ಕೇಂದ್ರ ಸರ್ಕಾರದಿಂದ ಬ್ಯಾಂಕ್‌ ವಿರೋಧಿ ನೀತಿ


Team Udayavani, Aug 23, 2017, 3:09 PM IST

23-CHITRA-2.jpg

ಚಿತ್ರದುರ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್‌ ನೌಕರರು ಹಾಗೂ ಸಿಬ್ಬಂದಿ, ಬ್ಯಾಂಕ್‌ ನೌಕರರ ಸಂಘಟನೆಗಳ ಒಕ್ಕೂಟ ಮತ್ತು ಕೆನರಾ ಬ್ಯಾಂಕ್‌ ಸ್ಟಾಪ್‌ ಫೆಡರೇಶನ್‌ ನೇತೃತ್ವದಲ್ಲಿ ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಬ್ಯಾಂಕ್‌ಗಳ ನೌಕರರು/ಅಧಿಕಾರಿಗಳು ಭಾರತಿಯ ಸ್ಟೇಟ್‌ ಬ್ಯಾಂಕ್‌ (ಹಳೆ ಮೈಸೂರು ಬ್ಯಾಂಕ್‌) ಅವರಣದಲ್ಲಿ  ಸಮಾವೇಶಗೊಂಡು ಕೇಂದ್ರ ಸರ್ಕಾರದ ಬ್ಯಾಂಕ್‌ ವಿರೋಧಿ  ನೀತಿಗೆ ಆಕ್ರೋಶ ವ್ಯಕ್ತಪಡಿಸಿದರು. ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಸರ್ಕಾರದ ಜನಪ್ರಿಯ ಸ್ಕೀಮ್‌ಗಳ ಮಾರ್ಕೆಟಿಂಗ್‌ ಅಫಿಸುಗಳನ್ನಾಗಿ ಮಾಡಿದೆ ಎಂದು ದೂರಿದರು. ಜನ್‌ಧನ್‌ ಯೋಜನೆ, ಪ್ರಧಾನಮಂತ್ರಿ ಸುರಕ್ಷ ಬಿಮಾ ಯೋಜನೆ, ಜೀವನ್‌ ಜ್ಯೋತಿ ಬೀಮಾ ಯೋಜನೆ, ಮುದ್ರಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ, ಆವಾಸ್‌ ಯೋಜನೆ, ಅಟಲ್‌ ಪಿಂಚಣಿ ಯೋಜನೆ, ನೋಟುಗಳ ರದ್ದತಿ, ಡಿಜಿಟಲ್‌ ಇಂಡಿಯಾ ಕಾರ್ಯಕ್ರಮ, ಆಧಾರ್‌ ಕಾರ್ಡ ಜೋಡಣೆ, ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ವಿಲೀನಗೊಳಿಸುವುದು ಹಾಗೂ ದೊಡ್ಡ ಬಂಡವಾಳಗಾರರಿಗೆ ಹೊಸದಾಗಿ ಬ್ಯಾಂಕುಗಳನ್ನು ಸ್ಥಾಪಿಸಲು ಪರವಾನಗಿ ಸೇರಿದಂತೆ ಒಂದಾದ ಮೇಲೆ ಇನ್ನೊಂದರಂತೆ ತಪ್ಪು ಮಾಡಿ ಬ್ಯಾಂಕುಗಳನ್ನು ಹಾಗೂ ಬ್ಯಾಂಕ್‌ ನೌಕರರನ್ನು ಸರ್ಕಾರ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿದರು. ಬ್ಯಾಂಕ್‌ಗಳಿಗೆ ಅಗತ್ಯವಿರುವ ಬಂಡವಾಳವನ್ನು ಬಜೆಟ್‌ ನಲ್ಲಿ ಘೋಷಿಸಿದ್ದರೂ ಅದನ್ನು ಬಿಡುಗಡೆ ಮಾಡದೆ ಸತಾಯಿಸುತ್ತಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳನ್ನು ಉಸಿರುಗಟ್ಟಿ ಸಾಯಿಸಿದೆ. ಬ್ಯಾಂಕ್‌ಗಳನ್ನು ದೊಡ್ಡ ಬಂಡವಾಳದಾರರ ತೆಕ್ಕೆಗೆ ಒಪ್ಪಿಸಲು ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಇದೆ. ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳು ತನ್ನದೇ ಕೂಸು ಎಂಬುದನ್ನೇ ಕೇಂದ್ರ ಸರ್ಕಾರ ಮರೆತಿದೆ ಎಂದು ಕಿಡಿ ಕಾರಿದರು. 

