕ್ತರಿಗೆ ರುಡ್‌ಸೆಟ್ ಸಂಸ್ಥೆಯಿಂದ ವಿವಿಧ ವೃತ್ತಿ ಆಧಾರಿತ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 1974 ದಮನಿತ ಮಹಿಳೆಯರು ಹಾಗೂ 706 ತೃತೀಯ ಲಿಂಗಿಗಳು ಇರುವುದಾಗಿ ವರದಿಯಲ್ಲಿ ಉಲ್ಲೇಖೀಸಲಾಗಿದೆ. ದಮನಿತ ಮಹಿಳೆಯರ ಜೀವನಮಟ್ಟ ಸುಧಾರಣೆಗೆ ಜಿಲ್ಲಾ ಮಟ್ಟದ ಸಮಿತಿ ರಚಿಸಲಾಗಿದೆ. ದಮನಿತ ಮಹಿಳೆಯರು ತಮ್ಮ ವೃತ್ತಿ ತೊರೆದು ಸಮಾಜಮುಖೀ ವೃತ್ತಿಯಲ್ಲಿ ತೊಡಗಬೇಕು. ಇದಕ್ಕಾಗಿ ಸರ್ಕಾರ ಸೌಖ್ಯ ಸಮುದಾಯ ಸಂಸ್ಥೆಯನ್ನು ನೇಮಿಸಿದೆ. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕುವುದಿಲ್ಲ, ಬದಲಾಗಿ ಸಂಸ್ಥೆಗಳು ಇದರ ದುರುಪಯೋಗ ಪಡೆದುಕೊಳ್ಳುತ್ತಿರುವ ಸಾಧ್ಯತೆಯೂ ಇಲ್ಲದಿಲ್ಲ. ಕೇವಲ ಅಂಕಿ-ಸಂಖ್ಯೆ ತೋರಿಸಿ ದಮನಿತರಿಗೆ ಸಿಗುವ ಸೌಲಭ್ಯದಿಂದ ಅರ್ಹರನ್ನು ವಂಚಿಸುವ ಸಾಧ್ಯತೆಗಳೇ ಹೆಚ್ಚಿವೆ. ಲೈಂಗಿಕ ಕಾರ್ಯಕ್ಕೆ ಬಲವಂತವಾಗಿ ತಳ್ಳಲ್ಪಟ್ಟ ಮಹಿಳೆಯರಿಗೆ ಮಾತ್ರ ಸರ್ಕಾರದ ಸವಲತ್ತುಗಳನ್ನು ಕಲ್ಪಿಸಲಾಗುತ್ತದೆಯೇ ವಿನಃ ಸ್ವಯಂಪ್ರೇರಿತರಾಗಿ ಈ ವೃತ್ತಿಗೆ ಹೋದವರಿಗೆ ಅವಕಾಶ ಕಲ್ಪಿಸಲಾಗದು ಎಂದು ಸ್ಪಷ್ಟಪಡಿಸಿದರು.

ಲೈಂಗಿಕ ಅಲ್ಪಸಂಖ್ಯಾತರು (ತೃತೀಯ ಲಿಂಗಿಗಳು) ಸಮಾಜದಲ್ಲಿ ಎಲ್ಲರಂತೆ ಗೌರವಯುತವಾಗಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಈಗಾಗಲೇ ಎಲ್ಲ ಬಗೆಯ ಸೌಲಭ್ಯ ಒದಗಿಸುತ್ತಿದೆ. ಲೈಂಗಿಕ ಅಲ್ಪಸಂಖ್ಯಾತರರನ್ನು ನೋಂದಾಯಿಸಿಕೊಳ್ಳಲು ಜಿಲ್ಲೆಯಲ್ಲಿ ವಾಹಿನಿ ಸಮುದಾಯ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಇವರಿಗೂ ಕೂಡ 25 ಸಾವಿರ ರೂ. ಸಹಾಯಧನ ಹಾಗೂ 25 ಸಾವಿರ ರೂ. ಬಡ್ಡಿ ರಹಿತ ಸಾಲ ಸೌಲಭ್ಯ, ಮನೆ ಕೂಡ ದೊರಕಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಪಂ ಸಿಇಒ ಸತ್ಯಭಾಮ ಮಾತನಾಡಿ, ದಮನಿತ ಮಹಿಳೆಯರ ಸಬಲೀಕರಣಕ್ಕಾಗಿ ನೇಮಕಗೊಂಡಿರುವ ಸ್ವಯಂಸೇವಾ ಸಂಸ್ಥೆಗಳು ಸಾಮಾಜಿಕ ಪಿಡುಗನ್ನು ತೊಡೆದು ಹಾಕುವ ಬದಲಾಗಿ ಸಮಸ್ಯೆಯನ್ನು ಜೀವಂತವಾಗಿರಿಸುತ್ತಿವೆ. ಸರ್ಕಾರದ ಅನುದಾನ ಪಡೆಯುವುದನ್ನು ಮುಂದುವರೆಸುವ ಹುನ್ನಾರವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಾಹಿನಿ ಸಮುದಾಯ ಸಂಸ್ಥೆಯ ಕಾರ್ಯದರ್ಶಿ ಈರಣ್ಣ ಮಾತನಾಡಿ, ತೃತೀಯ ಲಿಂಗಿಗಳಿಗೆ ವಸತಿ ಸೌಲಭ್ಯ ಕಲ್ಪಿಸಬೇಕು. ಎಷ್ಟೋ ಜನ ಅಪನಿಂದನೆಗೆ ಹೆದರಿ ಧೈರ್ಯ ತೋರ್ಪಡಿಸಲಾಗದೆ ಮನೆಯಲ್ಲಿಯೇ ಉಳಿದು, ಕುಟುಂಬದವರ ಬಲವಂತಕ್ಕೆ ಮದುವೆ ಮಾಡಿಕೊಳ್ಳುತ್ತಾರೆ. ಇದರಿಂದ ಹೆಣ್ಣಿನ ಜೀವನ ಹಾಳು ಮಾಡುವಂತಾಗುತ್ತದೆ. ಹಾಗಾಗಿ ಲೈಂಗಿಕ ಅಲ್ಪಸಂಖ್ಯಾತರಿಗೆ ಮುಕ್ತ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌, ಕರ್ನಾಟಕ ಆರೋಗ್ಯ ಸಂವರ್ಧನಾ ಟ್ರಸ್ಟ್‌ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಸಿಡಿಪಿಒಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

BY Raghavendra ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ ದಾಖಲು

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

Gas ಸಿಲಿಂಡರ್ ಸ್ಫೋಟ: ಮನೆ ಸಂಪೂರ್ಣ ಭಸ್ಮ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

ಬೈಕ್ ಗೆ ಡಿಕ್ಕಿ ಹೊಡೆದ ಟಾಟಾ ಏಸ್… ಓರ್ವ ಸ್ಥಳದಲ್ಲೇ ಮೃತ್ಯು, ಇನ್ನೋರ್ವ ಗಂಭೀರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.