ರಂಗೇರಿದ ಸಹಕಾರ ಸಂಘದ ಚುನಾವಣಾ ಅಖಾಡ

ಭರಮಸಾಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಾಳೆ ಚುನಾವಣೆ 12 ಸ್ಥಾನಗಳಿಗೆ ಕಣದಲ್ಲಿದ್ದಾರೆ 24 ಜನ ಸ್ಪರ್ಧಿಗಳು

Team Udayavani, Jan 15, 2020, 1:02 PM IST

15-January-11

ಭರಮಸಾಗರ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳಿಗೆ ಜ. 16 ರಂದು ಚುನಾವಣೆ ನಡೆಯಲಿದ್ದು, ಚುನಾವಣಾ ಅಖಾಡ ರಂಗೇರುತ್ತಿದೆ. ಆದರೆ 2013ರ ಸಹಕಾರ ಸಂಘಗಳ ಕಾಯ್ದೆ ಪ್ರಕಾರ ಹಲವು ನಿಬಂಧನೆಗಳನ್ನು ಪೂರೈಸದೇ ಇರುವುದಕ್ಕೆ ಒಟ್ಟು 2735 ಮತದಾರರಲ್ಲಿ 1992 ಮತದಾರರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ. ಸಹಕಾರ ಸಂಘಗಳ ನೂತನ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಿ ಜಿಲ್ಲೆಯಲ್ಲಿಯೇ ಇಲ್ಲಿನ ಸಂಘ ಮಾದರಿ ಹೆಜ್ಜೆ ಇಟ್ಟಿದೆ.

“ಸಹಕಾರಂ ಗೆಲ್ಗೆ ಸಹಕಾರಂ ಬಾಳ್ಗೆ’ ಎಂಬ ಉದ್ದೇಶದೊಂದಿಗೆ 1949 ರಲ್ಲಿ ಸ್ಥಾಪನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 71 ವರ್ಷಗಳನ್ನು ಪೂರೈಸಿದೆ. 2.70 ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. 1.31 ಕೋಟಿ ಮಧ್ಯಮ ಅವ ಧಿ ಸಾಲ ಸೇರಿ ನಾಲ್ಕು ಕೋಟಿಗಿಂತ ಹೆಚ್ಚು ಸಾಲ ಸೌಲಭ್ಯವನ್ನು ಸಂಘದ ಸದಸ್ಯರಿಗೆ ನೀಡಲಾಗಿದೆ.

ರಂಗೇರಿದ ಚುನಾವಣಾ ಕಣ: ಕಳೆದ ಚುನಾವಣೆಗಳಿಗಿಂತ ಈ ಚುನಾವಣೆ
ಅಖಾಡ ರಂಗೇರುವಂತೆ ಮಾಡಿದೆ. 13 ಗ್ರಾಮಗಳು ಸಂಘದ ವ್ಯಾಪ್ತಿಗೆ ಬರುತ್ತವೆ.
ಭರಮಸಾಗರ, ಭರಮಸಾಗರ ಗೊಲ್ಲರಹಟ್ಟಿ, ಕೋಡಿರಂಗವ್ವನಹಳ್ಳಿ, ಕೋಡಿರಂಗವ್ವನಹಳ್ಳಿ ವಡ್ಡರಹಟ್ಟಿ, ಹಂಪನೂರು, ಎಮ್ಮೆಹಟ್ಟಿ, ಬೇವಿನಹಳ್ಳಿ, ಹರಳಕಟ್ಟೆ, ಇಸಾಮುದ್ರ, ಇಸಾಮುದ್ರ ಗೊಲ್ಲರಹಟ್ಟಿ, ಇಸಾಮುದ್ರ ಹೊಸಹಟ್ಟಿ, ಪಾಮರಹಳ್ಳಿ, ಸುಲ್ತಾನಿಪುರ ಗ್ರಾಮಗಳು ಸೇರುತ್ತವೆ. ಸಾಲಗಾರರ ಕ್ಷೇತ್ರದಿಂದ 11 ನಿರ್ದೇಶಕ ಸ್ಥಾನಗಳಿಗೆ 22 ಅಭ್ಯರ್ಥಿಗಳು, ಸಾಲಗಾರರಲ್ಲದ ಒಂದು ಸ್ಥಾನಕ್ಕೆ ಇಬ್ಬರು ಅಭ್ಯರ್ಥಿಗಳು ಸೇರಿ ಒಟ್ಟು 24 ಜನರು ಕಣದಲ್ಲಿ ಉಳಿದಿದ್ದಾರೆ. ಜ. 16 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಸಂಘದ ಕಚೇರಿ ಕಟ್ಟಡದಲ್ಲಿ 12 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಂಘದೊಂದಿಗೆ ಕನಿಷ್ಠ ವ್ಯವಹಾರ ನಡೆಸಬೇಕೆಂಬ ನಿಯಮಗಳುಳ್ಳ 2013ರ ಬೈಲಾ ಜಾರಿಗೊಂಡಿದೆ. ಈ ಬಗ್ಗೆ ಜನರಿಗೆ ತಿಳಿವಳಿಕೆ
ಮೂಡಿಸುತ್ತಿದ್ದೇವೆ. ಪ್ರತಿ ವರ್ಷ ವಾರ್ಷಿಕ ಮಹಾಸಭೆಯಲ್ಲಿ ನೋಟಿಸ್‌ ಮೂಲಕ ವಿವರಣೆ ನೀಡುತ್ತಿದ್ದೇವೆ. ಇಡೀ ದೇಶಾದ್ಯಂತ ಈ ಕಾಯ್ದೆ ಇದೆ. ಮತದಾನದ ಹಕ್ಕು ಕಳೆದುಕೊಂಡ ಸುಮಾರು 184 ಜನರು ನ್ಯಾಯಾಲಯದ
ಮೋರೆ ಹೋಗಿದ್ದು, ಕೋರ್ಟ್‌ ಮೋರೆ ಹೋದವರಿಗೆ ನ್ಯಾಯಾಲಯ ಮತದಾನದ ಹಕ್ಕು ನೀಡುವಂತೆ ಸೂಚಿಸಿದರೆ ನ್ಯಾಯಾಲಯದ ಆದೇಶವನ್ನು ಪಾಲಿಸಲಾಗುತ್ತದೆ ಎಂದು ಸಹಕಾರ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

