ಸಿಸಿ ರಸ್ತೆ ಕಾಮಗಾರಿ ಮುಗಿಯೋದ್ಯಾವಾಗ?

ಅಳಗವಾಡಿ-ಓಬಳಾಪುರ ಮುಖ್ಯ ರಸ್ತೆ ಕಾಮಗಾರಿ ಸ್ಥಗಿತಅರೆಬರೆ ಕೆಲಸದಿಂದ ಸಂಚಾರಕ್ಕೆ ಸಮಸ್ಯೆ

Team Udayavani, Feb 9, 2020, 12:55 PM IST

09-February-11

ಭರಮಸಾಗರ: ಅಳಗವಾಡಿ-ಓಬಳಾಪುರ ಗ್ರಾಮಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆಯ ನಡುವಿನ 400 ಮೀಟರ್‌ ಉದ್ದದ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿಸುವ ಕಾಮಗಾರಿ ಅರ್ಧಕ್ಕೆ ನಿಂತಿದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ಜನರು ತೊಂದರೆ ಎದುರಿಸಬೇಕಾಗಿದೆ.

ಕಳೆದ ಎರಡು ತಿಂಗಳುಗಳ ಹಿಂದೆ ಇಲ್ಲಿನ ರಸ್ತೆಯನ್ನು 30 ಲಕ್ಷ ವೆಚ್ಚದಲ್ಲಿ 10 ಇಂಚು ದಪ್ಪನೆಯ 18 ಅಡಿ ಅಗಲದ ಸಿಸಿ ರಸ್ತೆಯನ್ನಾಗಿಸುವ ಕಾಮಗಾರಿ ಭರದಿಂದ ನಡೆದಿತ್ತು. ಕಾಮಗಾರಿ ಇನ್ನೇನು ಮುಗಿದೇ ಬಿಟ್ಟಿತು ಎಂದು ಜನರು ನಿಟ್ಟುಸಿರು ಬಿಡುವ ವೇಳೆಗೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಇದರಿಂದ ರಸ್ತೆಯ 400 ಮೀಟರ್‌ ಉದ್ದಕ್ಕೂ ಒಂದು ಹಂತದಲ್ಲಿ 9 ಅಡಿ ಅಗಲಕ್ಕೆ ಸಿಸಿ ರಸ್ತೆಯನ್ನು ನಿರ್ಮಾಣ ಮಾಡಿದ್ದರೆ ಮತ್ತೂಂದು ಭಾಗದಲ್ಲಿ (9 ಅಡಿ) ಮೆಟಲಿಂಗ್‌ ಕಾಮಗಾರಿ ನಡೆಸಿ ಕಾಂಕ್ರಿಟ್‌ ಹಾಕದೆ ಕೈಬಿಡಲಾಗಿದೆ. ಇದರಿಂದ 400 ಮೀಟರ್‌ ರಸ್ತೆಯನ್ನು ಎರಡು ಭಾಗಗಳನ್ನಾಗಿ ಮಾಡಲಾಗಿರುವ ಈ ಅರೆಬರೆ ಕಾಮಗಾರಿಯಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಬೇಕಾಗಿದೆ. ಸಿಸಿ ರಸ್ತೆ ಎತ್ತರಿಸಿರುವ ಭಾಗಕ್ಕೂ ಇನ್ನೊಂದು ತಗ್ಗಿನ ಭಾಗದ ರಸ್ತೆಗೂ ಹತ್ತು ಇಂಚು ಅಂತರವಿದೆ. ಇದರಿಂದ ವಾಹನಗಳ ಓಡಾಟವನ್ನು ಅತ್ಯಂತ ಜಾಗರೂಕತೆಯಿಂದ ಮಾಡಬೇಕಾಗಿದೆ. ಸ್ವಲ್ಪ ಎಚ್ಚರ ತಪ್ಪಿದರೆ ಅನಾಹುತ ಕಟ್ಟಿಟ್ಟ ಬುತ್ತಿ.

ಕಳೆದ ಎರಡು ತಿಂಗಳಿಂದ ರೈತರು ಕೆರೆಗಳಿಂದ ತೆಗೆದ ಹೂಳನ್ನು ಜಮೀನುಗಳಿಗೆ ಟ್ರಾÂಕ್ಟರ್‌ ಮತ್ತು ಲಾರಿಗಳ ಮೂಲಕ ಅರೆಬರೆ ಕಾಮಗಾರಿ ನಡೆದಿರುವ ಸಿಸಿ ರಸ್ತೆ ಮೂಲಕವೇ ಸಾಗಿಸುತ್ತಿದ್ದಾರೆ. ಅಲ್ಲದೆ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳ ನೂರಾರು ಹಳ್ಳಿಗಳನ್ನು ತಲುಪಲು ಈ ಮಾರ್ಗ ಹತ್ತಿರದ ಮಾರ್ಗವಾಗಿದೆ. ಹೀಗಾಗಿ ನಿತ್ಯ ಈ ರಸ್ತೆಯಲ್ಲಿ ವಾಹನಗಳ ದಟ್ಟಣೆ ಇದ್ದೇ ಇರುತ್ತದೆ.

ಇನ್ನಾದರೂ ಇಲ್ಲಿನ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಲೋಕೋಪಯೋಗಿ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಅಳಗವಾಡಿ, ಓಬಳಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರ ಆಗ್ರಹ.

ಯಕ್ಷಪ್ರಶ್ನೆಯಾದ ದಿಢೀರ್‌ ಸ್ಥಗಿತ
ಹಲವು ದಶಕಗಳಿಂದ ಇಲ್ಲಿನ ರಸ್ತೆ ಭೂ ವಿವಾದದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾಣದೆ ಜನರು ರೋಸಿ ಹೋಗಿದ್ದರು. ಇನ್ನೇನು ಎಲ್ಲಾ ಸಮಸ್ಯೆಗಳು ಪೂರ್ಣಗೊಂಡು ರಸ್ತೆ ಸಿದ್ಧವಾಯ್ತು ಎನ್ನುವ ವೇಳೆಗೆ ಅದ್ಯಾವ ಗ್ರಹಣ ಕಾಮಗಾರಿಗೆ ಬಡಿಯಿತೋ ಗೊತ್ತಿಲ್ಲ. ಕಳೆದ ಎರಡು ತಿಂಗಳುಗಳಿಂದ ಕಾಮಗಾರಿ ಏಕಾಏಕಿ ಸ್ಥಗಿತಗೊಂಡಿದೆ. ಹೇಳಿ ಕೇಳಿ ಮಾರ್ಚ್‌ ಕೊನೆ ಬರುವ ವೇಳೆಗೆ ಎಲ್ಲಾ ಕಾಮಗಾರಿಗಳು ಚುರುಕು ಪಡೆಯುತ್ತವೆ. ಆದರೆ ಇಲ್ಲಿನ ಇಲ್ಲಿನ ಕಾಮಗಾರಿ ಮಾತ್ರ ಶುರುವಾಗಿ ದಿಢೀರ್‌ ಸ್ಥಗಿತಗೊಂಡಿರುವುದು ಯಕ್ಷಪ್ರಶ್ನೆಯಾಗಿದೆ.

„ಎಚ್‌.ಬಿ. ನಿರಂಜನ ಮೂರ್ತಿ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

Minister zameer ahmed khan hospitalized at chitradurga

Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.