ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಿಲ್ಲ ಆವರಣ ಗೋಡೆ!

ದಾರಿ ಹೋಕರ ತಂಗುದಾಣವಾಗಿ ಮಾರ್ಪಾಟು

Team Udayavani, Feb 15, 2020, 1:05 PM IST

15-February-12

ಭರಮಸಾಗರ: ರಾಷ್ಟ್ರೀಯ ಹೆದ್ದಾರಿ 4ರ ಲಕ್ಷ್ಮೀಸಾಗರ ಗೇಟ್‌ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಟ್ಟಿ ಐದಾರು ವರ್ಷಗಳೇ ಕಳೆದರೂ ಆಸ್ಪತ್ರೆ ಕಟ್ಟಡ ಸುರಕ್ಷತೆ ಹಿನ್ನೆಲೆಯಲ್ಲಿ ಕಾಂಪೌಂಡ್‌ ಗೋಡೆ ನಿರ್ಮಾಣ ಮಾಡಲಾಗಿಲ್ಲ.

ಆರ್‌ಐಡಿಎಫ್‌ನ 15ನೇ ಅನುದಾನದ ಯೋಜನೆಯಡಿ ಬರೋಬ್ಬರಿ 55 ಲಕ್ಷ ವೆಚ್ಚದಲ್ಲಿ ಇಲ್ಲಿನ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಸುಸಜ್ಜಿತ ಕಟ್ಟಡವನ್ನು ಚಿತ್ರದುರ್ಗ ನಿರ್ಮಿತಿ ಕೇಂದ್ರದ ವತಿಯಿಂದ ಕಟ್ಟಲಾಗಿದೆ. ನಿತ್ಯ ಇಲ್ಲಿನ ಆಸ್ಪತ್ರೆಯ ಸೇವೆಗಳನ್ನು ಬಯಸಿ ಸುತ್ತಮುತ್ತಲಿನ ಲಕ್ಷ್ಮೀಸಾಗರ, ಐನಹಳ್ಳಿ, ಬ್ಯಾಲಾಳು, ಯಳಗೋಡು ಸೇರಿದಂತೆ ನಾನಾ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಳ್ಳಿಗಳ ಜನರು ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಇಲ್ಲಿನ ಕಟ್ಟಡದಲ್ಲಿ ಕಳೆದ ಕೆಲ ವರ್ಷಗಳ ಹಿಂದೆ ಆಸ್ಪತ್ರೆ ಪರಿಕರಗಳನ್ನು ಹೊತ್ತೂಯ್ದು ಆಸ್ಪತ್ರೆ ಕಟ್ಟಡದ ಕೆಲ ಭಾಗಗಳಿಗೆ ಹಾನಿ ಮಾಡಿದ್ದ ಪ್ರಕರಣ ನಡೆದಿತ್ತು. ಈ ಕುರಿತು ಅಂದಿನ ಟಿಎಚ್‌ಒ ಆಗಿದ್ದ ಈಗ ಡಿಎಚ್‌ಒ ಆಗಿರುವ ಡಾ.ಪಾಲಾಕ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಆ ಬಳಿಕ ಆಸ್ಪತ್ರೆ ಕಟ್ಟಡದ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಕಬ್ಬಿಣದ ಗೇಟ್‌ ಗಳನ್ನು ಗ್ರಾಮ ಪಂಚಾಯತ್‌ ಅನುದಾನದಲ್ಲಿ ನಿರ್ಮಿಸಿಕೊಡಲಾಗಿತ್ತು. ಆಸ್ಪತ್ರೆ ಬಳಿ 108 ಅಂಬ್ಯುಲೆನ್ಸ್‌ ವಾಹನ ಕೂಡ ರಾತ್ರಿ ವೇಳೆ ನಿಲುಗಡೆ ಮಾಡಲಾಗುತ್ತಿದೆ. ಹೇಳಿಕೇಳಿ ಹೈವೇ ರಸ್ತೆಗೆ ಹೊಂದಿಕೊಂಡಿರುವ ಈ ಆಸ್ಪತ್ರೆ ಆವರಣದಲ್ಲಿ ಹೈವೇ ದಾರಿಹೋಕ ಬುದ್ಧಿ ಮಾಂದ್ಯರು ಸೇರಿದಂತೆ ಇತರರು ಇಲ್ಲಿ ರಾತ್ರಿ ವೇಳೆ ತಂಗುವುದು ಇದೆ. ಅಲ್ಲದೆ ಕೆಲ ಪುಡಾರಿಗಳು ಇಲ್ಲಿನ ಸ್ಥಳದಲ್ಲಿ ಮದ್ಯ ಸೇವಿಸಿ, ಗುಟ್ಕಾ ತಿಂದು ಎಲ್ಲೆಂದರಲ್ಲಿ ಉಗಿಯುವದರಿಂದ ಆಸ್ಪತ್ರೆ ಆವರಣದಲ್ಲಿ ಗಲೀಜು ಸೃಷ್ಟಿಯಾಗುತ್ತಿದೆ. ಆಸ್ಪತ್ರೆ ಕಟ್ಟಡ ರಜೆ ದಿನಗಳಲ್ಲಿ ಹೈವೇ ದಾರಿಹೋಕರ ತಂಗುದಾಣವಾಗಿ ಬಿಟ್ಟಿದೆ.