1071 ಸಾಲಗಾರ ಸದಸ್ಯರಲ್ಲಿ 431 ಸದಸ್ಯರಿಗೆ ಮತದಾನದ ಅರ್ಹತೆಯಿದೆ.
ಸಾಲಗಾರರಲ್ಲದ ವಿಭಾಗದ 1664 ಸದಸ್ಯರಲ್ಲಿ 312 ಸದಸ್ಯರು ಮತ ಚಲಾಯಿಸುವ ಹಕ್ಕು ಉಳಿಸಿಕೊಂಡಿದ್ದಾರೆ.

ಲಾಭದತ್ತ ಹೆಜ್ಜೆ ಇಟ್ಟ ಸಂಘ: 34 ಲಕ್ಷ ರೂ. ನಷ್ಟದಲ್ಲಿದ್ದ ಸಂಘ ಕಳೆದ ಎಂಟು ವರ್ಷಗಳಲ್ಲಿ ಲಾಭದತ್ತ ಹೆಜ್ಜೆ ಇಟ್ಟಿದೆ. ಪ್ರಸ್ತುತ 2,87,422 ರೂ. ಲಾಭದಲ್ಲಿದೆ. ಸದಸ್ಯರ ಸಹಕಾರ, ವ್ಯವಹಾರ, ಆಡಳಿತ ಮಂಡಳಿಯ ಪ್ರೋತ್ಸಾಹ, ಹಿರಿಯರ ಮಾರ್ಗದರ್ಶನ, ಮತ್ತು ಸಿಬ್ಬಂದಿಯ ಪ್ರಯತ್ನದಿಂದ ಸಂಘದ ಚಹರೆಯೇ ಬದಲಾಗಿದೆ.

ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯಗಳನ್ನು ಜನತೆಗೆ ಒದಗಿಸುತ್ತೇವೆ. ಅವುಗಳ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು. ಸಂಘದ ಧನಾತ್ಮಕ ಬದಲಾವಣೆಗೆ ಪ್ರೋತ್ಸಾಹ ಕೊಡಬೇಕು. ಬದಲಾದ ನಿಯಮಗಳನ್ನು ಪಾಲನೆ ಮಾಡಿ ಸಂಘದ ಚಟುವಟಿಕೆಗಳೊಂದಿಗೆ ಸಕ್ರಿಯರಾಗಿರಬೇಕು. ಸಂಘದ ಚಟುವಟಿಕೆಗಳಿಂದ ದೂರ ಉಳಿದರೆ
ಮತದಾನದ ಹಕ್ಕಿನಿಂದ ಸದಸ್ಯರು ವಂಚಿತರಾಗಬೇಕಾಗುತ್ತದೆ.
ಬಿ. ಶ್ರೀಧರ ಶೆಟ್ಟಿ,
ಮುಖ್ಯ ಕಾರ್ಯನಿರ್ವಹಣಾ ಧಿಕಾರಿ,
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಭರಮಸಾಗರ

ಎಚ್‌.ಬಿ. ನಿರಂಜನ ಮೂರ್ತಿ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.