ಕೆಳಸೇತುವೆಗೆ ಬೇಕಿದೆ ಮೆಟ್ಟಿಲು ಸೌಲಭ್ಯ

ಭರಮಸಾಗರ ಬೈಪಾಸ್‌ನ ಕೆಳಸೇತುವೆಯಿಂದ ಮೇಲಿನ ರಸ್ತೆ ತಲುಪಲು ಪಡಬೇಕು ಪ್ರಯಾಸ

Team Udayavani, Feb 12, 2020, 1:40 PM IST

12-February-12

ಭರಮಸಾಗರ: ಇಲ್ಲಿನ ಬೈಪಾಸ್‌ನಲ್ಲಿ ಭರಮಸಾಗರ-ಗೊಲ್ಲರಹಟ್ಟಿ ಬಳಿ ಚಿತ್ರದುರ್ಗದ ಕಡೆಯಿಂದ ಗ್ರಾಮವನ್ನು ಪ್ರವೇಶಿಸುವ ಕೆಳಸೇತುವೆ ಬಳಿ ತುರ್ತು ಸಮಯದಲ್ಲಿ ಸೇತುವೆ ಮೇಲ್ಭಾಗಕ್ಕೆ ತೆರಳಲು ಮೆಟ್ಟಿಲುಗಳ ವ್ಯವಸ್ಥೆ ಇಲ್ಲ. ಹಾಗಾಗಿ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿದೆ.

ಇಲ್ಲಿನ ಕೆಳಸೇತುವೆಯಿಂದ ರಸ್ತೆಯನ್ನು ಎತ್ತರಿಸಿ ಇಳಿಜಾರು ಕೊನೆಗೊಂಡಿರುವ ಎರಡು ಕಡೆ ಸುಮಾರು ಒಂದು ಕಿಮೀ ದೂರದವರೆಗೆ ಚಲಿಸಲು ಪ್ರಯಾಸಪಡಬೇಕಿದೆ. ವಾಹನ ಸೌಲಭ್ಯ ಉಳ್ಳವರಿಗೆ ತೊಂದರೆಯಿಲ್ಲ. ಅನುಕೂಲಸ್ಥರು ಆಟೋ ಮೂಲಕ ಇಲ್ಲಿಂದ ಸುರಕ್ಷಿತವಾಗಿ ಮನೆ ಸೇರುತ್ತಾರೆ. ಆದರೆ ಬಡವರು ಮಾತ್ರ ಮೆಟ್ಟಿಲುಗಳಿಲ್ಲದ ಕೆಳಸೇತುವೆಯಿಂದ ಕೆಳಗೆ ಇಳಿಯಲು ಆಗದೆ ಕೊಂಕಣ ಸುತ್ತಿ ಮೈಲಾರ ತಲುಪಿದಂತೆ ದೂರದ ರಸ್ತೆಯಲ್ಲಿ ನಡೆದುಕೊಂಡು ಹೋಗಬೇಕಿದೆ.

ಕೆಳಸೇತುವೆ ಬಳಿ ಮೆಟ್ಟಿಲುಗಳ ವ್ಯವಸ್ಥೆ ಇಲ್ಲದೇ ಇರುವುದರಿಂದ ಹೈವೇ ತಲುಪಲು ಕೆಳಸೇತುವೆಯಿಂದ ಎರಡು ಬದಿಯಲ್ಲಿ ಸುಮಾರು ಒಂದು ಕಿಮೀ ದೂರದವರೆಗೆ ಸಾಗಬೇಕು. ರಾತ್ರಿ ವೇಳೆ ಕೆಎಸ್‌ ಆರ್‌ಟಿಸಿ ಹಾಗೂ ಇತರೆ ಬಸ್‌ಗಳು ಗ್ರಾಮದ ಒಳಗೆ ಬಾರದೆ ಬೈಪಾಸ್‌ನಲ್ಲೇ ಪ್ರಯಾಣಿಕರನ್ನು ಇಳಿಸಿ ಹೋಗುವುದು ಸಾಮಾನ್ಯವಾಗಿದೆ. ಮೆಟ್ಟಿಲುಗಳಿಲ್ಲದ ಕೆಳಸೇತುವೆಯಲ್ಲಿ ಜನರು ರಾತ್ರಿ ವೇಳೆ ಬೈಪಾಸ್‌ನಲ್ಲಿ ಬಸ್‌ ಇಳಿದರೆ ಕೆಳಸೇತುವೆಯಿಂದ ಎತ್ತರಿಸಿ ಇಳಿಜಾರು ಮಾಡಲಾಗಿರುವ ಸ್ಥಳದಲ್ಲಿ ಸುಮಾರು ಒಂದು ಕಿಮೀ ದೂರ ಇಳಿಯಬೇಕು. ಇದರಿಂದ ರೋಗಿಗಳು, ವೃದ್ಧರು ಎಂಬ ಭೇದವಿಲ್ಲದೆ ಕತ್ತಲೆಯಲ್ಲಿ ರಸ್ತೆಯಲ್ಲಿ ನಡೆದುಕೊಂಡು ಮನೆ ಸೇರಬೇಕಾದ ಸ್ಥಿತಿ ಇದೆ.

ಕೆಳಸೇತುವೆ ಉದ್ದಕ್ಕೂ ಇರುವ ರಸ್ತೆಯಲ್ಲಿ ಅಪಘಾತ ಸಂಭವಿಸಿದರೆ ಗಾಯಾಳುಗಳನ್ನು ಸಾಗಿಸಲು ಸುಮಾರು ಒಂದೆರಡು ಕಿಮೀ ದೂರದ ರಸ್ತೆಯನ್ನು ಸುತ್ತು ಹಾಕಬೇಕು. ಇದರಿಂದ ಸಮಯ ವಿಳಂಬತೆಯ ಸಮಸ್ಯೆಯನ್ನೂ ಎದುರಿಸಬೇಕಿದೆ. ಕೆಳಸೇತುವೆ ಬಳಿ ಮೆಟ್ಟಿಲುಗಳ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗುವುದರಿಂದ ಮೆಟ್ಟಿಲುಗಳ ಸೌಲಭ್ಯವನ್ನು ಹೈವೇ ಪ್ರಾಧಿಕಾರ ಒದಗಿಸಬೇಕು ಎಂಬುದು ಸುತ್ತಮುತ್ತಲಿನ ಗ್ರಾಮಸ್ಥರ ಒತ್ತಾಯ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.