ಅಲ್ಲದೆ ಆವರಣದಲ್ಲಿ ದನಕರುಗಳು ಬರುವುದರಿಂದ ಗಿಡಗಳ ಉಳಿವಿಗೆ ತೊಂದರೆ ಆಗುತ್ತಿದೆ. ಪಲ್ಸ್‌ ಪೋಲೀಯೋ ಇತರೆ ರಾಷ್ಟ್ರೀಯ ಕಾರ್ಯಕ್ರಮಗಳ ವೇಳೆ ಆಸ್ಪತ್ರೆಗೆ ಮುಂಜಾನೆಗೆ ಆಗಮಿಸಬೇಕಾದ ಆರೋಗ್ಯ ಸಿಬ್ಬಂದಿಗೆ ಇಲ್ಲಿನ ಆಸ್ಪತ್ರೆ ಆವರಣಕ್ಕೆ ಬರಲು ಭಯ ಕಾಡುತ್ತದೆ. ಆಸ್ಪತ್ರೆ ಕಟ್ಟಡಕ್ಕೆ ಸುಸಜ್ಜಿತ ಕಾಂಪೌಂಡ್‌ ಗೋಡೆ ನಿರ್ಮಿಸುವ ಕುರಿತು ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲೂ ಚರ್ಚೆ ಆಗಿದೆ. ಈ ಬಗ್ಗೆ ಅನುದಾನ ನೀಡುವಂತೆ ಗ್ರಾಪಂನಿಂದ ಜಿಲ್ಲಾ ಪಂಚಾಯತ್‌ ಅನುದಾನಕ್ಕೆ ಬೇಡಿಕೆ ಕೂಡ ಸಲ್ಲಿಸಲಾಗಿದೆ. ಷಟ³ಥ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಕಾಮಗಾರಿ ಆಸ್ಪತ್ರೆ ಸನಿಹದಲ್ಲೇ ನಡೆಯುತ್ತಿದೆ. ಹೈವೇ ಕಾಮಗಾರಿ ಬಳಿಕ ಕಾಂಪೌಂಡ್‌ ನಿರ್ಮಾಣಕ್ಕೆ ಮುಂದಾಗಬೇಕಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಆಸ್ಪತ್ರೆ ಕಟ್ಟಡದ ಸುತ್ತ ಕಾಂಪೌಂಡ್‌ ನಿರ್ಮಾಣಕ್ಕಾಗಿ ಗ್ರಾಪಂಗೆ ಮನವಿ ಸಲ್ಲಿಸಲಾಗಿತ್ತು. ಹೈವೇ ರಸ್ತೆ ಕಾಮಗಾರಿ ಮುಗಿದ ಬಳಿಕ ಕಾಂಪೌಂಡ್‌ ನಿರ್ಮಿಸಿಕೊಡುತ್ತೇವೆ ಎಂಬುದಾಗಿ ತಾಪಂ ಸದಸ್ಯರು ತಿಳಿಸಿದ್ದಾರೆ. ಒಮ್ಮೆ ಆಸ್ಪತ್ರೆಯಲ್ಲಿ ಕಳ್ಳತನ ಆದಾಗ ಕಟ್ಟಡದ ಬಾಗಿಲುಗಳಿಗೆ ಕಬ್ಬಿಣದ ಬಾಗಿಲುಗಳನ್ನು ಗ್ರಾಪಂನವರು ನಿರ್ಮಿಸಿಕೊಟ್ಟಿದ್ದರು.
ಡಾ.ಜಯಶ್ರೀ,
ವೈದ್ಯಾಧಿಕಾರಿಗಳು, ಲಕ್ಷ್ಮೀಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರ.

ಎಚ್‌.ಬಿ.ನಿರಂಜನ ಮೂರ್ತಿ

ಟಾಪ್ ನ್ಯೂಸ್

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

ಯಡಿಯೂರಪ್ಪ

Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.