ಏಳು ಸುತ್ತಿನ ಕೋಟೆ ಸ್ಫೂರ್ತಿ ಕೇಂದ್ರವಾಗಲಿ: ಪ್ರೊ| ಆರಾಧ್ಯ


Team Udayavani, Mar 11, 2019, 10:10 AM IST

cta-1.jpg

ಚಿತ್ರದುರ್ಗ: ಪುರಾತನ ಕಾಲದ ಇತಿಹಾಸ ಹೊಂದಿರುವ ಸ್ಮಾರಕಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಬೇಕಾಗಿದೆ ಎಂದು ಇತಿಹಾಸ ಸಂಶೋಧಕ ಪ್ರೊ|ಶ್ರೀಶೈಲ ಆರಾಧ್ಯ ಹೇಳಿದರು.

ಇಲ್ಲಿನ ರಂಗಯ್ಯನಬಾಗಿಲು ಸಮೀಪದ ಉದ್ಯಾನವನದಲ್ಲಿ ನೆಹರು ಯುವ ಕೇಂದ್ರ, ಮದಕರಿ ಯುವಕ ಸಂಘದಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವತ್ಛತಾ ಅರಿವು ಆಂದೋಲನ ಹಾಗೂ ಶ್ರಮದಾನ ಶಿಬಿರದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅನೇಕ ಐತಿಹಾಸಿಕ ಸ್ಮಾರಕಗಳಿವೆ. ಪಾಳೇಗಾರರು ಆಳಿದ ಚಿತ್ರದುರ್ಗದ ಏಳುಸುತ್ತಿನ ಕೋಟೆ ಯುವಕರಿಗೆ ಸ್ಫೂರ್ತಿಯ ಕೇಂದ್ರವಾಗಬೇಕು. ಚಿತ್ರದುರ್ಗದಂತ ಸುಭದ್ರವಾದ ಕೋಟೆ ರಾಜ್ಯದಲ್ಲಿ ಬೇರೆ ಎಲ್ಲಿಯೂ ಇಲ್ಲ. ಕೋಟೆ, ಕೊತ್ತಲ, ಅರಮನೆ, ಗುರು ಮನೆ ಇವುಗಳೆಲ್ಲಾ ಉಳಿಯಬೇಕಾಗಿದೆ. ಸ್ಮಾರಕ ಮತ್ತು ಐತಿಹಾಸಿಕ ಸ್ಥಳಗಳನ್ನು ಸ್ವತ್ಛವಾಗಿಟ್ಟುಕೊಂಡು ರಕ್ಷಿಸುವ
ಕೆಲಸವನ್ನು ಯುವಕರು ಮಾಡಬೇಕಿದೆ ಎಂದು ಕರೆ ನೀಡಿದರು. 

ಕೋಟೆ ವಾಯುವಿಹಾರಿಗಳ ಸಂಘದ ಅಧ್ಯಕ್ಷ ಆರ್‌. ಸತ್ಯಣ್ಣ ಮಾತನಾಡಿ, ಪ್ಲಾಸ್ಟಿಕ್‌ ಬಳಕೆಯನ್ನು ನಿಷೇ ಧಿಸಬೇಕು.
ಸ್ವತ್ಛ ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಕನಸು. ಅವರ ಕನಸು ನನಸಾಗಿಸಬೇಕಾದರೆ ಪ್ರತಿಯೊಬ್ಬರು
ಸ್ವತ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಡಿ.ಗೋಪಾಲಸ್ವಾಮಿ ನಾಯಕ ಮಾತನಾಡಿ, ಸ್ವತ್ಛತೆ ಮತ್ತು ಶ್ರಮದಾನದ ಮೂಲಕ
ಪಾಳೇಗಾರರು ಆಳಿದ ಚಿತ್ರದುರ್ಗದ ಕೋಟೆಯನ್ನು ಉಳಿಸಿ ಬೆಳೆಸಬೇಕಿದೆ. ಸ್ಮಾರಕದ ಮಹತ್ವ ಹಾಗೂ ಸಂರಕ್ಷಣೆ
ಕುರಿತು ಮುಂದಿನ ದಿನಗಳಲ್ಲಿ ಇತಿಹಾಸ ಸಂಶೋಧಕರನ್ನು ಕರೆಸಿ ಉಪನ್ಯಾಸ ಹಮ್ಮಿಕೊಳ್ಳಲಾಗುವುದು. ಇದರಿಂದ
ಚಿತ್ರದುರ್ಗದ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸಿದಂತಾಗುತ್ತದೆ ಎಂದರು.

