ಏತ ನೀರಾವರಿ ಯೋಜನೆ ಪೈಪ್‌ಲೈನ್‌ ಅಳವಡಿಕೆಗೆ ಸರ್ವೆ

ಆದಷ್ಟು ಶೀಘ್ರ ಭರಮಸಾಗರ ಕೆರೆಗಳಿಗೆ ನೀರು ಹರಿದು ಬರುವ ವಿಶ್ವಾಸ

Team Udayavani, Feb 20, 2020, 1:01 PM IST

20-February-11

ಭರಮಸಾಗರ: ಭರಮಸಾಗರ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ಪೈಪ್‌ಲೈನ್‌ ಅಳವಡಿಸುವ ಸಂಬಂಧ ಇಲ್ಲಿನ ಬಿಳಿಚೋಡು ರಸ್ತೆ ಮಾರ್ಗದಲ್ಲಿ ಬರುವ ಕೆರೆಗಳಿಗೆ ನೀರು ತುಂಬಿಸಲು ಬುಧವಾರ ಸರ್ವೆ ಕಾರ್ಯ ನಡೆಯಿತು.

ಬೆಂಗಳೂರಿನ ರೇಡಿಯನ್‌ ಸರ್ವೆ ಕಂಪನಿ ಭರಮಸಾಗರ ಏತ ನೀರಾವರಿ ಯೋಜನೆಯಡಿ 42 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಕೆರೆಗಳಿಗೆ ಪೈಪ್‌ಲೈನ್‌ ಅಳವಡಿಸುವ ಮಾರ್ಗದ ಸರ್ವೆ ಕಾರ್ಯವನ್ನು ನಡೆಸುತ್ತಿದೆ. ಕೆರೆಗಳನ್ನು ಸಂಪರ್ಕಿಸುವ ರಸ್ತೆ ಮಾರ್ಗದ ಸನಿಹದಲ್ಲಿನ ಭೂ ಮಟ್ಟ ಹಾಗೂ ಈ ಮಾರ್ಗಗಳಲ್ಲಿ ಬರುವ ಮರಗಳು ಕಂಬಗಳ ಸಂಖ್ಯೆ, ಮಣ್ಣಿನ ಗುಣ ಸೇರಿದಂತೆ ಇತರೆ ಮಾಹಿತಿಗಳನ್ನು ಸರ್ವೆ ಕಾರ್ಯದಲ್ಲಿ ದಾಖಲಿಸಲಾಗುತ್ತಿದೆ.

ಈಗಾಗಲೇ ರೇಡಿಯನ್‌ ಕಂಪನಿಯ ಎಂಟು ಜನರ ತಂಡ ಭರಮಸಾಗರದ ನಾನಾ ಭಾಗಗಳಲ್ಲಿ ಸರ್ವೆ ಕಾರ್ಯವನ್ನು ನಡೆಸುತ್ತಿದೆ. ಇನ್ನೂ ಎರಡು ತಂಡಗಳು ಬರಲಿದೆ ಎಂದು ಸರ್ವೇಯರ್‌ ವೆಂಕಟೇಶ್‌ ತಿಳಿಸಿದರು.

ಒಟ್ಟಾರೆ 42 ಕೆರೆಗಳ ಪೈಪ್‌ಲೈನ್‌ ಅಳವಡಿಕೆ ಕಾರ್ಯದ ಸರ್ವೆ ಕಾರ್ಯವನ್ನು ಮುಗಿಸಲು 20 ದಿನಗಳ ಕಾಲಾವಯನ್ನು ನೀಡಲಾಗಿದೆ. ಜೂನ್‌ ಒಂದರ ಒಳಗೆ ನೀರು ಹರಿಸುವ ಸಂಬಂಧ ಪೈಪ್‌ಲೈನ್‌ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಬೇಕಿದೆ. ಈ ಹಿನ್ನೆಲೆಯಲ್ಲಿ ಯೋಜನೆಯ ಎಲ್ಲಾ ಹಂತದ ಕಾಮಗಾರಿಗಳು ಚುರುಕು ಪಡೆದಿವೆ. ಭರಮಸಾಗರದ ಚಹಾ, ಹೋಟೆಲ್‌, ಇತರೆ ಜನರು ಗುಂಪು ಸೇರುವ ಕಡೆಗಳಲ್ಲಿ ಕೆರೆಗಳಿಗೆ ನೀರು ಹರಿಯುವ ಕುರಿತು ಚರ್ಚೆಗಳು ನಡೆಯುತ್ತಿವೆ. ತೋಟಗಾರಿಕೆ ಬೆಳೆಗಾರರು ನೀರು ಬಂದರೆ ಸಾಕಪ್ಪ ಎಂದು ಹರಕೆ ಹೊತ್ತಿದ್ದಾರೆ. ಈ ದಿಸೆಯಲ್ಲಿ ಶಂಕರನಾರಾಯಣ ಕನ್ಸ್‌ಟ್ರಕ್ಷನ್‌ ಕಂಪನಿ ಕಾಮಗಾರಿಯನ್ನು ಚುರುಕುಗೊಳಿಸಿದೆ. ಮಲೇಷಿಯಾ, ಅಪಘಾನಿಸ್ತಾನಗಳಲ್ಲಿ ಡ್ಯಾಂಗಳನ್ನು ಕಟ್ಟಿದ ಈ ಕಂಪನಿ ನಮ್ಮ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಬೇಗನೇ ಮುಗಿಸುತ್ತದೆ ಎಂಬ ಮಾತು ಸ್ಥಳೀಯರಿಂದ ಕೇಳಿ ಬರುತ್ತಿದೆ.

ಸಿರಿಗೆರೆ ಗ್ರಾಪಂನ ನೂತನ ಕಟ್ಟಡದ ಉದ್ಘಾಟನೆ ವೇಳೆ ತರಳಬಾಳು ಶ್ರೀಗಳು ಆಗಸ್ಟ್‌ ಒಳಗೆ ಕೆರೆಗಳಿಗೆ ನೀರು ಹರಿಯಲಿದೆ ಎಂದಿದ್ದರು. ಹಾಗಾಗಿ ಮಳೆಗಾಲಕ್ಕೆ ನೀರು ಬರುವುದು ನಿಶ್ಚಿತ ಎಂಬ ವಿಶ್ವಾಸ ಮೂಡಿದೆ.

20 ದಿನಗಳಲ್ಲಿ ಸರ್ವೆ ಕಾರ್ಯವನ್ನು ನಡೆಸಲು ಸೂಚಿಸಿದ್ದಾರೆ. ಮತ್ತಷ್ಟು ಸರ್ವೇಯರ್‌ಗಳು ಬರಲಿದ್ದು ಪೈಪ್‌ ಲೈನ್‌ ಅಳವಡಿಕೆ ಸಂಬಂಧಿತ ಸರ್ವೆ ಕಾರ್ಯ ಚುರುಕುಗೊಳ್ಳಲಿದೆ. ಸರ್ವೆಯಲ್ಲಿ ಗ್ರೌಂಡ್‌ ಲೆವೆಲ್‌ ಚೆಕ್‌ ಮಾಡಲಾಗುತ್ತದೆ. ಬಹುತೇಕ ರಸ್ತೆಗಳ ಪಕ್ಕದಲ್ಲೇ ಪೈಪ್‌ಲೈನ್‌ ಹಾದು ಹೋಗಲಿದೆ.
ಆಯುಬ್‌, ಮುಖ್ಯ ಸರ್ವೇಯರ್‌,
ರೇಡಿಯನ್‌ ಕಂಪನಿ, ಬೆಂಗಳೂರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.