10 ಬ್ಯಾಂಕುಗಳಲ್ಲಿ ಟ್ರೈ ಪಾಟೈìಟ್‌ (ಮೂರು ಪಕ್ಷಗಳನ್ನೊಳಗೊಂಡ) ಒಪ್ಪಂದವನ್ನು ಹೇರಿ ಅದಕ್ಕೆ ನೌಕರರು ಸಹಿ ಮಾಡಿದರೆ ಮಾತ್ರ ಬ್ಯಾಂಕುಗಳಿಗೆ ಬಂಡವಾಳ ಎಂಬ ಶರತ್ತನ್ನು ಹಾಕಿತು. ಆದರೂ ಕೇಂದ್ರ ಸರ್ಕಾರ ಅಗತ್ಯವಿರುವ ಬಂಡವಾಳ ನೀಡಿಲ್ಲ. ನೌಕರರಿಗೆ ಎಲ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಕಿತ್ತುಕೊಳ್ಳಲು ಬ್ಯಾಂಕ್‌ ಆಡಳಿತಗಳು ಪ್ರಯತ್ನಿಸುತ್ತಿವೆ ಎಂದು  ದೂರಿದರು. ಬ್ಯಾಂಕುಗಳಲ್ಲಿ ಎನ್‌ಪಿಎ ಸಾಲದ
ಮಟ್ಟ ತೀವ್ರಗತಿಯಲ್ಲಿ ಏರುತ್ತಿದ್ದು ಬ್ಯಾಂಕುಗಳ ಉಳಿಯುವಿಕೆಗೆ ಸವಾಲಾಗಿ ನಿಂತಿದೆ.  ಸುಸ್ತಿದಾರರ ವಿರುದ್ದ ಕ್ರಿಮಿನಲ್‌ ಕೇಸ್‌ ಜೊತೆಗೆ ಕಠಿಣ ಕ್ರಮ ಕೈಗೊಳ್ಳುವ ಬದಲು ಸರ್ಕಾರ ತೋರಿಕೆಯ ಹಲ್ಲಿಲ್ಲದ ಕಾನೂನುಗಳನ್ನು ತರುತ್ತಿದೆ. ಜನರ ಉಪಯೋಗಕ್ಕಾಗಿ ಇರುವ ಸಾರ್ವಜನಿಕ ಕ್ಷೇತ್ರದ ಬ್ಯಾಂಕುಗಳು ದೇಶದ ಆಸ್ತಿ. ಠೇವಣಿ ಮೇಲಿನ ಬಡ್ಡಿದರವನ್ನು ಕಳೆದ ಮೂರೂವರೆ ವರ್ಷಗಳ ಅವಧಿಯಲ್ಲಿ ಸುಮಾರು ಶೇ.4ರಷ್ಟು ಇಳಿಸಿದ ಕೇಂದ್ರ ಸರ್ಕಾರ, ಬಂಡವಾಳಶಾಹಿಗಳಿಗೆ ಕಡಿಮೆ ಬಡ್ಡಿಯಲ್ಲಿ ಸಬ್ಸಿಡಿ ಸಮೇತ ಬ್ಯಾಂಕುಗಳಿಂದ ಸಾಲ ಕೊಡಿಸುತ್ತಿದೆ. ಇಷ್ಟಾದರೂ ದೊಡ್ಡ ಮೊತ್ತದ ಸಾಲ ಪಡೆದ ಬಂಡವಾಳಗಾರರು ಪಡೆದ ಸಾಲವನ್ನು ಉದ್ದೇಶಪೂರ್ವಕವಾಗಿ ವಾಪಸ್‌ ಮಾಡದೆ ಬ್ಯಾಂಕುಗಳಿಗೆ ಪಂಗನಾಮ ಹಾಕುತ್ತಾ ಅದೇ ದುಡ್ಡಿನಲ್ಲಿ ತಮ್ಮದೇ ಆದ ಹೊಸ ಬ್ಯಾಂಕುಗಳನ್ನು ತೆರೆಯುತ್ತಿರುವುದು ದುರಂತ ಎಂದರು.

ನೋಟು ಚಲಾವಣೆ ರದ್ದತಿ ಸಮಯದಲ್ಲಿ ಬ್ಯಾಂಕುಗಳಿಗೆ ಆದ ಖರ್ಚನ್ನು ಸರ್ಕಾರವೇ ಭರಿಸಬೇಕು. ಗ್ರಾಚ್ಯುಟಿ ಮಿತಿ ತೆಗೆದು ಹಾಕಬೇಕು. ಬ್ಯಾಂಕಿನ ವರ್ಕಮನ್‌ ಹಾಗೂ ಆಫಿಸರ್‌ ಡೈರೆಕ್ಟರ್‌ ಹುದ್ದೆಗಳಿಗೆ ಗುಪ್ತ ಮತದಾನದ ಮೂಲಕ ಮಾತ್ರ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಜೆ.ಎಸ್‌. ವಿಶ್ವನಾಥ್‌, ಭಾರತಿಯ ಸ್ಟೇಟ್‌ ಬ್ಯಾಂಕ್‌ನ ಸದಾಶಿವಪ್ಪ, ಶಿವರಾಜ್‌, ಪ್ರಶಾಂತ್‌, ವೀರೇಶ್‌, ನಿರಂಜನ್‌ಕುಮಾರ್‌, ದಿಲೀಪ್‌ ಕುಮಾರ್‌, ಈಶ್ವರಪ್ಪ, ಅರುಣ, ಶ್ರೀನಿವಾಸ ಶೆಟ್ಟಿ, ಸುಜಾತಾ ಭಾಗವಹಿಸಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.