ಕನಿಷ್ಠ ಮೂರು ತಿಂಗಳಿಗೊಮ್ಮೆಯಾದರೂ ಈ ರೀತಿಯ ಸ್ವತ್ಛತೆ ಮತ್ತು ಶ್ರಮದಾನದ ಮೂಲಕ ಸ್ಮಾರಕಗಳನ್ನು ಉಳಿಸೋಣ. ಲಾಲ್‌ ಬತೇರಿ ಮೇಲೆ ಕೆಲವರು ಮದ್ಯಸೇವಿಸಿ ಬಾಟಲಿಗಳನ್ನು ಅಲ್ಲಿಯೇ ಎಸೆದು ಹೋಗುತ್ತಾರೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿರುವುದರಿಂದ ಪೊಲೀಸ್‌ ಇಲಾಖೆಯವರು ಕೂಡ ಸ್ಮಾರಕ ಮತ್ತು ಕೋಟೆ ಉಳಿವಿಗೆ ಗಮನ ಕೊಡಲಿ ಎಂದು ಮನವಿ ಮಾಡಿದರು.

ರಾಜಾ ಮದಕರಿನಾಯಕ, ಸೋಮಶೇಖರ್‌, ಉಮಾ ಶ್ರೀಶೈಲ ಆರಾಧ್ಯ, ಭದ್ರಣ್ಣ, ವೀರಭದ್ರಪ್ಪ, ಮಾರುತಿ, ಎಸ್‌. ಹೇಮಂತಕುಮಾರ್‌, ಎಂ. ಕಾರ್ತಿಕ್‌, ನವೀನ್‌, ಎಸ್‌. ಮಾರುತಿ, ನೀಲೇಶ್‌, ಅಭಿದರ್ಶನ್‌, ವಿನೋತ್‌, ಪ್ರಮೋದ್‌ ಇದ್ದರು. 

ಪ್ಲಾಸ್ಟಿಕ್‌ ನಿರ್ಮೂಲನೆಗೆ ಪಣ ತೊಡಿ ಹಿಂದಿನ ಕಾಲದಲ್ಲಿ ಮಾರುಕಟ್ಟೆಗೆ ಹೋಗಿ ಅಗತ್ಯ ವಸ್ತುಗಳನ್ನು ಖರೀದಿಸಬೇಕಾಗಿದ್ದರೆ ಕೈಯಲ್ಲಿ ಬಟ್ಟೆ ಚೀಲಗಳನ್ನು ಹಿಡಿದುಕೊಂಡು ಹೋಗುವ ಪದ್ಧತಿ ಇತ್ತು. ಈಗ ಎಲ್ಲೆಡೆ ಪ್ಲಾಸ್ಟಿಕ್‌ ಆವರಿಸಿಕೊಂಡಿರುವುದರಿಂದ ಬಟ್ಟೆ ಕೈಚೀಲಗಳು ಮಾಯವಾಗಿದೆ. ಪ್ಲಾಸ್ಟಿಕ್‌ ಕವರ್‌ನಲ್ಲಿ ಬಿಸಿ ಪದಾರ್ಥಗಳನ್ನು ಕಟ್ಟಿಸಿಕೊಂಡು ಬಂದು ಸೇವಿಸುವುದರಿಂದ ಅದರಲ್ಲಿರುವ ರಾಸಾಯನಿಕ ಅಂಶಗಳು ದೇಹದೊಳಗೆ ಸೇರಿಕೊಂಡು ಮನುಷ್ಯ ನಾನಾ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಾನೆ. ಪ್ರಾಣಿ ಪಕ್ಷಿಗಳು ಪ್ಲಾಸ್ಟಿಕ್‌ಗಳನ್ನು ತಿಂದು ಸತ್ತಿರುವ ಉದಾಹರಣೆಗಳಿವೆ. ಹಾಗಾಗಿ ಪ್ಲಾಸ್ಟಿಕ್‌ ಬಳಸುವುದಿಲ್ಲವೆಂದು ಪ್ರತಿಯೊಬ್ಬರೂ ದೃಢ ಸಂಕಲ್ಪ ಮಾಡಬೇಕೆಂದು ಆರ್‌. ಸತ್ಯಣ್ಣ ಹೇಳಿದರು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.