ಹೆಣ್ಣುಮಕ್ಕಳ ಆರೈಕೆಗೆ ಗಮನ ಕೊಡಿ

ಮಹಿಳೆಯರು ಆರೋಗ್ಯ ಯೋಜನೆ ಸದುಪಯೋಗಪಡಿಸಿಕೊಳ್ಳಲಿ: ಡಾ| ಗಿರೀಶ್‌

Team Udayavani, Mar 12, 2020, 6:07 PM IST

12-March-31

ಭರಮಸಾಗರ: ಹದಿಹರೆಯದ ವಯಸ್ಸಿನಲ್ಲೇ ಹೆಣ್ಣುಮಕ್ಕಳಿಗೆ ಉತ್ತಮ ಪೋಷಣೆ ಮತ್ತು ಆರೈಕೆಯ ಅಗತ್ಯವಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಟಿ.ವಿ. ಗಿರೀಶ್‌ ಹೇಳಿದರು.

ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಕಾಲದಲ್ಲಿ ಸೂಕ್ತ ಪರೀಕ್ಷೆಗಳ ಮುಖಾಂತರ ಅವರ ದೈಹಿಕ ಆರೋಗ್ಯವನ್ನು ಕಾಪಾಡುವುದು ಒಳಿತು. ಸದೃಢವಾದ ತಾಯಿಯಾಗಿ ಆರೋಗ್ಯವಂತ ಮಗುವನ್ನು ಹೆರುವ ಭಾರವನ್ನು ಹೆಣ್ಣುಮಕ್ಕಳು ನಿರ್ವಹಿಸಬೇಕಾಗುತ್ತದೆ. ಆರೋಗ್ಯ ಯೋಜನೆಗಳು ದಿನೇ ದಿನೇ ಹೆಚ್ಚುತ್ತಿದ್ದು, ಅವು ಸಾರ್ವಜನಿಕರ ಆರೋಗ್ಯ ಕಾಪಾಡಲು ಸಹಕಾರಿಯಾಗಿವೆ ಎಂದರು.

ಋತುಮಾನಕ್ಕೆ ಅನುಗುಣವಾಗಿ ದೊರೆಯುವ ಹಣ್ಣು ಹಂಪಲು, ತರಕಾರಿ, ಮೊಳಕೆ ಕಾಳುಗಳು, ನುಗ್ಗೆಸೊಪ್ಪು, ನಾರಿನಂಶವಿರುವ ಆಹಾರ ಪದಾರ್ಥಗಳನ್ನು ಸೇವಿಸಿ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಮಂಜುನಾಥ್‌ ಮಾತನಾಡಿ, ಪ್ರತಿಯೊಬ್ಬರೂ ವೈಯಕ್ತಿಕ ಮತ್ತು ಪರಿಸರ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ದೂರ ಪ್ರಯಾಣಗಳನ್ನು ಮಾಡದಿರುವುದು ಒಳಿತು. ಜನನಿಬಿಡ ಮತ್ತು ಜಾತ್ರೆ, ಸಭೆ, ಸಮಾರಂಭಗಳಲ್ಲಿ ಸಾಮೂಹಿಕ ಪಾಲ್ಗೊಳ್ಳುವಿಕೆಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು ಎಂದರು. ಆಗಾಗೆ ಕೈ ತೊಳೆದುಕೊಳ್ಳುವುದು, ಶುದ್ಧ ನೀರು ಕುಡಿಯುವುದು, ಹಸ್ತಲಾಘವ ಮಾಡದೇ ಇರುವುದರಿಂದ ಕೊರೊನಾ ವೈರಸ್‌ ತಡೆಯಬಹುದು ಎಂದು ತಿಳಿಸಿದರು.

ಕ್ಷೇತ್ರ ಆರೋಗ್ಯ ಶಿಕ್ಷಣಾ ಧಿಕಾರಿ ಬಿ. ಮೂಗಪ್ಪ ಮಾತನಾಡಿ, ಗ್ಲಾಕೋಮಾ ಯಾವುದೇ ರೋಗ ಲಕ್ಷಣ ಕಾಣಿಸಿಕೊಳ್ಳದೆ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆಯಿದೆ. ಈ ಕಾರಣದಿಂದ ನಿಗದಿತವಾಗಿ ತಜ್ಞ ವೈದ್ಯರಲ್ಲಿ ಕಣ್ಣಿನ ಪರೀಕ್ಷೆ ಮಾಡಿಸಿಕೊಂಡು ಕಣ್ಣಿನ ರಕ್ಷಣೆ ಮಾಡಿಕೊಳ್ಳುವುದು ಒಳ್ಳೇಯದು ಎಂದರು.

ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ರಕ್ತದೊತ್ತಡ, ಹೃದಯದ ತೊಂದರೆ, ಮಧುಮೇಹ, ಇತರೆ ಸಾಂಕ್ರಾಮಿಕ ರೋಗಗಳು ಇದ್ದಂತಹ ಹೆಣ್ಣುಮಕ್ಕಳು ಮಕ್ಕಳು ಬೇಡವೆಂದು ನಿರ್ಧರಿಸಿದ ನಂತರ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಜೀವಕ್ಕೆ ಕುತ್ತು ತಂದುಕೊಳ್ಳುವುದಕ್ಕಿಂತ ಪುರುಷರಿಗೆ ಹೊಸ ವಿಧಾನವಾದ ಪುರುಷ ಸಂತಾನ ನಿರೋಧ ಶಸ್ತ್ರಚಿಕಿತ್ಸೆ ಮಾಡಿಸಬಹುದು ಎಂದು ತಿಳಿಸಿದರು.

ಬಳಿಕ ರಕ್ತಹೀನತೆ ತಡೆಗಟ್ಟುವ ನಿಟ್ಟಿನಲ್ಲಿ ಆರು ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ ಐರನ್‌ ಸಿರಪ್‌ ಕುಡಿಸುವ ಮೂಲಕ ಜಾಗೃತಿ ಮೂಡಿಸಲಾಯಿತು. ಶಾಲಾ ಶಿಕ್ಷಕರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, 35ಕ್ಕೂ ಹೆಚ್ಚು ತಾಯಂದಿರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.