­ಮುರುಘಾ ಮಠದಲ್ಲಿ ಪರಿಷತ್‌ ಸಭಾಪತಿ ಹೊರಟ್ಟಿಗೆ ಸನ್ಮಾನ

ಸಮಾಜದಲ್ಲಿ ಪ್ರಜ್ಞಾವಂತರು ಸಿಗಲ್ಲ

Team Udayavani, Feb 26, 2021, 5:04 PM IST

Basavaraj Horatti

ಚಿತ್ರದುರ್ಗ: ಸಮಾಜದಲ್ಲಿ ಸಜ್ಜನರು ಸಿಗುತ್ತಾರೆ. ಆದರೆ, ಪ್ರಜ್ಞಾವಂತರು ಸಿಗುವುದಿಲ್ಲ. ಪ್ರಬುದ್ಧರಿದ್ದಲ್ಲಿ ಯಾವುದೇ ಅನಾಹುತ ಆಗುವುದಿಲ್ಲ. ಪ್ರಬುದ್ಧರು ಆಯ್ಕೆಯಾದರೆ ಅಪ್ರಬುದ್ಧರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಗುರುವಾರ ವಿಧಾನ ಪರಿಷತ್‌ ಸಭಾಪತಿಯಾಗಿ ಆಯ್ಕೆಯಾಗಿರುವ ಬಸವರಾಜ ಹೊರಟ್ಟಿ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊರಟ್ಟಿಯವರು ಪ್ರಜ್ಞಾವಂತ ಪ್ರಬುದ್ಧ ರಾಜಕಾರಣಿ. ಅವರದು ಹೋರಾಟದ ಬದುಕು. ಸಮಾಜದ ಹಿತಕ್ಕಾಗಿ, ಶಿಕ್ಷಕರ ಕ್ಷೇಮಕ್ಕಾಗಿ ಹೋರಾಟ ಮಾಡುತ್ತ ಬಂದಿರುವ ಹೊರಟ್ಟಿಯವರದ್ದು ಸಾರ್ಥಕವಾಗಿರುವ ಜೀವನ.

7ನೇ ಬಾರಿ ಆಯ್ಕೆಯಾಗಿರುವ ಸಂದರ್ಭ ಹೊರಟ್ಟಿಯವರಿಗೆ ಸಿಕ್ಕಿದೆ. ಅವರ ಆಯ್ಕೆಯ ಕ್ಷೇತ್ರ ಅಪರೂಪವಾದುದು. ವಿಧಾನ ಪರಿಷತ್‌ ಬುದ್ಧಿವಂತರ, ವಿದ್ಯಾವಂತರ ಕ್ಷೇತ್ರ. ಯಾವ ಶಿಕ್ಷಕರನ್ನು ಕೇಳಿದರು ಹೊರಟ್ಟಿಯವರು ಸಹಕಾರ ನೀಡಿದ್ದಾರೆ ಎನ್ನುತ್ತಾರೆ. ಅವರದು ಸಹಕಾರ ತತ್ವ. ವ್ಯಕ್ತಿಗೆ ಬದ್ಧತೆ ಇರಬೇಕು. ಕೇವಲ ಆಶ್ವಾಸನೆಗಳಿಂದ ಸಮಸ್ಯೆಗಳು ನಿವಾರಣೆ ಆಗುವುದಿಲ್ಲ. ರಾಷ್ಟ್ರಕ್ಕೆ, ರಾಜ್ಯಕ್ಕೆ ಬದ್ಧತೆಯ ರಾಜಕಾರಣಿಗಳು ಬೇಕಿದೆ ಎಂದು ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಬಸವರಾಜ ಹೊರಟ್ಟಿ, 116 ವರ್ಷಗಳ ಭವ್ಯ ಇತಿಹಾಸವಿರುವ ವಿಧಾನ ಪರಿಷತ್‌ ಭಾರತದ ಸರ್ವ ಶ್ರೇಷ್ಠವಾದುದು. ನನ್ನ ಅರ್ಧ ಆಯಸ್ಸನ್ನು ಸದನದಲ್ಲಿ ಕಳೆದಿದ್ದೇನೆ. ಕರ್ನಾಟಕದಲ್ಲಿ ಯಾರಿಗೂ ಸಿಗದ ಸೌಭಾಗ್ಯ ನನಗೆ ಸಿಕ್ಕಿದೆ. ಎರಡೂ ಸದನಗಳಲ್ಲಿ ನಾನು ಹಿರಿಯ ಸದಸ್ಯ. ಒಬ್ಬ ಸಾಮಾನ್ಯ ಶಿಕ್ಷಕನಾಗಿದ್ದ ನಾನು ಅವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ನನ್ನ ವಿರುದ್ಧ ಚುನಾವಣೆಯಲ್ಲಿ ಅನೇಕರು ನಿಂತಿದ್ದರೂ ನನ್ನನ್ನು ಶಿಕ್ಷಕರು ಗೆಲ್ಲಿಸಿದ್ದಾರೆ.

