ವೇದಾಂತ ಸಂಸ್ಥೆಗೆ ಪ್ರಶಸ್ತಿ


Team Udayavani, Nov 12, 2020, 5:34 PM IST

ವೇದಾಂತ ಸಂಸ್ಥೆಗೆ ಪ್ರಶಸ್ತಿ

ಚಿತ್ರದುರ್ಗ: ಸದೃಢ ಪರಿಸರ ನಿರ್ವಹಣೆಗಾಗಿ ರಾಜ್ಯದ ವೇದಾಂತ ಕಬ್ಬಿಣದ ಅದಿರು ಸಂಸ್ಥೆಗೆ ಪ್ರತಿಷ್ಠಿತ ಎಫ್‌ ಐಎಂಐನ “ಶುಭ್‌ ಕರಣ್‌ ಸರವಾಗಿ’ ಪರಿಸರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕರ್ನಾಟಕದ ಫೆಡರೇಷನ್‌ ಆಫ್‌ ಇಂಡಿಯನ್‌ ಮಿನರಲ್‌ ಇಂಡಸ್ಟ್ರಿಯ ಹಿರಿಯ ನಿರ್ವಹಣಾ ತಂಡದ ಉಪಸ್ಥಿತಿಯಲ್ಲಿ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವಾಲಯದ ಕಾರ್ಯದರ್ಶಿ ಅನಿಲ್‌ಕುಮಾರ್‌ ಜೈನ್‌ ಪ್ರಶಸ್ತಿ ಪ್ರದಾನ ಮಾಡಿದರು.

ನವದೆಹಲಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಚ್‌ಎಸ್‌ಇ ಡೆಪ್ಯೂಟಿ ಮ್ಯಾನೇಜರ್‌ ಪಾರ್ಥಿಬನ್‌ ಮಾದೇಶ್‌ ವೇದಾಂತ ಸಂಸ್ಥೆಯ ಪ್ರತಿನಿಧಿ ಯಾಗಿ ಭಾಗವಹಿಸಿದ್ದರು.

ಗಣಿಗಾರಿಕೆ ಮತ್ತು ಡಂಪ್‌ ತಾಣಗಳ ಪರಿಣಾಮಕಾರಿ ಸುಧಾರಣೆ, ನೀರಿನ ಸಂರಕ್ಷಣೆ, ಆರೋಗ್ಯಕರ ಪರಿಸರ ಮೇಲ್ವಿಚಾರಣಾ ಕಾರ್ಯ ವಿಧಾನ, ಕಾರ್ಯಾಚರಣೆಯ ಸ್ಥಳಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ಲಾಂಟೇಶನ್‌ ಡ್ರೈವ್‌ ಗಳು ಸೇರಿದಂತೆ ಪರಿಸರ ನಿರ್ವಹಣಾ ಪದ್ಧತಿಗಳಲ್ಲಿ ವೇದಾಂತ ಕಬ್ಬಿಣದಅದಿರು ಸಂಸ್ತೆ ಹಲವಾರು ಅತ್ಯುತ್ತಮ ಕ್ರಮಗಳನ್ನು ಅಳವಡಿಸಿಕೊಂಡಿದೆ.

ಅಲ್ಲದೆ ಸುಸ್ಥಿರತೆ ಚೌಕಟ್ಟು ಮತ್ತು ಎಚ್‌ಎಸ್‌ಇನೀತಿಗಳನ್ನು ಅಳವಡಿಸಿಕೊಂಡಿದೆ. ಅಂತಾರಾಷ್ಟ್ರೀಯ ಮಾನದಂಡಗಳು ಪಾಲನೆ ಯಾಗುತ್ತಿರುವ ಹಿನ್ನೆಲೆಯಲ್ಲಿಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ವೇದಾಂತ ಸೆಸಾ ಗೋವಾ ಐರನ್‌ ಬಿಸಿನೆಸ್‌ ಸಿಇಒ ಸಾವಿಕ್‌ ಮಜುಂದಾರ್‌ ಮಾತನಾಡಿ, ನಮ್ಮ ಗುರಿ ಪರಿಸರಕ್ಕೆ ಶೂನ್ಯ ಹಾನಿ, ಶೂನ್ಯ ತ್ಯಾಜ್ಯ ಮತ್ತು ಶೂನ್ಯ ವಿಸರ್ಜನೆಯಾಗಿದೆ. ಈ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸುಸ್ಥಿರ ಬೆಳವಣಿಗೆಯನ್ನು ಸಾ ಸುವಲ್ಲಿಪ್ರಯತ್ನಶೀಲರಾಗಿದ್ದೇವೆ ಎಂದರು.

