ಯುವ ಪೀಳಿಗೆಗೆ ಭಗತ್‌ಸಿಂಗ್‌ ಆದರ್ಶ ಮಾದರಿಯಾಗಲಿ


Team Udayavani, Sep 29, 2018, 1:01 PM IST

cta-1.jpg

ಚಿತ್ರದುರ್ಗ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಾವನ್ನು ಲೆಕ್ಕಿಸದೆ ಹೋರಾಡಿದ ಮಹಾನ್‌ ಕ್ರಾಂತಿಕಾರಿ ಭಗತ್‌ಸಿಂಗ್‌ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು. ನಗರದಲ್ಲಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌, ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌, ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ಶುಕ್ರವಾರ ಭಗತ್‌ಸಿಂಗ್‌ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಡೀ ದೇಶದ ಜನತೆಗೆ ಭಗತ್‌ಸಿಂಗ್‌ ಮಾದರಿಯಾಗಿದ್ದಾರೆ. ಮುಕ್ತ ಸ್ವಾತಂತ್ರ್ಯದ ಕನಸಿಗಾಗಿ ಅವರು ಬ್ರಿಟಿಷರ ವಿರುದ್ಧ ಹೋರಾಟ ಮಾಡಿದರು. ಕೇವಲ ತಮ್ಮ 23ನೇ ವಯಸ್ಸಿನಲ್ಲಿ ಅವರು ವೀರ ಮರಣ ಹೊಂದುವ ಮೂಲಕ ಹುತಾತ್ಮರಾದರು ಎಂದು ತಿಳಿಸಿದರು.

ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌ ಜಿಲ್ಲಾಧ್ಯಕ್ಷ ರವಿಕುಮಾರ್‌ ಮಾತನಾಡಿ, ಭಗತ್‌ಸಿಂಗ್‌ನಂತಹ ಆದರ್ಶ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ನಡೆಯಬೇದ ಇಂದಿನ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದಾರೆ.  ಇಂದಿನ ಯುವಪೀಳಿಗೆ ಭಗತ್‌ಸಿಂಗ್‌ರ ವಿಚಾರಗಳನ್ನು ತಿಳಿಯುವ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಆದರ್ಶ ವ್ಯಕ್ತಿಗಳ ಮಾದರಿಗಳನ್ನು ತೋರಿಸಿಕೊಡಬೇಕಿರುವುದು ಎಲ್ಲ ಪ್ರಜ್ಞಾವಂತರ ಆದ್ಯ ಕರ್ತವ್ಯವಾಗಿದೆ ಎಂದರು. ಹಿರಿಯ ಪತ್ರಕರ್ತ ಜಿ.ಎಸ್‌. ಉಜ್ಜಿನಪ್ಪ ಮಾತನಾಡಿ, ಕಳೆದ ಹಲವಾರು ದಿನಗಳಿಂದ ವಿವಿಧ ಜನಪರ ಸಂಘಟನೆಗಳು ಡಿಸಿ ವೃತ್ತದಲ್ಲಿರುವ ಉದ್ಯಾನವನಕ್ಕೆ ಭಗತ್‌ ಸಿಂಗ್‌ ಹೆಸರಿಡಬೇಕೆಂದು ಒತ್ತಾಯಿಸಿ ನಗರಸಭೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ಕೂಡಲೇ ನಗರಸಭೆ ಕ್ರಮ ಕೈಗೊಳ್ಳಬೇಕೆಂದರು.

ಸಂಶೋಧಕ ಡಾ|ಬಿ.ರಾಜಶೇಖರಪ್ಪ ಮಾತನಾಡಿ, ಡಿಸಿ ವೃತ್ತದಲ್ಲಿರುವ ಉದ್ಯಾನವನಕ್ಕೆ ಮಹಾನ್‌ ದೇಶಪ್ರೇಮಿ ಭಗತ್‌ ಸಿಂಗ್‌ ಹೆಸರಿಡುವ ಮೂಲಕ ಅವರಿಗೆ ಸೂಕ್ತ ಗೌರವ ಸಲ್ಲಿಸಬೇಕು. ಅವರ ನೆನಪುಗಳನ್ನು ಹಸಿರಾಗಿಡುವ ಪರಿಪಾಠ ಬೆಳೆಸಬೇಕು. ಡಿಸಿ ವೃತ್ತದಲ್ಲಿರುವ ಉದ್ಯಾನವನವನ್ನು ಭಗತ್‌ ಸಿಂಗ್‌ ಅವರ ಹೆಸರಿನಿಂದ ಕರೆಯಬೇಕೆಂಬುದು ನಗರದ ವಿದ್ಯಾರ್ಥಿ ಯುವಜನರ ಮತ್ತು
ನಾಗರಿಕರ ಅಪೇಕ್ಷೆಯಾಗಿದೆ ಎಂದರು.

ನಗರಸಭೆಯ ಪರವಾಗಿ ತಾವು ತಾತ್ವಿಕ ಒಪ್ಪಿಕೊಂಡಿರುತ್ತೀರಿ. ಆದರೆ ಈ ಉದ್ಯಾನಕ್ಕೆ ಭಗತ್‌ಸಿಂಗ್‌ ಹೆಸರನ್ನು ಅಂತಿಮಗೊಳಿಸುವ ಕಾರ್ಯ ಇನ್ನೂ ಪೂರ್ಣಗೊಳಿಸಿಲ್ಲ. ಆದ್ದರಿಂದ ಭಗತ್‌ಸಿಂಗ್‌ರ 111ನೇ ಜನ್ಮದಿನವಾದ ಇಂದು ಅದೇ ಪಾರ್ಕ್‌ಬಳಿ ಸಾರ್ವಜನಿಕ ಸಭೆ ನಡೆಸಿ ಮತ್ತೂಮ್ಮೆ ಹಕ್ಕೊತ್ತಾಯ ಸಲ್ಲಿಸುತ್ತಿದ್ದೇವೆ. ತಾವು ಆದಷ್ಟು ಜರೂರಾಗಿ ಎಲ್ಲ ಜನರ ಬೇಡಿಕೆಯಂತೆ ಈ ಕಾರ್ಯ ಪೂರ್ಣಗೊಳಿಸಿ ಕೊಡಬೇಕೆಂದು ಕೋರುತ್ತೇವೆ ಎಂದರು.

ನಿವೃತ್ತ ಬ್ಯಾಂಕ್‌ ನೌಕರ ನರಸಿಂಹಮೂರ್ತಿ, ಸಂಘಟನಾಕರರಾದ ವಿನಯ್‌, ನಿಂಗರಾಜು, ಕುಮುದ, ಮಾರುತಿ, ಚಂದನ, ಸುಮಲತ, ಬೊಮ್ಮನಾಯ್ಕ ಇನ್ನಿತರರಿದ್ದರು. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.