ಶಿಕ್ಷಕರ ಪ್ರತಿನಿಧಿಯಾಗಿರುವ ಮೊದಲ ಸಭಾಪತಿ ನಾನು. ನನಗೆ ಈ ಸ್ಥಾನ ಕೊಟ್ಟವರು ಶಿಕ್ಷಕರು. ಹಾಗಾಗಿ ಈ ಸ್ಥಾನವನ್ನು ಅವರಿಗೆ ಅರ್ಪಿಸುತ್ತೇನೆ. ವಿಧಾನ ಪರಿಷತ್ತನ್ನು ಯಾರು ಅಪವಿತ್ರ ಮಾಡಬಾರದು. ಸದನದ ಘನತೆ ಗೌರವವನ್ನು ಪ್ರತಿಯೊಬ್ಬರು ಕಾಪಾಡಿಕೊಳ್ಳಬೇಕು ಎಂದರು.

ಪ್ರಾಧ್ಯಾಪಕ ಡಾ.ಜೆ. ಕರಿಯಪ್ಪ ಮಾಳಿಗೆ ಅಭಿನಂದನಾ ನುಡಿಗಳನ್ನಾಡಿ, ವಿಧಾನ ಪರಿಷತ್‌  ಬಹುತ್ವದಿಂದ ಕೂಡಿದ್ದು, ಬುದ್ಧಿಜೀವಿಗಳ ಘನತೆಯನ್ನು ಹೊಂದಿದೆ. ರಾಜಕಾರಣದಿಂದ ಇಚ್ಛಾಶಕ್ತಿ ಮತ್ತು ಘನತೆ ಪಡೆದುಕೊಂಡವರು ಹೊರಟ್ಟಿಯವರು. ರಾಜಕಾರಣದಲ್ಲಿ ಅನೇಕರು ಆಸ್ತಿ ಕಳೆದುಕೊಂಡಿದ್ದಾರೆ. ಹಣ ಮಾಡಿಕೊಂಡವರಿದ್ದಾರೆ. ಆದರೆ ಹೊರಟ್ಟಿಯವರ ವ್ಯಕ್ತಿತ್ವ ಇದಕ್ಕೆ ಭಿನ್ನ. ನಾಡು ಕಂಡ ಅಪರೂಪದ ಶಿಕ್ಷಣ ತಜ್ಞರು. ಶಿಕ್ಷಕ ಸಮುದಾಯದಲ್ಲಿ ಬದಲಾವಣೆ ಆಗಿದೆ ಎಂದರೆ ಅದಕ್ಕೆ ಕಾರಣ ಹೊರಟ್ಟಿಯವರು. ಸ್ನೇಹಜೀವಿ, ಸಜ್ಜನರು. ಹೊರಟ್ಟಿಯವರಿಗೆ ಬುದ್ಧನ ಕಾರುಣ್ಯವಿದೆ ಎಂದರು.

ಕಾಂಗ್ರೆಸ್‌ ಮುಖಂಡ ಹನುಮಲಿ ಷಣ್ಮುಖಪ್ಪ, ವೀರಶೈವ ಸಮಾಜದ ಮುಖಂಡ ಕೆಇಬಿ ಷಣ್ಮುಖಪ್ಪ, ಜಂಗಮ ಸಮಾಜದ ಮಲ್ಲಿಕಾರ್ಜುನ ಸ್ವಾಮಿ ಮತ್ತಿತರರಿದ್ದರು. ಜೆಡಿಎಸ್‌ ಯುವ ಮುಖಂಡ ಪ್ರತಾಪ್‌ ಜೋಗಿ ಸ್ವಾಗತಿಸಿದರು. ಉಮೇಶ ಪತ್ತಾರ ಪ್ರಾರ್ಥಿಸಿದರು. ನಿರಂಜನ ದೇವರಮನೆ ನಿರೂಪಿಸಿದರು.

ಟಾಪ್ ನ್ಯೂಸ್

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.