ಎಫ್‌ಐಎಂಐ ಪ್ರಧಾನ ಕಾರ್ಯದರ್ಶಿ ಆರ್‌.ಕೆ. ಶರ್ಮಾ ಮಾತನಾಡಿ, ಕೈಗಾರಿಕಾ ಬೆಳವಣಿಗೆಯಲ್ಲಿ ಸುಸ್ಥಿರ ಕ್ರಮಗಳುಮತ್ತು ಜವಾಬ್ದಾರಿಯುತ ನೀತಿಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಮಹತ್ವದ ಸಂಗತಿಯಾಗಿದೆ. ಉದ್ಯಮದ ಜತೆ ಜತೆಗೆ ಪರಿಸರ ಸಂರಕ್ಷಣೆಗೂ ಒತ್ತು ನೀಡಬೇಕಾಗಿದೆ. ವೇದಾಂತ ಮತ್ತು ಇತರ ಗಣಿಗಾರಿಕೆ ಮತ್ತು ಲೋಹದಕಂಪನಿಗಳು ಹಲವಾರು ನವೀನ ಪರಿಸರ ನಿರ್ವಹಣಾ ಕ್ರಮಗಳನ್ನು ಪರಿಚಯಿಸಿವೆಎಂದು ಹೇಳಿದರು.

ವೇದಾಂತ ಕಬ್ಬಿಣದ ಅದಿರು ಸಂಸ್ಥೆಯ ನಿರ್ದೇಶಕ ಕೃಷ್ಣ ರೆಡ್ಡಿಮತ್ತಿತರರು ಭಾಗವಹಿಸಿದ್ದರು.

ಓಬವ್ವ ಜಯಂತಿ ಸರಳ ಆಚರಣೆ :

ಚಿತ್ರದುರ್ಗ: ಜಿಲ್ಲಾಧಿಕಾರಿ ಕಚೇರಿ ಬಳಿ ಒನಕೆ ಓಬವ್ವ ವೃತ್ತದಲ್ಲಿರುವ ಪ್ರತಿಮೆಗೆ ಬುಧವಾರ ಮಾಲಾರ್ಪಣೆ ಮಾಡುವ ಮೂಲಕ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಿಸಲಾಯಿತು.

ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಒನಕೆ ಓಬವ್ವನ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಛಲವಾದಿ ಸಮಾಜದ ಮುಖಂಡರು ಕೋಟೆಯ ಒನಕೆ ಓಬವ್ವನ ಕಿಂಡಿಯ ಹತ್ತಿರ ಇರುವ ಒನಕೆ ಓಬವ್ವನ ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌, ರಾಜಾವೀರ ಮದಕರಿ ನಾಯಕ ಪ್ರತಿಮೆಗೂ ಮಾಲಾರ್ಪಣೆ ಮಾಡಿದರು. ಈ ವೇಳೆ ಛಲವಾದಿ ಗುರುಪೀಠದ ಶ್ರೀ ಬಸವನಾಗಿ ದೇವ ಸ್ವಾಮೀಜಿ, ಛಲವಾದಿ ಸಮಾಜದ ಮುಖಂಡರಾದ ಎಚ್‌.ಸಿ. ನಿರಂಜನಮೂರ್ತಿ, ರುದ್ರಮುನಿ, ನಾಗರಾಜ್‌, ಜಯಪ್ಪ, ಬಸವರಾಜ್‌, ತಿಪ್ಪೇಸ್ವಾಮಿ, ನಟರಾಜ್‌, ಮಂಜುಳಮ್ಮ, ಸುವರ್ಣಮ್ಮ, ಭಾರ್ಗವಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.